Andolana originals

ಓದುಗರ ಪತ್ರ: ಸದನದಲ್ಲಿ ಹಿತಕರ ಚರ್ಚೆ ನಡೆಯಲಿ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿ ಮೂರು ನಾಲ್ಕು ದಿನಗಳೇ ಕಳೆದರೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಿತಕರ ಚರ್ಚೆ ನಡೆಯದೇ ಗದ್ದಲದ ವಾತಾವರಣ ಉಂಟಾಗುತ್ತಿದೆ.

ಕಲಾಪ ಆರಂಭ ವಾಗುತ್ತಿದ್ದಂತೆ ವಿರೋಧ ಪಕ್ಷದವರು ಆಪರೇಷನ್ ಸಿಂಧೂರ, ಬಿಹಾರ ರಾಜ್ಯದ ಮತದಾರರ ಪಟ್ಟಿ ಪರಿಶೀಲನೆ ನಿರ್ಧಾರ ಮುಂತಾದ ವಿಷಯಗಳ ಬಗ್ಗೆ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸುತ್ತಿರುವುದರಿಂದ ಸಭಾಧ್ಯಕ್ಷರ ಸೂಚನೆಯ ಮೇರೆಗೆ ಉಭಯ ಸದನಗಳ ಕಲಾಪವನ್ನು ಪದೆ ಪದೇ ಮುಂದೂಡಲಾಗುತ್ತಿದೆ.

ಪ್ರತಿಯೊಂದು ಅಧಿವೇಶನದ ಸಂದರ್ಭದಲ್ಲಿಯೂ ವಿರೋಧಪಕ್ಷಗಳು ಯಾವುದಾದರೊಂದು ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವುದು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದು ನಡೆಯುತ್ತಲೇ ಇದೆ. ಆಪ ರೇಷನ್ ಸಿಂಧೂರದ ಬಗ್ಗೆ ನಡೆಯುವ ಚರ್ಚೆಯು ನಮ್ಮ ಸೇನಾ ಬಲವನ್ನು ಟೀಕಿಸುವ, ಸೈನಿಕರ ಸಾಮರ್ಥ್ಯವನ್ನು ಶಂಕಿಸುವ ರೀತಿಯಲ್ಲಿ ಇರದಿದ್ದರೆ ಉತ್ತಮ.

ಸದನದಲ್ಲಿ ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಎಲ್ಲ ಸಂಸದರು ತಪ್ಪದೇ ಪಾಲಿಸಿ, ಸದನದ ಹಿರಿಮೆಯನ್ನು ಎತ್ತಿ ಹಿಡಿಯುವುದು ಹಾಗು ಸಭಾಧ್ಯಕ್ಷರಿಗೆ ಗೌರವ ನೀಡಬೇಕು. ಪ್ರತಿಯೊಬ್ಬ ಸಂಸದರು ತಮ್ಮ ನಡವಳಿಕೆಯಿಂದ ಯಾರ ಮನಸ್ಸಿಗು ನೋವಾಗದಂತೆ ವರ್ತಿಸಿ ಸದನದ ಗೌರವವನ್ನು ಹೆಚ್ಚಿಸಬೇಕಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago