Andolana originals

ಕೋಟೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಧುಕುಮಾರ್ ಆಯ್ಕೆ?

ನಾಳೆ ಚುನಾವಣೆ; ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನಿಶ್ಚಿತ

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮಂಗಳವಾರ (ಮಾ.೨೫) ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧುಕುಮಾರ್ ಸ್ಥಾಯಿ ಸಮಿತಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

ಪ್ರತಿಷ್ಠೆಯ ಕಣವಾಗಿರುವ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಈ ಬಾರಿ ಅಷ್ಟೇನೂ ಪೈಪೋಟಿ ಕಾಣದಿದ್ದರೂಕೆಲವರು ಚುನಾವಣೆಯನ್ನು ರಂಗೇರಿಸಿದ್ದಾರೆ.

ಸ್ಥಾಯಿ ಸಮಿತಿ ಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಮಧುಕುಮಾರ್, ಸುಹಾಸಿನಿ ದಿನೇಶ್, ಕರಾಟೆ ಪ್ರೇಮ್, ಸಾಗರ್, ಸೋಮಶೇಖರ್, ಜಾ.ದಳದ ನಂಜಪ್ಪ, ಲೋಕೇಶ್, ದರ್ಶಿನಿ, ಜಿಮ್ ಯಶ್ವಂತ್ ಆಯ್ಕೆಯಾಗಿದ್ದರು.

ಹೀಗಾಗಿ ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷದವರೇ ಸ್ಥಾಯಿ ಸಮಿತಿ ಅಧಿಕಾರ ಹಿಡಿಯುವುದು ಖಚಿತವಾಗಿದೆ.

ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ಆಪ್ತರಾದ ಮಧುಕುಮಾರ್ ಮತ್ತು ಕರಾಟೆ ಪ್ರೇಮ್ ಕುಮಾರ್ ನಡುವೆ ಪೈಪೋಟಿ ಎದುರಾದ ಹಿನ್ನೆಲೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರು ಪುರಸಭಾ ಸದಸ್ಯರಾದ ನರಸಿಂಹಮೂರ್ತಿ, ಕರಾಟೆ ಪ್ರೇಮ್‌ಕುಮಾರ್ ಮಧುಕುಮಾರ್ ಜೊತೆ ಸಭೆ ನಡೆಸಿ, ಬೇರೆ ಪಕ್ಷದವರು ಅಧಿಕಾರ ಹಿಡಿಯುವ ಸಂದರ್ಭ ಎಂದು ತಿಳಿದು ಬಂದಿದೆ.

ಜಾ.ದಳದ ನಂಜಪ್ಪ ಅವರು ಸ್ಥಾಯಿ ಸಮಿತಿ ಅಧ್ಯಕ್ಷರಾಗಬೇಕೆಂದು ಅನೇಕ ಸದಸ್ಯರ ಜೊತೆ ಸೇರಿ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಒಟ್ಟಿನಲ್ಲಿ ಚುನಾವಣೆಯಲ್ಲಿ ಏನು ಬೇಕಾದರೂ ನಡೆಯಬಹುದು ಎಂಬುದಕ್ಕೆ ಕಳೆದ ಬಾರಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಿದರ್ಶನವಾಗಿದೆ.

ಹಾಲಿ ಸಮಿತಿಯ ಉಪಾಧ್ಯಕ್ಷರಾಗಿರುವ ಆಸಿಫ್ ಅವರು ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗುತ್ತಾರೆ ಎಂದು ಬಿಂಬಿಸಲಾಗಿತ್ತು. ಆದರೆ, ಕಡೇ ಕ್ಷಣದಲ್ಲಿ ಕಾಂಗ್ರೆಸ್‌ನಿಂದ ಬಂಡಾಯವೆದ್ದ ಐಡಿಯಾ ವೆಂಕಟೇಶ್ ಅವರು ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಸೆಳೆದು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಹೀಗಾಗಿ ಅಂತಿಮ ಕ್ಷಣದಲ್ಲಿ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಈ ಹಿನ್ನೆಲೆಯಲ್ಲಿ ಈ ಬಾರಿಯ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯೂ ಎಲ್ಲರಲ್ಲಿ ಕುತೂಹಲ ಮೂಡಿಸಿದೆ.

” ಸಾಮಾನ್ಯ ಸಭೆ ನಡೆದ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಸದಸ್ಯರನ್ನು ಸದಸ್ಯರು ಒಗ್ಗೂಡಿ ಆಯ್ಕೆ ಮಾಡಿದ್ದಾರೆ. ಮಾ.೨೫ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಿಗದಿ ಮಾಡಿದ್ದು ನಂತರ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಬಜೆಟ್ ಸಭೆಯನ್ನು ಮುಂದೆ ನಡೆಸಲಾಗುವುದು.”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ 

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago