Andolana originals

ದಾಖಲೆಯ ಮೊತ್ತಕ್ಕೆ ಮಡಿಕೇರಿ ನಗರಸಭೆ ಮಳಿಗೆಗಳು ಹರಾಜು

ಇ-ಟೆಂಡರ್‌ ಮೂಲಕ ನಡೆದ 53 ಮಳಿಗೆಗಳು ಹರಾಜು ಪ್ರಕ್ರಿಯೆ ; 16 ಮಳಿಗೆಗಳು ಅನರ್ಹ

ಮಡಿಕೇರಿ: ನಗರಸಭೆ ಅಧಿನದಲ್ಲಿರುವ 53 ಮಳಿಗೆಗಳ ಹರಾಜು ಪ್ರಕ್ರಿಯೆ ಇ-ಟೆಂಡರ್ ಮೂಲಕ ಇತ್ತೀಚೆಗೆ ನಡೆದಿದ್ದು, ದಾಖಲೆ ಮೊತ್ತಕ್ಕೆ ಬಿಡ್ಡಿಂಗ್ ಆಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ಯಾರೂ ನಿರೀಕ್ಷಿಸದ ರೀತಿಯಲ್ಲಿ ಕಳೆದ ಬಾರಿಗಿಂತಲೂ 4-5 ಪಟ್ಟು, ಕೆಲವರಂತೂ ಹತ್ತು ಪಟ್ಟಿಗೂ ಹೆಚ್ಚು ದರ ನೀಡಿ ಮಳಿಗೆಗಳನ್ನು ಬಿಡ್ಡಿಂಗ್ ಮೂಲಕ ಪಡೆದುಕೊಂಡಿರುವುದು ಗಮನಾರ್ಹ ಸಂಗತಿಯಾಗಿದೆ. 53 ಮಳಿಗೆಗಳ ಪೈಕಿ 16 ಮಳಿಗೆಗಳು ಸಿಂಗಲ್ ಬಿಡ್, ಕಳೆದ ಬಾರಿಗಿಂತ ಕಡಿಮೆ ಮೊತ್ತದ ಬಿಡ್ ಎಂಬ ಕಾರಣಕ್ಕೆ ಅನರ್ಹಗೊಂಡಿವೆ.

ಕಳೆದ 12 ವರ್ಷಗಳ ಹಿಂದೆ ಬಿಡ್ಡಿಂಗ್ ಮೂಲಕ ಮಳಿಗೆ ಖರೀದಿಸಿ ಅವಽ ಕೊನೆಗೊಂಡ ಸಂದರ್ಭವಿದ್ದ ಬಾಡಿಗೆಯ ಮೊತ್ತ ಹಾಗೂ ಈ ಬಾರಿ ಹರಾಜಾಗಿರುವ ಮೊತ್ತದ ನಡುವೆ ಅಜಗಜಾಂತರ ವ್ಯತ್ಯಾಸಗಳಿವೆ. ಯಾರೂ ನಿರೀಕ್ಷಿಸಿದ ದರದಲ್ಲಿ ವ್ಯಾಪಾರಿಗಳು ಮಳಿಗೆ ಪಡೆದುಕೊಂಡಿ ರುವುದು ನಿಬ್ಬೆರಗಾಗುವಂತೆ ಮಾಡಿದೆ. 53 ಮಳಿಗೆಗಳ ಪೈಕಿ ಅನರ್ಹಗೊಂಡ 16 ಮಳಿಗೆಗಳನ್ನು ಹೊರತುಪಡಿಸಿದರೆ ಒಟ್ಟು 37 ಮಳಿಗೆಗಳ ಬಿಡ್ಡಿಂಗ್ ಅಂತಿಮಗೊಂಡಿದೆ. ಕಳೆದ 12 ವರ್ಷಗಳ ಅವಧಿಗೆ ಹರಾಜಾದ

ಒಟ್ಟು 53 ಮಳಿಗೆಗಳಿಗೆ ಕೊನೆ ತಿಂಗಳ ಒಟ್ಟು ಬಾಡಿಗೆ ರೂ. 4,72,619 ಆಗಿತ್ತು. ಈ ವರ್ಷ ರೂ.10,60,138ಗೆ ಮಳಿಗೆಗಳು ಹರಾಜಾಗಿವೆ. ಶೇ. 224 ಲಾಭಾಂಶವನ್ನು ನಗರಸಭೆ ಪಡೆದಿದೆ. ಗಣನೀಯ ಪ್ರಮಾಣದಲ್ಲಿ ಬಿಡ್ಡುದಾರರು ಮಳಿಗೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದ ರೊಂದಿಗೆ ತಿಂಗಳಿಗೆ ಇಷ್ಟೊಂದು ಪ್ರಮಾಣದ ಬಾಡಿಗೆ ನೀಡಿ ವ್ಯವಹಾರ ನಡೆಸಬಹುದಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.

12 ವರ್ಷದ ಅವಧಿಗೆ ಬಿಡ್ ಮೂಲಕ ಅಂಗಡಿಯನ್ನು ವ್ಯಾಪಾರಿಗಳು ಪಡೆಯಲು ಅವಕಾಶವಿದ್ದು, ಬಿಡ್‌ನಲ್ಲಿ ಸೂಚಿಸಿದ ಮೊತ್ತ ಪ್ರತಿ ತಿಂಗಳ ಬಾಡಿಗೆಯಾಗಿರುತ್ತದೆ. ಪ್ರತಿ ೩ ವರ್ಷಕ್ಕೊಮ್ಮೆ ದರವನ್ನು ಹೆಚ್ಚಿಸಲು ಅವ ಕಾಶವಿದೆ. ಬಿಡ್ಡಿಂಗ್ ಮೂಲಕ ಮಳಿಗೆ ಪಡೆದವರು ಹಣ ನೀಡದಿದ್ದರೆ ಠೇವಣಿ ರೂಪದಲ್ಲಿ ಪಾವತಿಸಿದ್ದ ಹಣವನ್ನು ಮುಟ್ಟು ಗೋಲು ಹಾಕಿಕೊಳ್ಳಬಹುದಾಗಿದೆ ಎಂದು ನಗರಸಭೆ ಆಯುಕ್ತ ರಮೇಶ್ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

2 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

3 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

4 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

4 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

4 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

4 hours ago