Andolana originals

ಬುದ್ಧನ ಪ್ರತಿಮೆ ಮುಂದೆಯೇ ಮದ್ಯ ಮಾರಾಟ!

ನಂಜನಗೂಡು: ಸಾರ್ವಜನಿಕರು, ಸಂಘಟನೆಗಳವರಿಂದ ತೀವ್ರ ಆಕ್ರೋಶ

ನಂಜನಗೂಡು: ದುಶ್ಚಟಗಳನ್ನು ತ್ಯಜಿಸಿ ಎಂದು ಲೋಕಕ್ಕೆ ಸಂದೇಶ ಸಾರಿದ ಮಹಾ ದಾರ್ಶನಿಕ ಗೌತಮ ಬುದ್ಧರ ಆಳೆತ್ತರದ ಪ್ರತಿಮೆ ಪ್ರತಿಷ್ಠಾಪಿಸಿ ಅದರ ಮುಂದೆಯೇ  ಮದ್ಯ ಮಾರಾಟ ಮಾಡುತ್ತಿರುವ ಘಟನೆ ಮಹದೇವ ನಗರದಲ್ಲಿ ನಡೆದಿದ್ದು, ಇದಕ್ಕೆ ನಂಜನಗೂಡಿನ ಅನೇಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಮದ್ಯ ಮಾರಾಟ ಮಳಿಗೆ ಪಕ್ಕದಲ್ಲೇ ಕಲ್ಯಾಣ ಮಂಟಪವೂ ಇದ್ದು, ಅಲ್ಲಿನ ಶುಭ ಕಾರ್ಯಗಳಲ್ಲಿ ಮದ್ಯದ ಸಮಾರಾಧನೆ ಅಕ್ರಮವಾಗಿ ನಡೆಯುತ್ತಿರುವುದು ಜಗಜ್ಜಾಹೀರಾಗಿದ್ದು, ಈ ಮದ್ಯದ ಅಂಗಡಿಯನ್ನು  ಸ್ಥಳಾಂತರಿಸುವಂತೆ ಅಧಿಕಾರಿಗಳನ್ನು ಮಹದೇವನಗರದ ನಿವಾಸಿಗಳು  ಆಗ್ರಹಿಸಿದ್ದಾರೆ.

ತಾಲ್ಲೂಕಿನ ಬದನವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮರಾಜನಗರ ಹೆದ್ದಾರಿಯಲ್ಲಿರುವ ಮಹದೇವನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ  ಕಲ್ಯಾಣ ಮಂಟಪದ ಕಿಟಕಿ ತೆಗೆದು ಲಿಕ್ಕರ್ ಅಂಗಡಿಯಿಂದ ಲಿಕ್ಕರ್ ಪಡೆಯಲಾಗುತ್ತದೆ ಎಂದು ಸಂಘಟಕರು ದೂರಿನಲ್ಲಿ ಆರೋಪಿಸಿದ್ದಾರೆ.

ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗವೇ ಗೌತಮ ಬುದ್ಧನ ಪ್ರತಿಮೆ ನಿರ್ಮಿಸಿ ಆ ಮಹಾ ದಾರ್ಶನಿಕನಿಗೆ  ಅಗೌರವ ಸೂಚಿಸಿ, ಅಪಚಾರ ಮಾಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್‌ಗೆ ನೀಡಿದ ಅನುಮತಿ ಅವಧಿ ಪೂರ್ಣಗೊಂಡಿದ್ದರೂ ಅದರ ಪರವಾನಗಿಯನ್ನು  ನವೀಕರಿಸದೆ ವಹಿವಾಟು ನಡೆಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಈಗಾಗಲೇ ಅಬಕಾರಿ ಇಲಾಖೆಗೆ ದೂರು ನೀಡಿದ್ದು, ಬಾರ್ ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಮುಚ್ಚಬೇಕು. ಇಲ್ಲವಾದಲ್ಲಿ ಗ್ರಾಮಸ್ಥರ ಜೊತೆಗೂಡಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

” ಬದನವಾಳು ಗ್ರಾಮ ಪಂಚಾಯಿತಿಯಿಂದ ಹೋಟೆಲ್ ಗೆ ಪಡೆದ ಅನುಮತಿ ಅವಧಿಯೂ ಮುಗಿದಿದ್ದು ಅದನ್ನು ನವೀಕರಿಸದೆ ವ್ಯಾಪಾರ ಮಾಡಲಾಗುತ್ತಿದೆ.  ಮದ್ಯದ ಅಂಗಡಿಯ ಮುಂಭಾಗದಲ್ಲೇ ಗೌತಮ ಬುದ್ಧರ ಪ್ರತಿಮೆಯನ್ನು  ಸ್ಥಾಪಿಸಿ ಮದ್ಯ ಮಾರಾಟ ಮಾಡುತ್ತಿರುವುದು ಬುದ್ಧನಿಗೆ ಮಾಡುತ್ತಿರುವ ಅಪಮಾನ. ಮದ್ಯ ಮಾರಾಟ ನಿಲ್ಲಿಸದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ.”

 -ರಂಗದಾಸ, ಮಾಜಿ ಸದಸ್ಯ,  ಬದನವಾಳು  ಗ್ರಾಪಂ

ಆಂದೋಲನ ಡೆಸ್ಕ್

Recent Posts

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

17 mins ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

2 hours ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

4 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

4 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

4 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

5 hours ago