Andolana originals

ಮಡಿಕೇರಿ: ತೂಗು ತೊಟ್ಟಿಲ ಶಾಲೆ; ಗುಹೆಯೊಳಗೆ ಪಾಠ!

ನವೀನ್ ಡಿಸೋಜ

ಮಕ್ಕಳ ಕುತೂಹಲದ ಕೇಂದ್ರವಾದ ಮುಳ್ಳೂರು ಶಾಲೆ ೭೦ ಸಾವಿರ ರೂ. ವೆಚ್ಚದಲ್ಲಿ ನಿರ್ಮಿಸಿದ ಮುಖ್ಯ ಶಿಕ್ಷಕ ಸತೀಶ 

ಮಡಿಕೇರಿ: ಶಾಲಾ ಆವರಣವನ್ನು ಪ್ರವೇಶಿಸುತ್ತಿದ್ದಂತೆ ಭಯಾನಕ ಗುಹೆಯೊಂದು ಎದುರಾಗುತ್ತದೆ. ಹೆದರಿಕೆಯಿಂದಲೆ ಒಳಗೆ ಹೊಕ್ಕರೆ ಕಾಣಸಿಗುವುದು ಬಾವಲಿಗಳ ಮಾದರಿಗಳು, ಜೇಡರ ಬಲೆಗಳು, ಅಸ್ಥಿ ಪಂಜರಗಳು, ಸ್ಮಾರಕಗಳು, ಇತಿಹಾಸದ ಪಳೆಯುಳಿಕೆಗಳು, ಕೃತಕ ಪ್ರಾಣಿಗಳ ಮಾದರಿಗಳು ಮಕ್ಕಳಿಗೆ ರೋಮಾಂಚನ ಉಂಟು ಮಾಡುತ್ತವೆ.

ಗುಹೆಯು ಕೊನೆಯಾಗುತ್ತಿದಂತೆ ಆಕಾಶಕ್ಕೇರುವಂತೆ ಮೆಟ್ಟಿಲುಗಳು ಗೋಚರಿಸುತ್ತವೆ. ಒಂದೊಂದೇ ಮೆಟ್ಟಿಲೇ ರುತ್ತಾ ಹೋದಂತೆ ಮರದ ಮೇಲಿರುವ ತೂಗು ತೊಟ್ಟಿಲ ಪಾಠಶಾಲೆ ಕಾಣಸಿಗುತ್ತದೆ. ತಂಗಾಳಿಯ ನಡುವೆ ಪ್ರಕೃತಿಯ ಮಡಿಲಲ್ಲೇ ಪುಟ್ಟ ಪುಟ್ಟ ಮಕ್ಕಳು ತಮ್ಮ ನೆಚ್ಚಿನ ಶಿಕ್ಷಕರನ್ನು ಸುತ್ತುವರಿದು ಪ್ರಾಣಿ ಪಕ್ಷಿಗಳ ಇಂಚರದೊಂದಿಗೆ ಪ್ರಕೃತಿಯ ಮಡಿಲಲ್ಲೇ ಪಾಠ ಕಲಿಯುವ ದೃಶ್ಯ ಮನಸ್ಸಿಗೆ ಮುದ ನೀಡುತ್ತದೆ. ಇಲ್ಲಿಯೂ ವಿವಿಧ ಕೀಟಗಳ, ಪಕ್ಷಿಗಳ ಗೂಡು ಗಳು, ಹೂವುಗಳು ತೂಗು ತೊಟ್ಟಿಲ ರಮ್ಯತೆಯನ್ನು ಹೆಚ್ಚಿಸಿದೆ.

ಜಿಪ್ ಲೈನ್, ರೋಪ್ ವಾಕ್, ಸ್ವಿಮ್ಮಿಂಗ್ ಪೂಲ್, ಮೃಗಾಲಯ ಹೀಗೆ ವಿಭಿನ್ನತೆಯಿಂದ ಕೂಡಿರುವ ಮುಳ್ಳೂರಿನ ಸರ್ಕಾರಿ ಶಾಲೆ ಇದೀಗ ಎಲ್ಲರ ಗಮನ ತನ್ನತ್ತ ಸೆಳೆದಿದೆ. ಮಕ್ಕಳ ಸಾಹಸ ಮನೋಭಾವವನ್ನು ಉತ್ತೇಜಿಸುವ ಗುಹೆ ಹಾಗೂ ಹೊಂಗೆ ಮರದ ಮೇಲಿರುವ ೨೦ ಅಡಿ ಎತ್ತರದ ತೂಗು ತೊಟ್ಟಿಲ ಪಾಠ ಶಾಲೆ ಈಗ ವಿದ್ಯಾರ್ಥಿಗಳ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ.

ಬೇಸಿಗೆ ಮತ್ತು ಮಳೆಗಾಲದ ರಜೆಯ ಸಮಯದಲ್ಲಿ, ಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್.ಸತೀಶ ಅವರು ವೈಯಕ್ತಿವಾಗಿ ೭೦ ಸಾವಿರ ರೂ. ವೆಚ್ಚ ಮಾಡಿ ಸ್ವತಃ ಈ ವಿಶಿಷ್ಟ ಆಕರ್ಷಣೆಗಳನ್ನು ನಿರ್ಮಿಸಿದ್ದಾರೆ.ಇಪ್ಪತ್ತು ಅಡಿ ಎತ್ತರದಲ್ಲಿ ನಿರ್ಮಾಣಗೊಂಡಿರುವ ಈ ತೂಗು ತೊಟ್ಟಿಲು, ಇಪ್ಪತ್ತು ಅಡಿ ಉದ್ದ ಹಾಗೂ ಹತ್ತು ಅಡಿ ಅಗಲವಿದೆ. ಏಕಕಾಲದಲ್ಲಿ ೩೦ ವಿದ್ಯಾರ್ಥಿಗಳು ಕುಳಿತುಕೊಳ್ಳಬಹುದಾದ ಸಾಮರ್ಥ್ಯವನ್ನು ಹೊಂದಿದೆ. ಗುಹೆ ಕೂಡ ೨೦ ಅಡಿ ಉದ್ದ, ೩ ಅಡಿ ಅಗಲ, ೬ ಅಡಿ ಎತ್ತರ ಇದೆ.

ಶಿಕ್ಷಕನ ಕ್ರಿಯಾಶೀಲತೆ ಬಗ್ಗೆ ಮೆಚ್ಚುಗೆ: ಮತ್ತೊಂದು ವಿಶೇಷವೆಂದರೆ ಇದನ್ನು ನಿರ್ಮಿಸಿದವರು ಯಾರೋಗಾರೆಯವರೋ, ವೆಲ್ಡರೋ, ಇಂಜಿನಿಯರೋ ಅಲ್ಲ. ಮುಖ್ಯ ಶಿಕ್ಷಕ ಸತೀಶ್ ಸ್ವತಃ ವೆಲ್ಡಿಂಗ್, ಗಾರೆ, ಪೇಂಟಿಂಗ್ ಎಲ್ಲವನ್ನೂ ಮಾಡಿದ್ದಾರೆ. ಬೇಸಿಗೆ ಮತ್ತು ಮಳೆಗಾಲದ ರಜೆಯ ಸಮಯವನ್ನು ಬಳಸಿಕೊಂಡು ಹಗಲು ರಾತ್ರಿ ಎಂಬ ಸಮಯದಪರಿವೇ ಇಲ್ಲದೆ ಗುಹೆ ಮತ್ತು ತೂಗು ತೊಟ್ಟಿಲ ಪಾಠಶಾಲೆ ಕಟ್ಟಿದ್ದಾರೆ. ಈ ಪುಟ್ಟ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ಕ್ಲಾಸ್, ಸುಸಜ್ಜಿತ ಪ್ರಯೋಗಾಲಯ, ಮಕ್ಕಳ ಮನೋಮಟ್ಟಕ್ಕೆ ನಿಲುಕುವ ಗ್ರಂಥಾಲಯ, ತರಗತಿ ಕೋಣೆಗಳು ಕಲಿಕೋಪಕರಣಗಳಿಂದ ಸಂಪತ್‌ದ್ಭರಿತವಾಗಿ ಕಲಿಕೆಗೆ ಸಹಾಯಕವಾಗಿವೆ. ಪೋಷಕರು ಹಾಗೂ ಗ್ರಾಮಸ್ಥರು ಕೂಡ ಈ ಪ್ರಯತ್ನವನ್ನು ಮೆಚ್ಚಿ, ಶಿಕ್ಷಕರ ಶ್ರಮವನ್ನು ಶ್ಲಾಘಿಸಿದ್ದಾರೆ.

” ಇಂತಹ ಪ್ರಯೋಗಗಳು ಮಕ್ಕಳ ಸೃಜನಾತ್ಮಕತೆ, ಧೈರ್ಯ ಮತ್ತು ಪ್ರಕೃತಿ ಪ್ರೇಮವನ್ನು ಬೆಳೆಸುತ್ತವೆ. ನನ್ನ ಸಹೋದ್ಯೋಗಿ ಶಿಕ್ಷಕರಾದ ಜಾನ್ ಪಾವ್ಲ್ ಡಿ’ಸೋಜ ಮತ್ತು ಶಿಕ್ಷಕಿ ಶೀಲಾರವರ ಸಹಕಾರದಿಂದ ಈ ರೀತಿಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ.”

-ಸಿ.ಎಸ್. ಸತೀಶ್, ಮುಖ್ಯ ಶಿಕ್ಷಕ, ಸರ್ಕಾರಿ ಪ್ರಾಥಮಿಕ ಶಾಲೆ, ಮುಳ್ಳೂರು

ಆಂದೋಲನ ಡೆಸ್ಕ್

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

12 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

12 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

12 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

13 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

15 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

16 hours ago