Andolana originals

ಸೆ.1ರಿಂದ ಜಾನುವಾರು ಗಣತಿ

ಸಿದ್ದರಾಮನಹುಂಡಿಯಲ್ಲಿ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ

ಮೈಸೂರು: ದೇಶದಾದ್ಯಂತ ಹಸು, ನಾಯಿ, ಕುರಿ, ಆಡು ಸೇರಿದಂತೆ 21ನೇ ಜಾನುವಾರು ಗಣತಿ ಸೆ.1ರಂದು ಆರಂಭಗೊಳ್ಳಲಿದೆ.

ನಾಲ್ಕು ತಿಂಗಳು ನಡೆಯಲಿರುವ ಜಾನು ವಾರು ಗಣತಿಗಾಗಿ ಮೈಸೂರು ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆ 180 ಮಂದಿ ಸಿಬ್ಬಂದಿಯನ್ನು ನಿಯೋಜಿಸಿದೆ.

ಮುಖ್ಯಮ೦ತ್ರಿ ಸಿದ್ದರಾಮಯ್ಯ ಅವರು ಈ ಬೃಹತ್ ಗಣತಿ ಕಾರ್ಯ ಕ್ರಮಕ್ಕೆ ಸೆ.1 ರಂದು ತಮ್ಮ ಸ್ವ ಗ್ರಾಮ ಮೈಸೂರು ತಾಲ್ಲೂಕಿನ ಸಿದ್ದರಾಮನ ಹುಂಡಿಯಲ್ಲಿ ಚಾಲನೆ ನೀಡುವರು. ಇದಕ್ಕಾಗಿ ಜಿಲ್ಲಾಡಳಿತ ಸಿದ್ಧತೆಗಳನ್ನು ಕೈಗೊಂಡಿದೆ.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ ಹಾಗೂ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಪಶುಸಂಗೋಪನೆ ಇಲಾಖೆಯ 159 ಮಂದಿ ಸಿಬ್ಬಂದಿ ಹಾಗೂ 30 ಮಂದಿ ಮೇಲ್ವಿ ಚಾರಕರ ನೇತೃತ್ವದಲ್ಲಿ ಗಣತಿ ಕಾರ್ಯ ನಡೆಯಲಿದೆ.

ಗಣತಿ ವೇಳೆ ಜಿಲ್ಲಾದ್ಯಂತ ಇರುವ ಹಸು, ಎಮ್ಮೆ, ಕುರಿ, ಆಡು, ನಾಯಿ, ಮೊಲ, ಕೋಳಿ, ಹಂದಿ, ಬಿಡಾಡಿ ನಾಯಿಗಳು, ಬಿಡಾಡಿ ರಾಸುಗಳು, ದೇವಾಲಯಗಳಸುಪರ್ದಿಯಲ್ಲಿ ಇರುವ ಆನೆಗಳ ಎಣಿಕೆ ನಡೆಯಲಿದೆ.

ಸ್ಟಾರ್ಟ್‌ ಫೋನ್ ಬಳಸಿ ಗಣತಿ: ವಿಶೇಷ ವೆಂದರೆ ಇದೇ ಪ್ರಥಮ ಬಾರಿಗೆ ಸ್ಟಾರ್ಟ್ ಫೋನ್ ಬಳಸಿ ಗಣತಿ ನಡೆಸಲಾಗುತ್ತಿರು ವುದು. ಇದಕ್ಕಾಗಿ ಕೇಂದ್ರ ಪಶುಸಂಗೋಪನಾ ಸಚಿವಾಲಯ ’21 ಫಸ್ಟ್ ಲೈವ್ ಸ್ಟಾಕ್ ಸೆನ್ಸಸ್ ಎನ್ನುವ ಪ್ರತ್ಯೇಕ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ. ಈ ಅಪ್ಲಿಕೇಶನ್ ಬಳಸುವ ಕುರಿತು ಸಿಬ್ಬಂದಿಗೆ ಈಗಾಗಲೇ ತರಬೇತಿ ಯನ್ನೂ ನೀಡಲಾಗಿದೆ.

ಸಿಬ್ಬಂದಿಗೆ ಗುರುತಿನ ಚೀಟಿ: ಗಣತಿದಾರರು ಜಿಲ್ಲೆಯ ಎಲ್ಲಾ ಗ್ರಾಮಗಳು ಹಾಗೂ ನಗರ ಪ್ರದೇಶದಲ್ಲಿ ಮನೆ ಮನೆಗಳಿಗೆ ತೆರಳಿ ಗಣತಿ ಕಾರ್ಯ ನಡೆಸುವರು. ಹೀಗಾಗಿ ಸಿಬ್ಬಂದಿಗೆ ಇಲಾಖೆ ವತಿಯಿಂದ ಫೋಟೊ, ಮೊಬೈಲ್ ಸಂಖ್ಯೆ ಹೊಂದಿರುವ ಗುರುತಿನ ಚೀಟಿ ನೀಡಲಾಗಿದೆ.

ಏನೇನು ಮಾಹಿತಿ?: ಜಾನುವಾರು ಗಣತಿ ಸಂದರ್ಭದಲ್ಲಿ, ರೈತರ ಮನೆಯಲ್ಲಿ ಇರುವ ಜಾನುವಾರುಗಳ ತಳಿ, ವಯಸ್ಸು, ಎಷ್ಟು ರೈತ ಮಹಿಳೆಯರು ಹೈನುಗಾರಿಕೆ, ಕೋಳಿ ಸಾಕಾಣಿಕೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಈ ಮೂಲಕ ಸರ್ಕಾರಗಳು ಜಾನುವಾರುಗಳ ರೋಗ ನಿಯಂತ್ರಿಸಲು, ಗುಣಮಟ್ಟ ಸುಧಾರಿ ಸಲು, ವಿಸ್ತರಣೆ, ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಮುಂದಿನ ಯೋಜನೆ ಸಿದ್ಧಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ರೈತರಿಗೆ ಹಾಗೂ ಹೈನುಗಾರಿಕೆ ಕ್ಷೇತ್ರಕ್ಕೆ ಅಗತ್ಯವಾದ ನೀತಿ ಕಾರ್ಯಕ್ರಮ ರೂಪಿಸುವುದಕ್ಕೆ ಗಣತಿಯ ಅಂಕಿ-ಅಂಶಗಳನ್ನು ಬಳಸಲಾಗುವುದು.

ಜಿಲ್ಲೆಯ ವ್ಯಾಪ್ತಿಯಲ್ಲಿ ಗೋ ಶಾಲೆಗಳಿದ್ದರೆ ಇದರ ಬಗ್ಗೆ ಕೂಡ ವಾಹಿತಿ ಪಡೆಯಲಾಗುತ್ತದೆ. 10ಕ್ಕಿಂತ ಹೆಚ್ಚು ದನಗಳಿದ್ದರೆ, 1,000ಕ್ಕಿಂತ ಹೆಚ್ಚು ಕೋಳಿ ಸಾಕಿದ್ದರೆ, 50ರ ಮೇಲ್ಪಟ್ಟು ಆಡುಗಳನ್ನು ಸಾಕಾಣಿಕ ಮಾಡುತ್ತಿದ್ದರೆ ಅವುಗಳನ್ನುಫಾರಂಎಂದುಪರಿಗಣಿಸಲಾಗುತ್ತದೆ. ಪಶು ಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ, ಮೀನುಗಾರಿಕೆ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು ಜಾನುವಾರು ಗಣತಿಯನ್ನು ನಡೆಸುತ್ತದೆ.

ಜಾನುವಾರು ಗಣತಿ ಮೂಲಕ ಎಲ್ಲ ಸಾಕು ಪ್ರಾಣಿಗಳು ಮತ್ತು ದನ, ಎಮ್ಮೆ, ಕುರಿ, ಮೇಕೆ, ಹಂದಿ, ಕುದುರೆ, ಹೇಸರಗತ್ತೆ, ಕತ್ತೆ, ಒಂಟೆ, ನಾಯಿ, ಮೊಲ, ಆನೆ ಮತ್ತು ಕೋಳಿ ಪ್ರಭೇದ( ಬಾತುಕೋಳಿ) ಗಳಂತಹ ಒಟ್ಟು 16 ಜಾತಿಯ ಪ್ರಾಣಿಗಳ ಅಂಕಿ ಸಂಖ್ಯೆಯನ್ನು ಸಂಗ್ರಹಿಸಲಾಗುವುದು.

5 ವರ್ಷಗಳಿಗೊಮ್ಮೆ ಜಾನುವಾರು ಗಣತಿ: ಜಾನುವಾರು ಗಣತಿ ಐದು ವರ್ಷಗಳಿಗೆ ಒಮ್ಮೆ ನಡೆಯುತ್ತದೆ. ಇದು 1919 ರಲ್ಲಿ ಆರಂಭವಾಯಿತು. ಕೊನೆಯದಾಗಿ 2019ರಲ್ಲಿ ಗಣತಿ ನಡೆಸಲಾಗಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇರುವ ಜಾನುವಾರುಗಳ ಗಣತಿ ಮೂಲಕ ಅವುಗಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಗಳು ಯೋಜನೆಗಳನ್ನು ರೂಪಿಸುತ್ತವೆ. . ಗುರುತಿನ ಚೀಟಿ ಹೊಂದಿರುವ ಗಣತಿದಾರರು ಪ್ರತಿ ಮನೆಗೂ ಬರಲಿದ್ದಾರೆ. ಈ ವೇಳೆ ಸಾರ್ವಜನಿಕರು ಅವರೊಂದಿಗೆ ಸಹಕರಿಸಿ ಮಾಹಿತಿ ನಿಡಬೇಕು.
-ಡಾ.ನಾಗರಾಜು, ಉಪ ನಿರ್ದೇಶಕರು, ಪಶು ಸಂಗೋಪನಾ ಇಲಾಖೆ, ಮೈಸೂರು.

ಪ್ರಥಮ ಬಾರಿಗೆ ಸ್ಮಾರ್ಟ್ ಫೋನ್ ಬಳಸಿ ಎಣಿಕೆ
• ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆಯ 180 ಸಿಬ್ಬಂದಿ ಬಳಕೆ ದೇಗುಲಗಳ ಸುಪರ್ದಿಯಲ್ಲಿರುವ ಆನೆಗಳ ಗಣತಿಯೂ ನಡೆಯಲಿದೆ
• ಮನೆ ಮನೆಗೆ ಬರಲಿದ್ದಾರೆ ಗಣತಿದಾರರು

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

Recent Posts

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

11 mins ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

12 mins ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

2 hours ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

2 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago