Andolana originals

ಮಡಾ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಇಡಿ

ಎರಡನೇ ದಿನವೂ ಮುಂದುವರಿದ ಕಡತಗಳ ಪರಿಶೀಲನೆ
ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿಯ ಮೂಲ ದಾಖಲೆಗಳನ್ನು ಒದಗಿಸುವ ಜತೆಗೆ ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ಒದಗಿಸುವಂತೆ ೧೦ ದಿನಗಳ ಹಿಂದೆ ನೋಟಿಸ್ ಜಾರಿ ಗೊಳಿಸಿ ದ್ದರೂ ಪ್ರತಿಕ್ರಿಯಿಸದೇ ಕಡೆಗಣಿಸಿದ್ದ ಮುಡಾ ಅಧಿಕಾರಿಗಳಿಗೆ ಈಗ ಇಡಿ(ಜಾರಿ ನಿರ್ದೇಶನಾಲಯ)ಯವರು ಬಿಸಿ ಮುಟ್ಟಿಸಿದ್ದಾರೆ.

ತೆರೆಮರೆಯಲ್ಲಿ ಬೇರೆಯವರ ರಕ್ಷಣೆಗೆ ನಿಂತ ಮುಡಾ ಅಧಿಕಾರಿಗಳು ಇಡಿಯ ಬಲೆಗೆ ಸಿಲುಕಿದ್ದಾರೆ. ಕಾನೂನಾತ್ಮಕ ವಿಚಾರಗಳಿಗೆ ಉತ್ತರಿಸಲಾಗದೆ ಕೈಕಟ್ಟಿ ಕುಳಿತಿದ್ದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಣೆ ಎದುರಿಸುವಂತಾಗಿದೆ. ಅಲ್ಲದೆ, ೫೦:೫೦ ಅನುಪಾತದ ನಿವೇಶನಕ್ಕೆ ಸಂಬಂಧಿಸಿದ ಶಿಫಾರಸನ್ನು ಯಾರು ಯಾರಿಗೆ ಮಾಡಿದ್ದರು? ಯಾರು ಯಾರಿಗೆ ಬದಲಿ ನಿವೇಶನ ಕೊಡಿಸಿದರು ಎನ್ನುವ ಸಮಗ್ರ ದಾಖಲೆಗಳು ಸಿಕ್ಕಿದ್ದು, ಇದನ್ನು ತಮ್ಮ
ವಶಕ್ಕೆ ಪಡೆದಿದ್ದಾರೆ.

ತಹಸಿಲ್ದಾರ್ ಕಚೇರಿಯಲ್ಲೂ ಅದೇ ಪರಿಸ್ಥಿತಿ: ನಜರ್‌ಬಾದ್ ನಲ್ಲಿರುವ ತಾಲ್ಲೂಕು ಕಚೇರಿಯಲ್ಲಿಯೂ ಇಡಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಸರ್ವೆ ನಂಬರ್ ೪೬೪ಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಹಸಿಲ್ದಾರ್ ಮಹೇಶ್ ಕುಮಾರ್ ಅವರಿಂದ ಪಡೆದಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂಬರ್ ೪೬೪ರ ಭೂಮಿಗೆ ಸಂಬಂಽಸಿದ ೧೯೩೫ರ ಇಸವಿಯ ಎಂಆರ್ ಕಾಪಿ ಕೇಳಿ ಪಡೆದುಕೊಂಡಿದ್ದಾರೆ. ಶುಕ್ರವಾರೂ ತಾಲ್ಲೂಕು ಕಚೇರಿಯಿಂದ ನೂರು ಪುಟಗಳಷ್ಟು ದಾಖಲೆಗಳನ್ನು ಕೊಂಡೊಯ್ದಿದ್ದರು. ಜೆರಾಕ್ಸ್ ಪ್ರತಿಗೆ ಮಹೇಶ್ ಕುಮಾರ್ ಅವರಿಂದ ಸಹಿ ಹಾಕಿಸಿಕೊಂಡ ಮೇಲೆ ಹಲವಾರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದರು. ಎಲ್ಲದಕ್ಕೂ ಪೂರಕ ದಾಖಲೆ ಪಡೆದಿದ್ದರೆ, ಕೆಲವು ವಿಚಾರಗಳು ನನ್ನ ಗಮನಕ್ಕೆ ಬಂದಿಲ್ಲ, ಕೆಲವು ವಿಚಾರಗಳು ಗೊತ್ತಿಲ್ಲವೆಂದು ಹೇಳಿದ್ದಾರೆ. ಇದರಿಂದ ಇಡಿ ಅಽಕಾರಿಗಳು ನಾವು ಕೇಳಿದಾಗ ಮೂಲ ದಾಖಲೆಗಳನ್ನು ಕೊಡಬೇಕು. ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ.

ದಾಖಲೆಗಳ ದೃಢೀಕರಣ
ಹಗರಣದ ಮೂಲವನ್ನು ಕೆದಕುತ್ತಿರುವ ಇಡಿ ಅಧಿಕಾರಿಗಳು ದಾಖಲೆಗಳ ದೃಢೀಕರಣ ಮಾಡುತ್ತಿದ್ದಾರೆ. ತಮ್ಮ ಕಚೇರಿಗೆ ಮತ್ತಿಬ್ಬರು ಅಧಿಕಾರಿಗಳನ್ನು ಶನಿವಾರ ಕರೆಯಿಸಿಕೊಂಡಿದ್ದರು. ಕಚೇರಿಯ ಹಿಂಬಾಗಿಲಿನಿಂದ ಹಾರ್ಡ್ ಡಿಸ್ಕ್ ತಂದ ಅಧಿಕಾರಿಗಳಿಬ್ಬರು ಆಯುಕ್ತರ ಕಚೇರಿಯಲ್ಲಿ ಮಾತುಕತೆ ನಡೆಸಿದ ಬಳಿಕ ರೆಕಾರ್ಡ್ ರೂಂನಲ್ಲಿ ಕುಳಿತು ಪರಿಶೀಲಿಸಿದರು. ಪ್ರತಿಯೊಂದನ್ನು ಪರಿಶೀಲಿಸಿ ದೃಢೀಕರಣ ಮಾಡುತ್ತಲೇ ಅದನ್ನು ಕಂಪ್ಯೂಟರ್‌ಗೆ ಅಪ್‌ಲೋಡ್ ಮಾಡಿ ಸಂಗ್ರಹಿಸಿದ್ದಾರೆ.

ದಾಖಲೆಗಳ ಬದಲಾವಣೆ, ಮೂಲ ಕಡತಗಳನ್ನು ತಿದ್ದಿರುವ ಕೆಲಸ ಆಗಿರುವ ಅನುಮಾನವಿರುವ ಕಾರಣ ಪ್ರತಿಯೊಂದನ್ನು ದೃಢೀಕರಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

1 hour ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

3 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

5 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

5 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

7 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

8 hours ago