Andolana originals

ಫೆ.6ರಂದು ಮಹದೇಶ್ವರ ದೇವಾಲಯದ ಉದ್ಘಾಟನೆ

ಎಂ.ಯೋಗಾನಂದ್

ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ 

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ ದೇಗುಲದ ಉದ್ಘಾಟನೆ ಫೆ.೬ರಂದು ನಡೆಯಲಿದೆ.

ಫೆ.೪ರ ಬುಧವಾರದಿಂದಲೇ ಮಲೆ ಮಹದೇಶ್ವರ ದೇವರ ಪ್ರತಿಷ್ಠಾಪನೆ ಮತ್ತು ಗೋಪುರ ಶಿಖರ, ಕಳಸ ಪ್ರತಿಷ್ಠಾಪನಾ ಮಹೋತ್ಸವದ ಕಾರ್ಯಕ್ರಮಕ್ಕೆ ಸಂಬಂಧಿಸಿದ ದೇವತಾ ಕಾರ್ಯಗಳು ಆರಂಭವಾಗಲಿವೆ.

ಫೆ.೪ರಂದು ಸಂಜೆ ೬ ಗಂಟೆಗೆ ತೀರ್ಥ ಸಂಗ್ರಹಣೆ, ಅಂಕುರಾರೋಹಣ, ಗಣಪತಿ ಪೂಜೆ, ಗೋಪೂಜೆ ಗ್ರಾಮ ಪ್ರದಕ್ಷಿಣೆ, ಧ್ವಜಾರೋಹಣ, ದೀಪಾರಾಧನೆ, ಸಭಾ ಪ್ರಾರ್ಥನೆ, ಪ್ರವೇಶ ಬಲಿ, ಆಲಯ ಪ್ರವೇಶ, ಮಹಾಸಂಕಲ್ಪ, ಪುಣ್ಯಾಹ, ನಾಂದಿ, ರಕ್ಷಾಬಂಧನ, ವಾಸ್ತುಪೂಜೆ, ರಕ್ಷೋಘ್ನ ಪೂಜೆ ನಡೆಯಲಿದೆ. ಫೆ.೫ರಂದು ಬೆಳಿಗ್ಗೆ ೧೧.೪೫ಕ್ಕೆ ಪೂಜಾ ಕಾರ್ಯಕ್ರಮಗಳು ಆರಂಭವಾಗಿ ತತ್ವ ಕಳಸ, ಪ್ರಧಾನ ಉಮಾಮಹೇಶ್ವರ ಕಲಶಾರಾಧನೆ, ಲಕ್ಷ್ಮೀನಾರಾಯಣ ಕಳಶ, ಬ್ರಹ್ಮ ಕಳಶ, ನವಗ್ರಹ ಕಳಶ, ಮಹಾ ಮೃತ್ಯುಂಜಯ ಕಳಶ, ಸಪ್ತಸಭಾ ಕಳಶ, ಸಪ್ತ ಮಾತೃಕಾ ಕಳಶ, ದಿಕ್ಪಾಲಕ ಕಳಶ ಪ್ರತಿಷ್ಠಾಪಿಸಿ ಈ ದೇವತಾ ಕಲಶಗಳಿಗೆ ಪೂಜಾರಾಧನೆ ಹಾಗೂ ಹೋಮ, ಹವನ ಮುಂತಾದ ಪೂಜೆಗಳು ನಡೆಯಲಿವೆ. ಫೆ.೬ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿದ್ದು, ಅಂದು ಬೆಳಿಗ್ಗೆ ೧೧ ಗಂಟೆಗೆ ಧಾರ್ಮಿಕ ಸಭಾ ಕಾರ್ಯ ಕ್ರಮಗಳು ನಡೆಯಲಿದ್ದು, ಆದಿಚುಂಚನಗಿರಿ ಮಠದ ಡಾ.ಬಾಲಗಂಗಾಧರ ನಾಥ ಸ್ವಾಮಿಗಳ ಆಶೀರ್ವಾದದೊಂದಿಗೆ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಗಳುವಹಿಸಲಿದ್ದು, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಮಾದಳ್ಳಿ ಉಕ್ಕಿನಕಂತೆ ಮಠದ ಶ್ರೀ ಸಾಂಬಸದಾಶಿವ ಸ್ವಾಮೀಜಿ ಉಪಸ್ಥಿತರಿರುವರು.

ಅತಿಥಿಗಳಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಹೆಚ್. ಪಿ.ಮಂಜುನಾಥ್, ಮೈಮುಲ್ ನಿರ್ದೇಶಕ ಕೆ.ಎಸ್.ಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಟಿ.ರಾಜಣ್ಣ, ಜಾ.ದಳ ಮುಖಂಡರಾದ ಹರವೆ ಶ್ರೀಧರ್, ಹಿರಿಕ್ಯಾತನಹಳ್ಳಿ ಗ್ರಾಪಂ ಅಧ್ಯಕ್ಷರಾದ ಶಿಲ್ಪಶ್ರೀ, ಉದ್ಯಮಿ ದೇವರಹಳ್ಳಿ ಸೋಮ ಶೇಖರ್, ಹಿರೀಕ್ಯಾತನಹಳ್ಳಿ ದೊಡ್ಡಯಜಮಾನರಾದ ಹೆಚ್.ಆರ್.ಜಗದೀಶ್ ಯಜಮಾನರಾದ ಪಾಪಣ್ಣ ಭಾಗವಹಿಸಲಿದ್ದಾರೆ.

ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರಿಗೆ ಮಧ್ಯಾಹ್ನ ೧ ಗಂಟೆಗೆ ಅನ್ನದಾಸೋಹ ನಡೆಯಲಿದೆ. ರಾತ್ರಿ ೮ ಗಂಟೆಗೆ ಚಂಡಾಸುರನ ವಧೆ ಅಥವಾ ಹೇಮಾವತಿ ಪರಿಣಯ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.

” ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನೂತನವಾಗಿ ಮಹದೇಶ್ವರ ದೇವಸ್ಥಾನವನ್ನು ಗ್ರಾಮದ ಸರ್ವ ಜನಾಂಗದವರ ಸಹಕಾರದೊಂದಿಗೆ ಕಟ್ಟಿದ್ದೇವೆ. ಫೆ.೬ರಂದು ದೇವಸ್ಥಾನ ಉದ್ಘಾಟನೆಗೊಳ್ಳಲಿದ್ದು ಗ್ರಾಮದ ಎಲ್ಲರೂ ತಮ್ಮ ಸಂಬಂಧಿಕರರಿಗೆ, ಗ್ರಾಮದಿಂದ ಬೇರೆಡೆಗೆ ಮದುವೆಯಾಗಿರುವ ಹೆಣ್ಣು ಮಕ್ಕಳ ಕುಟುಂಬಸ್ಥರಿಗೆ, ಸ್ನೇಹಿತರಿಗೆ ತಿಳಿಸಿ ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು.”

-ಜಗದೀಶ್, ಗ್ರಾಮದ ಮುಖಂಡ 

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

12 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

15 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

15 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

15 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

15 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

15 hours ago