Andolana originals

ಮೈಸೂರಲ್ಲಿ ಜಾ.ದಳ ಕಾರ್ಯಕರ್ತರು ತಬ್ಬಿಬ್ಬು

ಮೈಸೂರು: ಬಿಜೆಪಿ ಹಾಗೂ ಜಾ.ದಳ ಮೈತ್ರಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯಿಂದ ನಗರ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ, ದೋಸ್ತಿ ಪಕ್ಷ ಜಾ.ದಳದ ಕೆಲ ಮುಖಂಡರ ಹೊರತಾಗಿ ಉಳಿದವರು ಚುನಾವಣೆಯಲ್ಲಿ ನಮ್ಮ ಪಾತ್ರವೇನು ಎಂದು ತಿಳಿಯದೆ ಮೌನಕ್ಕೆ ಜಾರಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಜಾ.ದಳಕ್ಕೆ ತನ್ನದೇ ಆದ ಇತಿಹಾಸವಿದೆ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ವೇಳೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಕೂಡ ಜಾ.ದಳ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು. ಚುನಾವಣೆ ನಡೆಯುವ ಒಂದು ತಿಂಗಳ ಮುನ್ನವೇ ಕಾರ್ಯಕರ್ತರು ಮೈ ಚಳಿ ಬಿಟ್ಟು ತಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಸಜ್ಜಾಗುತ್ತಿದ್ದರು. ಆದರೆ, ಇದೇ ಪ್ರಥಮ ಬಾರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಾ.ದಳ ಬಿಜೆಪಿ ಅಭ್ಯರ್ಥಿಗೆ ಬಹಿರಂಗವಾಗಿ ತನ್ನ ಬೆಂಬಲ ಘೋಷಿಸಿದೆ. ಆದರೆ ಬಿಜೆಪಿ ಅಭ್ಯರ್ಥಿ ಘೋಷಣೆ ಯಾದ ಬಳಿಕವೂ ತಮ್ಮ ಪಾತ್ರವೇನೆಂದು ತಿಳಿಯದೆ ಜಾ.ದಳ ಕಾರ್ಯಕರ್ತರು ಗೊಂದಲಕ್ಕೊಳಗಾಗಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರು ಘೋಷಣೆ ಆಗುತ್ತಿದ್ದಂತೆ ಯದುವೀರ್ ಅವರು ಬಿಎಸ್‌ವೈ, ಹೆಚ್‌.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್ ಮುಂತಾದ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದರು. ಆದರೆ, ಜಾ.ದಳ ಕಚೇರಿಗಾಗಲಿ, ಜಾ.ದಳದ ಸ್ಥಳೀಯ ಮುಖಂಡರನ್ನು ಭೇಟಿಯಾಗುವುದಾಗಲಿ ಮಾಡಿಲ್ಲ. ಸೀಟು ಹಂಚಿಕೆ ಮಾತುಕತೆ ಇನ್ನೂ ಅಂತಿಮಗೊಳ್ಳದ ಕಾರಣ ಜಾ.ದಳ ಮುಖಂಡರೂ ಇದುವರೆಗೆ ತಮ್ಮಕಾರ್ಯಕರ್ತರಿಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ ಜಾ.ದಳ ಪಾಳಯದಲ್ಲಿ ಮೌನ ಕವಿದಿದೆ.

ಕಳೆದ ಎರಡು ಚುನಾವಣೆಗಳಲ್ಲಿ ಜಾ.ದಳ ಕಾರ್ಯಕರ್ತರು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಅವರನ್ನು ಬೆಂಬಲಿಸಿದ್ದರು. ಈ ಬಗ್ಗೆ ಅವರ ಪಕ್ಷದ ಮುಖಂಡರೇ ಬಹಿರಂಗ ಹೇಳಿಕೆ ಕೂಡ ನೀಡಿದ್ದಾರೆ. ಆದರೆ, ಈ ಬಾರಿ ಕೇಸರಿ ಪಕ್ಷದ ಬೆಂಬಲಕ್ಕೆ ನಿಲ್ಲುವ ಬಗ್ಗೆ ಅಧಿಕೃತ ಘೋಷಣೆಯಾದ ಬಳಿಕವೂ ಜಾ.ದಳ ಕಾರ್ಯಕರ್ತರು ಚುನಾವಣೆ ಕಣಕ್ಕಿಳಿದಿಲ್ಲ. ಉಭಯ ಪಕ್ಷಗಳ ಮೈತ್ರಿಯಂತೆ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗುತ್ತದೆ ಎಂದು ತಿಳಿದಾಗ ಜಾ.ದಳ ಕಾರ್ಯಕರ್ತರ ಮನಸ್ಸಿನಲ್ಲಿ ಇದ್ದುದು ಪ್ರತಾಪ್ ಸಿಂಹ ಅವರ ಹೆಸರು, ಪ್ರತಾಪ್ ಕೂಡ ಜಾ.ದಳ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅದಾಗಲೇ ಭೇಟಿ ಮಾಡಿ ಬೆಂಬಲ ಕೋರಿದ್ದರು. ಕಾರ್ಯಕರ್ತರೂ ಅವರಿಗೆ ಬೆಂಬಲದ ಭರವಸೆ ನೀಡಿದ್ದರು.

ಆದರೆ, ಪ್ರತಾಪ್ ಬದಲು ಯದುವೀರ್ ಹೆಸರು ಘೋಷಣೆಯಾದ ದಿಢೀ‌ ಬೆಳವಣಿಗೆಯಿಂದ ಜಾ.ದಳ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ. ಜಾ.ದಳ ಕಾರಕರ್ತರಲ್ಲಿ ಒಕ್ಕಲಿಗ ಸಮುದಾಯದವರು ಹೆಚ್ಚಿದ್ದು, ಪ್ರತಾಪ್ ಇದೇ ಸಮುದಾಯಕ್ಕೆ ಸೇರಿದ್ದ ಕಾರಣ ಬೆಂಬಲ ನೀಡಲು ಒಳಗಿಂದೊಳಗೆ ಸಮತಿ ಇತ್ತು. ಆದರೆ ಇದೀಗ ಪ್ರತಾಪ್ ಬದಲು ಯದುವೀರ್ ಅವರನ್ನು ಕಣಕ್ಕಿಳಿಸಿರುವುದರಿಂದ, ರಾಜಮನೆತನದ ಪ್ರತಿನಿಧಿ ಜತೆ ನೇರ ಸಂಪರ್ಕವಿಲ್ಲದ ಕಾರ್ಯಕರ್ತರು ಗೊಂದಲಕ್ಕೆ ಬಿದ್ದಿದ್ದಾರೆ. ಇತ್ತ ಬಿಜೆಪಿ ನಾಯಕರಾರೂ ನಮ್ಮ ಪಕ್ಷದ ತಳಮಟ್ಟದ ಕಾರ್ಯಕರ್ತರನ್ನು ಭೇಟಿ ಮಾಡಿ ಬೆಂಬಲ ಕೋರುವ ಕೆಲಸ ಮಾಡಿಲ್ಲ, ಅವರೇ ಸುಮ್ಮನಿದ್ದ ಮೇಲೆ ನಾವು ಹೇಗೆ ಪ್ರಚಾರದಲ್ಲಿ ತೊಡಗಿಕೊಳ್ಳುವುದು? ಮುಂದೇನಾಗುತ್ತದೆಯೋ ನೋಡೋಣ ಎಂದು ಪಕ್ಷದ ಕಾರ್ಯಕರ್ತರು ಹೇಳುತ್ತಿದ್ದಾರೆ.

ಹೆಚ್. ಎಸ್.‌ ದಿನೇಶ್‌ ಕುಮಾರ್

ಮೈಸೂರಿನವನಾದ ನಾನು, 1994ರಲ್ಲಿ ಮೈಸೂರಿನ ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 22 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಸಂಕ್ರಾಂತಿʼಯಿಂದ ಪ್ರಾರಂಭಿಸಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರ, ಮುಖ್ಯ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಪರಾಧ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸ.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago