Andolana originals

ಮಡಾ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಇಡಿ

ಎರಡನೇ ದಿನವೂ ಮುಂದುವರಿದ ಕಡತಗಳ ಪರಿಶೀಲನೆ
ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿಯ ಮೂಲ ದಾಖಲೆಗಳನ್ನು ಒದಗಿಸುವ ಜತೆಗೆ ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ಒದಗಿಸುವಂತೆ ೧೦ ದಿನಗಳ ಹಿಂದೆ ನೋಟಿಸ್ ಜಾರಿ ಗೊಳಿಸಿ ದ್ದರೂ ಪ್ರತಿಕ್ರಿಯಿಸದೇ ಕಡೆಗಣಿಸಿದ್ದ ಮುಡಾ ಅಧಿಕಾರಿಗಳಿಗೆ ಈಗ ಇಡಿ(ಜಾರಿ ನಿರ್ದೇಶನಾಲಯ)ಯವರು ಬಿಸಿ ಮುಟ್ಟಿಸಿದ್ದಾರೆ.

ತೆರೆಮರೆಯಲ್ಲಿ ಬೇರೆಯವರ ರಕ್ಷಣೆಗೆ ನಿಂತ ಮುಡಾ ಅಧಿಕಾರಿಗಳು ಇಡಿಯ ಬಲೆಗೆ ಸಿಲುಕಿದ್ದಾರೆ. ಕಾನೂನಾತ್ಮಕ ವಿಚಾರಗಳಿಗೆ ಉತ್ತರಿಸಲಾಗದೆ ಕೈಕಟ್ಟಿ ಕುಳಿತಿದ್ದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಣೆ ಎದುರಿಸುವಂತಾಗಿದೆ. ಅಲ್ಲದೆ, ೫೦:೫೦ ಅನುಪಾತದ ನಿವೇಶನಕ್ಕೆ ಸಂಬಂಧಿಸಿದ ಶಿಫಾರಸನ್ನು ಯಾರು ಯಾರಿಗೆ ಮಾಡಿದ್ದರು? ಯಾರು ಯಾರಿಗೆ ಬದಲಿ ನಿವೇಶನ ಕೊಡಿಸಿದರು ಎನ್ನುವ ಸಮಗ್ರ ದಾಖಲೆಗಳು ಸಿಕ್ಕಿದ್ದು, ಇದನ್ನು ತಮ್ಮ
ವಶಕ್ಕೆ ಪಡೆದಿದ್ದಾರೆ.

ತಹಸಿಲ್ದಾರ್ ಕಚೇರಿಯಲ್ಲೂ ಅದೇ ಪರಿಸ್ಥಿತಿ: ನಜರ್‌ಬಾದ್ ನಲ್ಲಿರುವ ತಾಲ್ಲೂಕು ಕಚೇರಿಯಲ್ಲಿಯೂ ಇಡಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಸರ್ವೆ ನಂಬರ್ ೪೬೪ಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಹಸಿಲ್ದಾರ್ ಮಹೇಶ್ ಕುಮಾರ್ ಅವರಿಂದ ಪಡೆದಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂಬರ್ ೪೬೪ರ ಭೂಮಿಗೆ ಸಂಬಂಽಸಿದ ೧೯೩೫ರ ಇಸವಿಯ ಎಂಆರ್ ಕಾಪಿ ಕೇಳಿ ಪಡೆದುಕೊಂಡಿದ್ದಾರೆ. ಶುಕ್ರವಾರೂ ತಾಲ್ಲೂಕು ಕಚೇರಿಯಿಂದ ನೂರು ಪುಟಗಳಷ್ಟು ದಾಖಲೆಗಳನ್ನು ಕೊಂಡೊಯ್ದಿದ್ದರು. ಜೆರಾಕ್ಸ್ ಪ್ರತಿಗೆ ಮಹೇಶ್ ಕುಮಾರ್ ಅವರಿಂದ ಸಹಿ ಹಾಕಿಸಿಕೊಂಡ ಮೇಲೆ ಹಲವಾರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದರು. ಎಲ್ಲದಕ್ಕೂ ಪೂರಕ ದಾಖಲೆ ಪಡೆದಿದ್ದರೆ, ಕೆಲವು ವಿಚಾರಗಳು ನನ್ನ ಗಮನಕ್ಕೆ ಬಂದಿಲ್ಲ, ಕೆಲವು ವಿಚಾರಗಳು ಗೊತ್ತಿಲ್ಲವೆಂದು ಹೇಳಿದ್ದಾರೆ. ಇದರಿಂದ ಇಡಿ ಅಽಕಾರಿಗಳು ನಾವು ಕೇಳಿದಾಗ ಮೂಲ ದಾಖಲೆಗಳನ್ನು ಕೊಡಬೇಕು. ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ.

ದಾಖಲೆಗಳ ದೃಢೀಕರಣ
ಹಗರಣದ ಮೂಲವನ್ನು ಕೆದಕುತ್ತಿರುವ ಇಡಿ ಅಧಿಕಾರಿಗಳು ದಾಖಲೆಗಳ ದೃಢೀಕರಣ ಮಾಡುತ್ತಿದ್ದಾರೆ. ತಮ್ಮ ಕಚೇರಿಗೆ ಮತ್ತಿಬ್ಬರು ಅಧಿಕಾರಿಗಳನ್ನು ಶನಿವಾರ ಕರೆಯಿಸಿಕೊಂಡಿದ್ದರು. ಕಚೇರಿಯ ಹಿಂಬಾಗಿಲಿನಿಂದ ಹಾರ್ಡ್ ಡಿಸ್ಕ್ ತಂದ ಅಧಿಕಾರಿಗಳಿಬ್ಬರು ಆಯುಕ್ತರ ಕಚೇರಿಯಲ್ಲಿ ಮಾತುಕತೆ ನಡೆಸಿದ ಬಳಿಕ ರೆಕಾರ್ಡ್ ರೂಂನಲ್ಲಿ ಕುಳಿತು ಪರಿಶೀಲಿಸಿದರು. ಪ್ರತಿಯೊಂದನ್ನು ಪರಿಶೀಲಿಸಿ ದೃಢೀಕರಣ ಮಾಡುತ್ತಲೇ ಅದನ್ನು ಕಂಪ್ಯೂಟರ್‌ಗೆ ಅಪ್‌ಲೋಡ್ ಮಾಡಿ ಸಂಗ್ರಹಿಸಿದ್ದಾರೆ.

ದಾಖಲೆಗಳ ಬದಲಾವಣೆ, ಮೂಲ ಕಡತಗಳನ್ನು ತಿದ್ದಿರುವ ಕೆಲಸ ಆಗಿರುವ ಅನುಮಾನವಿರುವ ಕಾರಣ ಪ್ರತಿಯೊಂದನ್ನು ದೃಢೀಕರಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

4 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

4 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

6 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

6 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

7 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

7 hours ago