Andolana originals

ಇಂಡಿಗನತ್ತ: ಪುಟ್ಟಮ್ಮನಿಗೆ ಬೇಕಿದೆ ಚಿಕಿತ್ಸೆ; ಆಸ್ಪತ್ರೆಗೆ ಸೇರಿಸುವವರಿಲ್ಲ

ಹನೂರು: ಇವರು ತಾಲ್ಲೂಕಿನ ಇಂಡಿಗನತ್ತ ಗ್ರಾಮದ ಹಿರಿಯ ಜೀವ, ಕಳೆದ ಆರು ತಿಂಗಳಿ ನಿಂದ ಹಾಸಿಗೆ ಹಿಡಿದಿರುವ ಇವರಿಗೆ ಮಲ ಮೂತ್ರಕ್ಕೆ ಹೋಗಲೂ ಆಗುತ್ತಿಲ್ಲ. ಎರಡು ವಾರಗಳ ಹಿಂದಿನವರೆಗೂ ಒಬ್ಬನೇ ಮಗ ತಾಯಿಯ ಸೇವೆ ಮಾಡಿಕೊಂಡಿದ್ದ. ಈಗ ಈಕೆಯನ್ನು ಹಾಸಿಗೆಯಿಂದ ಎಬ್ಬಿಸುವವರಿಲ್ಲ. ಈಗಾಗಿ ಮಲಮೂತ್ರವೂ ಚಾಪೆಯಲ್ಲಿಯೇ ನಡೆಯುತ್ತಿದೆ. ಮಗಳು ರಾಜಮ್ಮರವರಿಗೂ ವಯಸ್ಸಾಗಿರುವುದರಿಂದ ಇವರ ಪರಿಸ್ಥಿತಿಯನ್ನು ಗಮನಿಸುವವರಿಲ್ಲ. ಈ ದಾರುಣ ಸ್ಥಿತಿಗೆ ಕಾರಣವಾಗಿರುವುದು ಲೋಕಸಭಾ ಚುನಾವಣೆ.

ಏ.26ರಂದು ನಡೆದ ಮತದಾನದ ಅವಧಿ ಯಲ್ಲಿ ಇಂಡಿಗನತ್ತ ಗ್ರಾಮದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಊರಿನ 40ಕ್ಕೂ ಹೆಚ್ಚು ಮಂದಿ ಈಗ ಜೈಲಿನಲ್ಲಿದ್ದಾರೆ. ಇನ್ನೂ 200 ಕ್ಕೂ ಹೆಚ್ಚು ಮಂದಿ ತಲೆಮರೆಸಿಕೊಂಡಿದ್ದಾರೆ. ಅವರಲ್ಲಿ ಬಡಪಾಯಿ ಪುಟ್ಟಮ್ಮ ಅವರ ಮಗನೂ ಸೇರಿದ್ದಾರೆ. ಒಂದೆಡೆ ತನ್ನ ಅನಾರೋಗ್ಯ, ಇನ್ನೊಂದೆಡೆ ಮಗನಿಗೆ ಬಂದ ಆಪತ್ತಿನಿಂದ ಅವರು ಕಂಗಾಲಾಗಿದ್ದು, ಕೃಶವಾಗಿರುವ ಹಿರಿಯ ಜೀವವನ್ನು ನೋಡುವಾಗಲೇ ಕರುಳು ಚುರುಕ್ ಎನ್ನುತ್ತದೆ. ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಇಂಡಿಗನತ್ತ ಗ್ರಾಮದ 65 ವರ್ಷದ ಪುಟ್ಟಮರವರಿಗೆ ಕಳೆದ ಎರಡು ವರ್ಷಗಳ ಹಿಂದೆ ಹಸು ತಿವಿದ ಪರಿಣಾಮ ಮೂಳೆ ಮುರಿದು ಗಾಯಗೊಂಡಿದ್ದರು. ಇವರಿಗೆ ಚಿಕಿತ್ಸೆ ನೀಡಿದ್ದರೂ ಕೆಲವು ದಿನಗಳು ಮಾತ್ರ ಚೆನ್ನಾಗಿಯೇ ಇದ್ದರು. ಆದರೆ ಕಳೆದ 6 ತಿಂಗಳಿನಿಂದ ಹಾಸಿಗೆ ಹಿಡಿದಿದ್ದಾರೆ.

ಕಳೆದ ಏಪ್ರಿಲ್ 26ರಂದು ನಡೆದ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಪುಟ್ಟಮ್ಮನ ಮಗನ ವಿರುದ್ಧ ಪ್ರಕರಣ ದಾಖಲಾಗಿರುವುದರಿಂದ ತಲೆಮರೆಸಿಕೊಂಡಿದ್ದಾರೆ. ಸಹೋದರ ಸ್ಥಳದಲ್ಲಿ ಇಲ್ಲದೇ ಇದ್ದರೂ ಆತನ ಮೇಲೆ ಕೇಸು ದಾಖಲಾಗಿದೆ ಎನ್ನುತ್ತಾರೆ ಅಕ್ಕ ರಾಜಮ್ಮ. ಈಗ ಹಾಸಿಗೆ ಹಿಡಿದಿರುವ ತಾಯಿ ಜೊತೆ ತಮ್ಮನ ನಾಲ್ಕು ಚಿಕ್ಕ ಮಕ್ಕಳನ್ನು ಇವರೇ ನೋಡಿಕೊಳ್ಳಬೇಕಾಗಿದೆ.

ಮತಗಟ್ಟೆ ಧ್ವಂಸ ಪ್ರಕರಣದ ನಂತರ ಗ್ರಾಮಕ್ಕೆ ಜೀಪ್ ಸಂಚಾರ ನಿಲ್ಲಿಸಲಾಗಿದೆ. ಡೋಲಿಯ ಮೂಲಕ ಆಸ್ಪತ್ರೆಗೆ ಒಯ್ಯಬೇಕೆಂದರೇ ಗ್ರಾಮದಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಹೊರತು ಪಡಿಸಿ ಉಳಿದವರು ತಲೆ ಮರೆಸಿಕೊಂಡಿದ್ದಾರೆ. ಹಾಸಿಗೆ ಹಿಡಿದಿರುವ ಪುಟ್ಟಮರವರಿಗೆ ಜಿಲ್ಲಾಡಳಿತದ ವತಿಯಿಂದ ಚಿಕಿತ್ಸೆ ಕೊಡಿಸುವಂತೆ ಅಳಿಯ ಪುಟ್ಟಸ್ವಾಮಿ ಮನವಿ ಮಾಡಿದ್ದಾರೆ.

ಕುಟುಂಬಸ್ಥರ ನೆರವಿನಿಂದ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪುಟ್ಟಮ್ಮರವರನ್ನು ಕರೆತಂದು ಅವರಿಗೆ ಉತ್ತಮ ಚಿಕಿತ್ಸೆ ನೀಡಿ ಗುಣಪಡಿಸಲು ಕ್ರಮ ಕೈಗೊಳ್ಳುತ್ತೇನೆ. -ಡಾ. ಪ್ರಕಾಶ್, ಟಿಎಚ್‌ ಒ, ಹನೂರು ತಾ.

andolana

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

4 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

5 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

9 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

10 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

11 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

12 hours ago