Andolana originals

ಕೋಟೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಧುಕುಮಾರ್ ಆಯ್ಕೆ?

ನಾಳೆ ಚುನಾವಣೆ; ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನಿಶ್ಚಿತ

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮಂಗಳವಾರ (ಮಾ.೨೫) ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧುಕುಮಾರ್ ಸ್ಥಾಯಿ ಸಮಿತಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

ಪ್ರತಿಷ್ಠೆಯ ಕಣವಾಗಿರುವ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಈ ಬಾರಿ ಅಷ್ಟೇನೂ ಪೈಪೋಟಿ ಕಾಣದಿದ್ದರೂಕೆಲವರು ಚುನಾವಣೆಯನ್ನು ರಂಗೇರಿಸಿದ್ದಾರೆ.

ಸ್ಥಾಯಿ ಸಮಿತಿ ಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಮಧುಕುಮಾರ್, ಸುಹಾಸಿನಿ ದಿನೇಶ್, ಕರಾಟೆ ಪ್ರೇಮ್, ಸಾಗರ್, ಸೋಮಶೇಖರ್, ಜಾ.ದಳದ ನಂಜಪ್ಪ, ಲೋಕೇಶ್, ದರ್ಶಿನಿ, ಜಿಮ್ ಯಶ್ವಂತ್ ಆಯ್ಕೆಯಾಗಿದ್ದರು.

ಹೀಗಾಗಿ ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷದವರೇ ಸ್ಥಾಯಿ ಸಮಿತಿ ಅಧಿಕಾರ ಹಿಡಿಯುವುದು ಖಚಿತವಾಗಿದೆ.

ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ಆಪ್ತರಾದ ಮಧುಕುಮಾರ್ ಮತ್ತು ಕರಾಟೆ ಪ್ರೇಮ್ ಕುಮಾರ್ ನಡುವೆ ಪೈಪೋಟಿ ಎದುರಾದ ಹಿನ್ನೆಲೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರು ಪುರಸಭಾ ಸದಸ್ಯರಾದ ನರಸಿಂಹಮೂರ್ತಿ, ಕರಾಟೆ ಪ್ರೇಮ್‌ಕುಮಾರ್ ಮಧುಕುಮಾರ್ ಜೊತೆ ಸಭೆ ನಡೆಸಿ, ಬೇರೆ ಪಕ್ಷದವರು ಅಧಿಕಾರ ಹಿಡಿಯುವ ಸಂದರ್ಭ ಎಂದು ತಿಳಿದು ಬಂದಿದೆ.

ಜಾ.ದಳದ ನಂಜಪ್ಪ ಅವರು ಸ್ಥಾಯಿ ಸಮಿತಿ ಅಧ್ಯಕ್ಷರಾಗಬೇಕೆಂದು ಅನೇಕ ಸದಸ್ಯರ ಜೊತೆ ಸೇರಿ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಒಟ್ಟಿನಲ್ಲಿ ಚುನಾವಣೆಯಲ್ಲಿ ಏನು ಬೇಕಾದರೂ ನಡೆಯಬಹುದು ಎಂಬುದಕ್ಕೆ ಕಳೆದ ಬಾರಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಿದರ್ಶನವಾಗಿದೆ.

ಹಾಲಿ ಸಮಿತಿಯ ಉಪಾಧ್ಯಕ್ಷರಾಗಿರುವ ಆಸಿಫ್ ಅವರು ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗುತ್ತಾರೆ ಎಂದು ಬಿಂಬಿಸಲಾಗಿತ್ತು. ಆದರೆ, ಕಡೇ ಕ್ಷಣದಲ್ಲಿ ಕಾಂಗ್ರೆಸ್‌ನಿಂದ ಬಂಡಾಯವೆದ್ದ ಐಡಿಯಾ ವೆಂಕಟೇಶ್ ಅವರು ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಸೆಳೆದು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಹೀಗಾಗಿ ಅಂತಿಮ ಕ್ಷಣದಲ್ಲಿ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಈ ಹಿನ್ನೆಲೆಯಲ್ಲಿ ಈ ಬಾರಿಯ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯೂ ಎಲ್ಲರಲ್ಲಿ ಕುತೂಹಲ ಮೂಡಿಸಿದೆ.

” ಸಾಮಾನ್ಯ ಸಭೆ ನಡೆದ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಸದಸ್ಯರನ್ನು ಸದಸ್ಯರು ಒಗ್ಗೂಡಿ ಆಯ್ಕೆ ಮಾಡಿದ್ದಾರೆ. ಮಾ.೨೫ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಿಗದಿ ಮಾಡಿದ್ದು ನಂತರ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಬಜೆಟ್ ಸಭೆಯನ್ನು ಮುಂದೆ ನಡೆಸಲಾಗುವುದು.”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ 

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

18 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

52 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

2 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago