ಓದುಗರ ಪತ್ರ
ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿ ಮೂರು ನಾಲ್ಕು ದಿನಗಳೇ ಕಳೆದರೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಿತಕರ ಚರ್ಚೆ ನಡೆಯದೇ ಗದ್ದಲದ ವಾತಾವರಣ ಉಂಟಾಗುತ್ತಿದೆ.
ಕಲಾಪ ಆರಂಭ ವಾಗುತ್ತಿದ್ದಂತೆ ವಿರೋಧ ಪಕ್ಷದವರು ಆಪರೇಷನ್ ಸಿಂಧೂರ, ಬಿಹಾರ ರಾಜ್ಯದ ಮತದಾರರ ಪಟ್ಟಿ ಪರಿಶೀಲನೆ ನಿರ್ಧಾರ ಮುಂತಾದ ವಿಷಯಗಳ ಬಗ್ಗೆ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸುತ್ತಿರುವುದರಿಂದ ಸಭಾಧ್ಯಕ್ಷರ ಸೂಚನೆಯ ಮೇರೆಗೆ ಉಭಯ ಸದನಗಳ ಕಲಾಪವನ್ನು ಪದೆ ಪದೇ ಮುಂದೂಡಲಾಗುತ್ತಿದೆ.
ಪ್ರತಿಯೊಂದು ಅಧಿವೇಶನದ ಸಂದರ್ಭದಲ್ಲಿಯೂ ವಿರೋಧಪಕ್ಷಗಳು ಯಾವುದಾದರೊಂದು ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವುದು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದು ನಡೆಯುತ್ತಲೇ ಇದೆ. ಆಪ ರೇಷನ್ ಸಿಂಧೂರದ ಬಗ್ಗೆ ನಡೆಯುವ ಚರ್ಚೆಯು ನಮ್ಮ ಸೇನಾ ಬಲವನ್ನು ಟೀಕಿಸುವ, ಸೈನಿಕರ ಸಾಮರ್ಥ್ಯವನ್ನು ಶಂಕಿಸುವ ರೀತಿಯಲ್ಲಿ ಇರದಿದ್ದರೆ ಉತ್ತಮ.
ಸದನದಲ್ಲಿ ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಎಲ್ಲ ಸಂಸದರು ತಪ್ಪದೇ ಪಾಲಿಸಿ, ಸದನದ ಹಿರಿಮೆಯನ್ನು ಎತ್ತಿ ಹಿಡಿಯುವುದು ಹಾಗು ಸಭಾಧ್ಯಕ್ಷರಿಗೆ ಗೌರವ ನೀಡಬೇಕು. ಪ್ರತಿಯೊಬ್ಬ ಸಂಸದರು ತಮ್ಮ ನಡವಳಿಕೆಯಿಂದ ಯಾರ ಮನಸ್ಸಿಗು ನೋವಾಗದಂತೆ ವರ್ತಿಸಿ ಸದನದ ಗೌರವವನ್ನು ಹೆಚ್ಚಿಸಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…