Andolana originals

ಮಡಿಕೇರಿ: ಪ್ರವಾಸಿಗರಿಗೆ ಲಭ್ಯವಾಗದ ಕೂರ್ಗ್ ವಿಲೇಜ್

ಪ್ರವಾಸೋದ್ಯಮ ಇಲಾಖೆಯಿಂದ ೯೮.೫೦ P ರೂ. ವೆಚ್ಚದಲ್ಲಿ ಅಭಿವೃದ್ಧಿ; ಮಾಹಿತಿ ಕೊರತೆಯಿಂದ ಪಾಳುಬಿದ್ದ ಪ್ರವಾಸಿ ತಾಣ

ಮಡಿಕೇರಿ: ನಗರದ ಹೃದಯ ಭಾಗದಲ್ಲಿರುವ ಕೂರ್ಗ್ ವಿಲೇಜ್‌ನ ಕಾಮಗಾರಿ ಪೂರ್ಣಗೊಂಡು ೪ ವರ್ಷಗಳು ಕಳೆದರೂ ಸಾರ್ವಜನಿಕರು ಹಾಗೂ ಪ್ರವಾಸಿಗರ ಬಳಕೆಗೆ ಲಭ್ಯವಾಗಿಲ್ಲ.

ಮಡಿಕೇರಿಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ರಾಜಾಸೀಟ್‌ಗೆ ಹೊಂದಿಕೊಂಡಂತೆ ಇರುವ ಸ್ಥಳದಲ್ಲಿ ನಿರ್ಮಾಣವಾಗಿರುವ ಕೂರ್ಗ್ ವಿಜೇಜ್ ಪ್ರವಾಸಿ ಯೋಜನೆ ೨೦೧೯ರಲ್ಲಿ ಆರಂಭವಾಗಿದ್ದು, ೨೦೨೦ಕ್ಕೆ ಯೋಜನೆಯ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಈ ಸ್ಥಳವನ್ನು ಬಳಕೆಗೆ ನೀಡಲು ತೋಟಗಾರಿಕೆ ಇಲಾಖೆ ಸಿದ್ಧವಿದ್ದರೂ ಪ್ರವಾಸಿಗರು ಭೇಟಿ ನೀಡುತ್ತಿಲ್ಲ ಎಂಬ ತಲೆನೋವು ಕಾಡುತ್ತಿದೆ.

ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಅನೀಸ್ ಕಣ್ಮಣಿ ಜಾಯ್ ಅವರ ಕಾಳಜಿಯೊಂದಿಗೆ ಕೂರ್ಗ್ ವಿಲೇಜ್ ರೂಪುಗೊಂಡಿದ್ದು, ಈ ಯೋಜನೆಯನ್ವಯ ಕೆಲವು ಅಂಗಡಿ ಮಳಿಗೆಗಳನ್ನು ನಿರ್ಮಿಸಿ ಮಳಿಗೆಗಳಲ್ಲಿ ಕೊಡಗಿನ ಗೃಹ ಕೈಗಾರಿಕೆ ತಯಾರಿಕಾ ವಸ್ತುಗಳನ್ನು ಕೈಗೆಟುಕುವ ದರದಲ್ಲಿ ಮಾರಾಟ ಮಾಡುವ ಉzಶ ಹೊಂದಲಾಗಿತ್ತು. ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಆಕರ್ಷಿಸುವ ದಿಸೆಯಲ್ಲಿ ಕೂರ್ಗ್ ವಿಲೇಜ್ ರೂಪುಗೊಂಡಿತ್ತು.

ರಾಜಾಸೀಟ್‌ಗೆ ಆಗಮಿಸುವ ಪ್ರವಾಸಿಗರು ಕೂರ್ಗ್ ವಿಲೇಜ್‌ಗೂ ಭೇಟಿ ನೀಡಬಹುದು ಎಂಬ ಆಶಯವೂ ಇತ್ತು. ಆದರೆ, ರಾಜಾಸೀಟ್ ಗೆ ಭೇಟಿ ನೀಡಿದ ಪ್ರವಾಸಿಗರು ಮಾಹಿತಿ ಕೊರತೆಯಿಂದ ರಾಜಾಸೀಟ್ ಸುತ್ತಿ ಅತ್ತಕಡೆಯಿಂದಲೇ ಹಿಂದಿರುಗುತ್ತಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಯಿಂದ ೯೮.೫೦ ಲಕ್ಷ ರೂ. ವೆಚ್ಚದಲ್ಲಿ ಕೂರ್ಗ್ ವಿಲೇಜ್ ನಿರ್ಮಾಣಗೊಂಡಿದೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿ ಯೋಜನೆ ತಲೆ ಎತ್ತಿದ್ದು, ಕೊಡಗು ನಿರ್ಮಿತಿ ಕೇಂದ್ರ ಕಾಮಗಾರಿ ನಿರ್ವಹಿಸಿತ್ತು. ಜಿಲ್ಲಾಡಳಿತದ ಪರಿಕಲ್ಪನೆಯಂತೆ ಉತ್ತಮವಾಗಿ ಪ್ರವಾಸಿತಾಣ ರೂಪುಗೊಂಡಿದೆ. ಇದೇ ರೀತಿ ಪಾಳು ಬಿಟ್ಟರೆ ಲಕ್ಷಾಂತರ ರೂ. ವ್ಯಯವಾಗಲಿದೆ. ಆದ್ದರಿಂದ ಇದನ್ನು ಶೀಘ್ರವಾಗಿ ಪ್ರವಾಸಿಗರ ಬಳಕೆ ಲಭ್ಯವಾಗುವಂತೆ ಮಾಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಕೂರ್ಗ್ ವಿಲೇಜ್‌ನಲ್ಲಿರುವ ೧೫ ಮಳಿಗೆ ಗಳನ್ನು ಈ ಹಿಂದೆ ಹಂಚಿಕೆ ಮಾಡಲಾಗಿತ್ತು. ತೋಟಗಾರಿಕಾ ಇಲಾಖೆಗೆ ೪, ಪ್ರವಾಸೋದ್ಯಮ ಇಲಾಖೆಗೆ ೧, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ೩, ತಾಲ್ಲೂಕು ಪಂಚಾಯಿತಿಗೆ ೨, ಗಿರಿಜನ ಕಲ್ಯಾಣ ಇಲಾಖೆಗೆ ೨, ಖಾದಿ ಹಾಗೂ ಗ್ರಾಮೋದ್ಯೋಗ ಇಲಾಖೆಗೆ ೧, ಕಾಫಿ ಮಂಡಳಿ ಹಾಗೂ ನಗರಸಭೆಗೆ ತಲಾ ಒಂದೊಂದು ಮಳಿಗೆಯನ್ನು ನೀಡಲಾಗಿತ್ತು. ತೋಟಗಾ ರಿಕೆ ಇಲಾಖೆಯಡಿ ಮಳಿಗೆಗಳು ನಿರ್ವಹಿಸಲ್ಪಡುತ್ತಿದ್ದವು. ಆದರೆ, ಆರಂಭಗೊಂಡ ಕೆಲವೇ ದಿನಗಳಲ್ಲಿ ಪ್ರವಾಸಿಗರು ಭೇಟಿ ನೀಡದ ಪರಿಣಾಮ ಮಳಿಗೆಗಳನ್ನು ಮುಚ್ಚಲಾಗಿದೆ. ಅಲ್ಲದೇ, ಹೂ ಕುಂಡಗಳು ಒಡೆದು ಹಾಳಾಗಿವೆ. ಕೂರ್ಗ್ ವಿಲೇಜ ಆವರಣದಲ್ಲಿ ಆಕರ್ಷಣೆಯ ನೀರಿನ ಕೊಳವೊಂದಿದ್ದು, ಕೊಳದ ಸುತ್ತಲೂ ಕಬ್ಬಿಣದ ಗ್ರಿಲ್ ಅಳವಡಿಸಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಕಲ್ಲು ಹಾಸು ಹಾಕಲಾಗಿದೆ. ರಾಜಾಸೀಟ್ ಹಾಗೂ ನೆಹರು ಮಂಟಪಕ್ಕೆ ಭೇಟಿ ನೀಡುವ ಪ್ರವಾಸಿಗರು ಕೂರ್ಗ್ ವಿಲೇಜ್‌ಗೆ ಬಂದರೆ ಸುಂದರ ಪರಿಸರದಲ್ಲಿ ವಿಹರಿಸಿ ಒಂದೇ ಸೂರಿನಡಿ ತಮಗೆ ಇಷ್ಟವಾದ ವಸ್ತುಗಳನ್ನು ಖರೀದಿಸಲು ಅವಕಾಶವಿತ್ತು. ಕೊಡಗಿನ ಗೃಹೋಪಯೋಗಿ ವಸ್ತುಗಳ ತಯಾರಿಕೆಯಲ್ಲಿ ತೊಡಗಿರುವ ಮಹಿಳೆಯ ರಿಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಅನುಕೂಲವಾಗುತ್ತಿತ್ತು. ಕೂರ್ಗ್ ವಿಲೇಜ್‌ಗೆ ಉತ್ತಮ ಪ್ರಚಾರ ನೀಡಿ, ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಆಗಿಲ್ಲ. ಕಾಫಿ ಉತ್ಸವ ಮತ್ತು ಜೇನು ಹಬ್ಬ ಇಂತಹ ಸಂದರ್ಭದಲ್ಲಿ ಕೂರ್ಗ್ ವಿಲೇಜ್ ಅನ್ನು ಬಳಸಿಕೊಳ್ಳಲು ಅವಕಾಶವಿತ್ತು. ಇಂದು ಆ ಕಾರ್ಯಕ್ರಮಗಳು ರಾಜಾಸೀಟಿಗಷ್ಟೇ ಸೀಮಿತವಾಗಿವೆ.

ಏನೇನು ಇದೆ?

ಈ ಸ್ಥಳದಲ್ಲಿರುವ ವಿಶಾಲ ತೆರೆದ ಬಾವಿಯ ಸುತ್ತ ಅಲ್ಲಲ್ಲಿ ಪುಟ್ಟ ಮಳಿಗೆಗಳು ತಲೆಯೆತ್ತಿವೆ. ಪ್ರವಾಸಿಗರಿಗೆ ಕೊಡಗಿನ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಮಾರಾಟ ವಸ್ತುಗಳು ಲಭಿಸಲಿವೆ. ವಾಯುವಿಹಾರದೊಂದಿಗೆ ಕಲ್ಲು ಬೆಂಚುಗಳಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಈ ಪ್ರದೇಶದಲ್ಲಿ ಸುರಕ್ಷತೆ ದೃಷ್ಟಿಯಿಂದ ಬ್ಯಾರಿಕೇಡ್ ಅಳವಡಿಕೆ, ಕಾಲುದಾರಿ ವ್ಯವಸ್ಥೆ, ಮೆಟ್ಟಿಲುಗಳು, ರೈಲಿಂಗ್ಸ್ ಇತ್ಯಾದಿ ಕಾಮಗಾರಿ ನಡೆದಿದೆ.

” ರಾಜಾಸೀಟ್ ಎದುರಿನ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೂರ್ಗ್ ವಿಲೇಜ ಕಟ್ಟಡ ಇಂದು ಯಾರಿಗೂ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದೆ. ಪ್ರವಾಸಿಗರನ್ನು ಗಮನದಲ್ಲಿಟ್ಟು ತೋಟಗಾರಿಕೆ ಇಲಾಖೆ ನಿರ್ಮಿಸಿದ ಮಳಿಗೆಗಳು ಉದ್ಘಾಟನೆ ಬಳಿಕ ಪ್ರಚಾರದ ಕೊರತೆಯಿಂದಾಗಿ ಬೀಗ ಬಿದ್ದಿದ್ದು, ಮೌನಕ್ಕೆ ಜಾರಿದೆ. ಇದರಿಂದಾಗಿ ಸಾರ್ವಜನಿಕರ ಹಣವನ್ನು ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಈ ತಾಣಕ್ಕೆ ಮತ್ತೆ ಜೀವ ಕಳೆ ತುಂಬುವ ಕೆಲಸ ಮಾಡಬೇಕಾಗಿದೆ.”

-ಜೆ.ರವಿಗೌಡ, ಅಧ್ಯಕ್ಷರು, ಕೊಡಗು ಹಿತರಕ್ಷಣಾ ವೇದಿಕೆ

” ಕೂರ್ಗ್ ವಿಲೇಜ್ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಪ್ರವಾಸಿಗರು ಭೇಟಿ ನೀಡದ ಪರಿಣಾಮ ಕೂರ್ಗ್ ವಿಲೇಜ್ ಮಳಿಗೆಗಳಲ್ಲಿ ವ್ಯಾಪಾರವಿಲ್ಲ. ಈ ಹಿನ್ನೆಲೆಯಲ್ಲಿ ಪ್ರವಾಸಿಗರು ಬಾರದೆ ಮುಚ್ಚಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ರಾಜಾಸೀಟ್‌ಗೆ ಬರುವ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ.”

-ಯೋಗೇಶ್, ಉಪ ನಿರ್ದೇಶಕರು, ತೋಟಗಾರಿಕಾ ಇಲಾಖೆ 

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

9 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

9 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

9 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

9 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

10 hours ago