Andolana originals

ಓದುಗರ ಪತ್ರ: ಸದನದಲ್ಲಿ ಹಿತಕರ ಚರ್ಚೆ ನಡೆಯಲಿ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿ ಮೂರು ನಾಲ್ಕು ದಿನಗಳೇ ಕಳೆದರೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಿತಕರ ಚರ್ಚೆ ನಡೆಯದೇ ಗದ್ದಲದ ವಾತಾವರಣ ಉಂಟಾಗುತ್ತಿದೆ.

ಕಲಾಪ ಆರಂಭ ವಾಗುತ್ತಿದ್ದಂತೆ ವಿರೋಧ ಪಕ್ಷದವರು ಆಪರೇಷನ್ ಸಿಂಧೂರ, ಬಿಹಾರ ರಾಜ್ಯದ ಮತದಾರರ ಪಟ್ಟಿ ಪರಿಶೀಲನೆ ನಿರ್ಧಾರ ಮುಂತಾದ ವಿಷಯಗಳ ಬಗ್ಗೆ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸುತ್ತಿರುವುದರಿಂದ ಸಭಾಧ್ಯಕ್ಷರ ಸೂಚನೆಯ ಮೇರೆಗೆ ಉಭಯ ಸದನಗಳ ಕಲಾಪವನ್ನು ಪದೆ ಪದೇ ಮುಂದೂಡಲಾಗುತ್ತಿದೆ.

ಪ್ರತಿಯೊಂದು ಅಧಿವೇಶನದ ಸಂದರ್ಭದಲ್ಲಿಯೂ ವಿರೋಧಪಕ್ಷಗಳು ಯಾವುದಾದರೊಂದು ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವುದು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದು ನಡೆಯುತ್ತಲೇ ಇದೆ. ಆಪ ರೇಷನ್ ಸಿಂಧೂರದ ಬಗ್ಗೆ ನಡೆಯುವ ಚರ್ಚೆಯು ನಮ್ಮ ಸೇನಾ ಬಲವನ್ನು ಟೀಕಿಸುವ, ಸೈನಿಕರ ಸಾಮರ್ಥ್ಯವನ್ನು ಶಂಕಿಸುವ ರೀತಿಯಲ್ಲಿ ಇರದಿದ್ದರೆ ಉತ್ತಮ.

ಸದನದಲ್ಲಿ ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಎಲ್ಲ ಸಂಸದರು ತಪ್ಪದೇ ಪಾಲಿಸಿ, ಸದನದ ಹಿರಿಮೆಯನ್ನು ಎತ್ತಿ ಹಿಡಿಯುವುದು ಹಾಗು ಸಭಾಧ್ಯಕ್ಷರಿಗೆ ಗೌರವ ನೀಡಬೇಕು. ಪ್ರತಿಯೊಬ್ಬ ಸಂಸದರು ತಮ್ಮ ನಡವಳಿಕೆಯಿಂದ ಯಾರ ಮನಸ್ಸಿಗು ನೋವಾಗದಂತೆ ವರ್ತಿಸಿ ಸದನದ ಗೌರವವನ್ನು ಹೆಚ್ಚಿಸಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…

11 mins ago

ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಬಿಜೆಪಿ ಹುನ್ನಾರ: ಸಚಿವ ಭೋಸರಾಜು ಆಕ್ರೋಶ

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…

22 mins ago

ಸೆರೆ ಹಿಡಿದ ಹುಲಿಗಳನ್ನು ಬಿಆರ್‌ಟಿ ಅರಣ್ಯಕ್ಕೆ ಬಿಡದಂತೆ ಸಂಸದ ಸುನೀಲ್‌ ಬೋಸ್‌ ಸೂಚನೆ

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…

39 mins ago

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…

2 hours ago

ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…

2 hours ago

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ಪ್ರಕ್ರಿಯೆ ಆರಂಭ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌…

2 hours ago