Andolana originals

ಮಡಾ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಇಡಿ

ಎರಡನೇ ದಿನವೂ ಮುಂದುವರಿದ ಕಡತಗಳ ಪರಿಶೀಲನೆ
ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿಯ ಮೂಲ ದಾಖಲೆಗಳನ್ನು ಒದಗಿಸುವ ಜತೆಗೆ ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ಒದಗಿಸುವಂತೆ ೧೦ ದಿನಗಳ ಹಿಂದೆ ನೋಟಿಸ್ ಜಾರಿ ಗೊಳಿಸಿ ದ್ದರೂ ಪ್ರತಿಕ್ರಿಯಿಸದೇ ಕಡೆಗಣಿಸಿದ್ದ ಮುಡಾ ಅಧಿಕಾರಿಗಳಿಗೆ ಈಗ ಇಡಿ(ಜಾರಿ ನಿರ್ದೇಶನಾಲಯ)ಯವರು ಬಿಸಿ ಮುಟ್ಟಿಸಿದ್ದಾರೆ.

ತೆರೆಮರೆಯಲ್ಲಿ ಬೇರೆಯವರ ರಕ್ಷಣೆಗೆ ನಿಂತ ಮುಡಾ ಅಧಿಕಾರಿಗಳು ಇಡಿಯ ಬಲೆಗೆ ಸಿಲುಕಿದ್ದಾರೆ. ಕಾನೂನಾತ್ಮಕ ವಿಚಾರಗಳಿಗೆ ಉತ್ತರಿಸಲಾಗದೆ ಕೈಕಟ್ಟಿ ಕುಳಿತಿದ್ದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಣೆ ಎದುರಿಸುವಂತಾಗಿದೆ. ಅಲ್ಲದೆ, ೫೦:೫೦ ಅನುಪಾತದ ನಿವೇಶನಕ್ಕೆ ಸಂಬಂಧಿಸಿದ ಶಿಫಾರಸನ್ನು ಯಾರು ಯಾರಿಗೆ ಮಾಡಿದ್ದರು? ಯಾರು ಯಾರಿಗೆ ಬದಲಿ ನಿವೇಶನ ಕೊಡಿಸಿದರು ಎನ್ನುವ ಸಮಗ್ರ ದಾಖಲೆಗಳು ಸಿಕ್ಕಿದ್ದು, ಇದನ್ನು ತಮ್ಮ
ವಶಕ್ಕೆ ಪಡೆದಿದ್ದಾರೆ.

ತಹಸಿಲ್ದಾರ್ ಕಚೇರಿಯಲ್ಲೂ ಅದೇ ಪರಿಸ್ಥಿತಿ: ನಜರ್‌ಬಾದ್ ನಲ್ಲಿರುವ ತಾಲ್ಲೂಕು ಕಚೇರಿಯಲ್ಲಿಯೂ ಇಡಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಸರ್ವೆ ನಂಬರ್ ೪೬೪ಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಹಸಿಲ್ದಾರ್ ಮಹೇಶ್ ಕುಮಾರ್ ಅವರಿಂದ ಪಡೆದಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂಬರ್ ೪೬೪ರ ಭೂಮಿಗೆ ಸಂಬಂಽಸಿದ ೧೯೩೫ರ ಇಸವಿಯ ಎಂಆರ್ ಕಾಪಿ ಕೇಳಿ ಪಡೆದುಕೊಂಡಿದ್ದಾರೆ. ಶುಕ್ರವಾರೂ ತಾಲ್ಲೂಕು ಕಚೇರಿಯಿಂದ ನೂರು ಪುಟಗಳಷ್ಟು ದಾಖಲೆಗಳನ್ನು ಕೊಂಡೊಯ್ದಿದ್ದರು. ಜೆರಾಕ್ಸ್ ಪ್ರತಿಗೆ ಮಹೇಶ್ ಕುಮಾರ್ ಅವರಿಂದ ಸಹಿ ಹಾಕಿಸಿಕೊಂಡ ಮೇಲೆ ಹಲವಾರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದರು. ಎಲ್ಲದಕ್ಕೂ ಪೂರಕ ದಾಖಲೆ ಪಡೆದಿದ್ದರೆ, ಕೆಲವು ವಿಚಾರಗಳು ನನ್ನ ಗಮನಕ್ಕೆ ಬಂದಿಲ್ಲ, ಕೆಲವು ವಿಚಾರಗಳು ಗೊತ್ತಿಲ್ಲವೆಂದು ಹೇಳಿದ್ದಾರೆ. ಇದರಿಂದ ಇಡಿ ಅಽಕಾರಿಗಳು ನಾವು ಕೇಳಿದಾಗ ಮೂಲ ದಾಖಲೆಗಳನ್ನು ಕೊಡಬೇಕು. ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ.

ದಾಖಲೆಗಳ ದೃಢೀಕರಣ
ಹಗರಣದ ಮೂಲವನ್ನು ಕೆದಕುತ್ತಿರುವ ಇಡಿ ಅಧಿಕಾರಿಗಳು ದಾಖಲೆಗಳ ದೃಢೀಕರಣ ಮಾಡುತ್ತಿದ್ದಾರೆ. ತಮ್ಮ ಕಚೇರಿಗೆ ಮತ್ತಿಬ್ಬರು ಅಧಿಕಾರಿಗಳನ್ನು ಶನಿವಾರ ಕರೆಯಿಸಿಕೊಂಡಿದ್ದರು. ಕಚೇರಿಯ ಹಿಂಬಾಗಿಲಿನಿಂದ ಹಾರ್ಡ್ ಡಿಸ್ಕ್ ತಂದ ಅಧಿಕಾರಿಗಳಿಬ್ಬರು ಆಯುಕ್ತರ ಕಚೇರಿಯಲ್ಲಿ ಮಾತುಕತೆ ನಡೆಸಿದ ಬಳಿಕ ರೆಕಾರ್ಡ್ ರೂಂನಲ್ಲಿ ಕುಳಿತು ಪರಿಶೀಲಿಸಿದರು. ಪ್ರತಿಯೊಂದನ್ನು ಪರಿಶೀಲಿಸಿ ದೃಢೀಕರಣ ಮಾಡುತ್ತಲೇ ಅದನ್ನು ಕಂಪ್ಯೂಟರ್‌ಗೆ ಅಪ್‌ಲೋಡ್ ಮಾಡಿ ಸಂಗ್ರಹಿಸಿದ್ದಾರೆ.

ದಾಖಲೆಗಳ ಬದಲಾವಣೆ, ಮೂಲ ಕಡತಗಳನ್ನು ತಿದ್ದಿರುವ ಕೆಲಸ ಆಗಿರುವ ಅನುಮಾನವಿರುವ ಕಾರಣ ಪ್ರತಿಯೊಂದನ್ನು ದೃಢೀಕರಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago