Andolana originals

ಬುದ್ಧನ ಪ್ರತಿಮೆ ಮುಂದೆಯೇ ಮದ್ಯ ಮಾರಾಟ!

ನಂಜನಗೂಡು: ಸಾರ್ವಜನಿಕರು, ಸಂಘಟನೆಗಳವರಿಂದ ತೀವ್ರ ಆಕ್ರೋಶ

ನಂಜನಗೂಡು: ದುಶ್ಚಟಗಳನ್ನು ತ್ಯಜಿಸಿ ಎಂದು ಲೋಕಕ್ಕೆ ಸಂದೇಶ ಸಾರಿದ ಮಹಾ ದಾರ್ಶನಿಕ ಗೌತಮ ಬುದ್ಧರ ಆಳೆತ್ತರದ ಪ್ರತಿಮೆ ಪ್ರತಿಷ್ಠಾಪಿಸಿ ಅದರ ಮುಂದೆಯೇ  ಮದ್ಯ ಮಾರಾಟ ಮಾಡುತ್ತಿರುವ ಘಟನೆ ಮಹದೇವ ನಗರದಲ್ಲಿ ನಡೆದಿದ್ದು, ಇದಕ್ಕೆ ನಂಜನಗೂಡಿನ ಅನೇಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಮದ್ಯ ಮಾರಾಟ ಮಳಿಗೆ ಪಕ್ಕದಲ್ಲೇ ಕಲ್ಯಾಣ ಮಂಟಪವೂ ಇದ್ದು, ಅಲ್ಲಿನ ಶುಭ ಕಾರ್ಯಗಳಲ್ಲಿ ಮದ್ಯದ ಸಮಾರಾಧನೆ ಅಕ್ರಮವಾಗಿ ನಡೆಯುತ್ತಿರುವುದು ಜಗಜ್ಜಾಹೀರಾಗಿದ್ದು, ಈ ಮದ್ಯದ ಅಂಗಡಿಯನ್ನು  ಸ್ಥಳಾಂತರಿಸುವಂತೆ ಅಧಿಕಾರಿಗಳನ್ನು ಮಹದೇವನಗರದ ನಿವಾಸಿಗಳು  ಆಗ್ರಹಿಸಿದ್ದಾರೆ.

ತಾಲ್ಲೂಕಿನ ಬದನವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮರಾಜನಗರ ಹೆದ್ದಾರಿಯಲ್ಲಿರುವ ಮಹದೇವನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ  ಕಲ್ಯಾಣ ಮಂಟಪದ ಕಿಟಕಿ ತೆಗೆದು ಲಿಕ್ಕರ್ ಅಂಗಡಿಯಿಂದ ಲಿಕ್ಕರ್ ಪಡೆಯಲಾಗುತ್ತದೆ ಎಂದು ಸಂಘಟಕರು ದೂರಿನಲ್ಲಿ ಆರೋಪಿಸಿದ್ದಾರೆ.

ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗವೇ ಗೌತಮ ಬುದ್ಧನ ಪ್ರತಿಮೆ ನಿರ್ಮಿಸಿ ಆ ಮಹಾ ದಾರ್ಶನಿಕನಿಗೆ  ಅಗೌರವ ಸೂಚಿಸಿ, ಅಪಚಾರ ಮಾಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್‌ಗೆ ನೀಡಿದ ಅನುಮತಿ ಅವಧಿ ಪೂರ್ಣಗೊಂಡಿದ್ದರೂ ಅದರ ಪರವಾನಗಿಯನ್ನು  ನವೀಕರಿಸದೆ ವಹಿವಾಟು ನಡೆಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಈಗಾಗಲೇ ಅಬಕಾರಿ ಇಲಾಖೆಗೆ ದೂರು ನೀಡಿದ್ದು, ಬಾರ್ ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಮುಚ್ಚಬೇಕು. ಇಲ್ಲವಾದಲ್ಲಿ ಗ್ರಾಮಸ್ಥರ ಜೊತೆಗೂಡಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

” ಬದನವಾಳು ಗ್ರಾಮ ಪಂಚಾಯಿತಿಯಿಂದ ಹೋಟೆಲ್ ಗೆ ಪಡೆದ ಅನುಮತಿ ಅವಧಿಯೂ ಮುಗಿದಿದ್ದು ಅದನ್ನು ನವೀಕರಿಸದೆ ವ್ಯಾಪಾರ ಮಾಡಲಾಗುತ್ತಿದೆ.  ಮದ್ಯದ ಅಂಗಡಿಯ ಮುಂಭಾಗದಲ್ಲೇ ಗೌತಮ ಬುದ್ಧರ ಪ್ರತಿಮೆಯನ್ನು  ಸ್ಥಾಪಿಸಿ ಮದ್ಯ ಮಾರಾಟ ಮಾಡುತ್ತಿರುವುದು ಬುದ್ಧನಿಗೆ ಮಾಡುತ್ತಿರುವ ಅಪಮಾನ. ಮದ್ಯ ಮಾರಾಟ ನಿಲ್ಲಿಸದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ.”

 -ರಂಗದಾಸ, ಮಾಜಿ ಸದಸ್ಯ,  ಬದನವಾಳು  ಗ್ರಾಪಂ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago