Andolana originals

ಓದುಗರ ಪತ್ರ: ಸದನದಲ್ಲಿ ಹಿತಕರ ಚರ್ಚೆ ನಡೆಯಲಿ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿ ಮೂರು ನಾಲ್ಕು ದಿನಗಳೇ ಕಳೆದರೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಿತಕರ ಚರ್ಚೆ ನಡೆಯದೇ ಗದ್ದಲದ ವಾತಾವರಣ ಉಂಟಾಗುತ್ತಿದೆ.

ಕಲಾಪ ಆರಂಭ ವಾಗುತ್ತಿದ್ದಂತೆ ವಿರೋಧ ಪಕ್ಷದವರು ಆಪರೇಷನ್ ಸಿಂಧೂರ, ಬಿಹಾರ ರಾಜ್ಯದ ಮತದಾರರ ಪಟ್ಟಿ ಪರಿಶೀಲನೆ ನಿರ್ಧಾರ ಮುಂತಾದ ವಿಷಯಗಳ ಬಗ್ಗೆ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸುತ್ತಿರುವುದರಿಂದ ಸಭಾಧ್ಯಕ್ಷರ ಸೂಚನೆಯ ಮೇರೆಗೆ ಉಭಯ ಸದನಗಳ ಕಲಾಪವನ್ನು ಪದೆ ಪದೇ ಮುಂದೂಡಲಾಗುತ್ತಿದೆ.

ಪ್ರತಿಯೊಂದು ಅಧಿವೇಶನದ ಸಂದರ್ಭದಲ್ಲಿಯೂ ವಿರೋಧಪಕ್ಷಗಳು ಯಾವುದಾದರೊಂದು ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವುದು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದು ನಡೆಯುತ್ತಲೇ ಇದೆ. ಆಪ ರೇಷನ್ ಸಿಂಧೂರದ ಬಗ್ಗೆ ನಡೆಯುವ ಚರ್ಚೆಯು ನಮ್ಮ ಸೇನಾ ಬಲವನ್ನು ಟೀಕಿಸುವ, ಸೈನಿಕರ ಸಾಮರ್ಥ್ಯವನ್ನು ಶಂಕಿಸುವ ರೀತಿಯಲ್ಲಿ ಇರದಿದ್ದರೆ ಉತ್ತಮ.

ಸದನದಲ್ಲಿ ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಎಲ್ಲ ಸಂಸದರು ತಪ್ಪದೇ ಪಾಲಿಸಿ, ಸದನದ ಹಿರಿಮೆಯನ್ನು ಎತ್ತಿ ಹಿಡಿಯುವುದು ಹಾಗು ಸಭಾಧ್ಯಕ್ಷರಿಗೆ ಗೌರವ ನೀಡಬೇಕು. ಪ್ರತಿಯೊಬ್ಬ ಸಂಸದರು ತಮ್ಮ ನಡವಳಿಕೆಯಿಂದ ಯಾರ ಮನಸ್ಸಿಗು ನೋವಾಗದಂತೆ ವರ್ತಿಸಿ ಸದನದ ಗೌರವವನ್ನು ಹೆಚ್ಚಿಸಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ವೈಮಾನಿಕ ದಾಳಿಗೆ ನಲುಗಿದ ಟೆಹರಾನ್‌ ಏರ್‌ಪೋರ್ಟ್‌

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…

13 mins ago

ವರುಣಾ ಕ್ಷೇತ್ರದಲ್ಲಿ ದಂಡಿಮಾರಮ್ಮ ದೇವಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ…

26 mins ago

ಸೆಸ್ಕ್‌ನಲ್ಲಿ ಅರ್ಥಗರ್ಭಿತ ಲೈನ್‌ಮ್ಯಾನ್ ದಿವಸ್‌ ಆಚರಣೆ

‌ಮೈಸೂರು: ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಿಬ್ಬಂದಿ ಸುರಕ್ಷತೆ ಮತ್ತು ಎಚ್ಚರಿಕೆಯ ಕೆಲಸ ಅತ್ಯಂತ ಮುಖ್ಯವಾಗಿದೆ…

34 mins ago

ಸಾಮರಸ್ಯ ಮತ್ತು ಸಮಾನತೆ ಭಾವನೆಯ ಮೂಲಕ ಮಾದರಿ ಸಮಾಜ ನಿರ್ಮಾಣ ಮಾಡೋಣ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ…

43 mins ago

ಕೇಂದ್ರದ ಸಾಲದ ನೀತಿ ಟೀಕಿಸಿದ ಸಿಎಂ ಸಿದ್ದರಾಮಯ್ಯ.

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…

1 hour ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…

2 hours ago