Andolana originals

ಕಂಬಳಕ್ಕೆ ಸಿದ್ಧವಾದ ಮಹದೇವ ನಗರದ ರಸ್ತೆ!

ಎಸ್.ಎಸ್.ಭಟ್

ನಂಜನಗೂಡಿನ ಮಹದೇವ ನಗರದ ರಸ್ತೆ ಅವ್ಯವಸ್ಥೆ; ನಿವಾಸಿಗಳ ಆಕ್ರೋಶ 

ನಂಜನಗೂಡು: ತಾಲ್ಲೂಕಿನ ಕಾಡಂಚಿನ ಹೆಡಿಯಾಲ ಗ್ರಾಮ ಪಂಚಾಯಿತಿಗೆ ಸೇರಿದ ಮಹದೇವ ನಗರದ ರಸ್ತೆ ಕರಾವಳಿ ಭಾಗದ ಕಂಬಳಕ್ಕೆ ಸಿದ್ಧವಾದಂತಿದೆ.

ಹಿಂದೆ ಶಾಸಕರಾಗಿದ್ದ ಎಂ.ಮಹದೇವು ಇಲ್ಲಿ ರಸ್ತೆ, ಚರಂಡಿ ಸಹಿತವಾದ ಹೊಸ ಬಡಾವಣೆ ನಿರ್ಮಿಸಿ ೮೦ಕ್ಕೂ ಹೆಚ್ಚು ಬಡವರಿಗೆ ಸೂರು ಕಲ್ಪಿಸಿದ್ದರಿಂದ ಇದಕ್ಕೆ ಮಹದೇವ ನಗರ ಎಂದೇ ನಾಮಕರಣ ಮಾಡಲಾಗಿದೆ. ಆದರೆ, ಇಂದು ಬಡಾವಣೆಯ ರಸ್ತೆ ಹದಗೆಟ್ಟು ಮಳೆ ಬಂದರೆ ಚರಂಡಿ ಯಾವುದು, ರಸ್ತೆ ಯಾವುದು ಎಂದು ತಿಳಿಯಲಾರದ ಸ್ಥಿತಿ ನಿರ್ಮಾಣವಾಗಿದೆ.

ಬೇಗೂರು-ಸರಗೂರು ಮುಖ್ಯ ರಸ್ತೆಯಿಂದ ಮಹದೇವ ನಗರವನ್ನು ಹಾದು ನಾಗಣಾಪುರ ಕಾಲೋನಿಗೆ ಸಾಗುವ ಈ ರಸ್ತೆಯ ಸ್ಥಿತಿ ಜನಸಂಚಾರ ಮಾಡುವ ಬದಲಾಗಿ ಕರಾವಳಿ ಜಿಲ್ಲೆಗಳಲ್ಲಿ ಕೋಣಗಳನ್ನು ಓಡಿಸುವ ಪಂದ್ಯಕ್ಕೆ ಸಿದ್ಧಗೊಳಿಸಿದಂತಿರುವುದು ವಿಪರ್ಯಾಸ.

ಇದೇ ರಸ್ತೆಯಲ್ಲಿ ಶಾಲೆಗಳಿಗೆ ನಿತ್ಯ ತೆರಳುವ ಮಕ್ಕಳ ಸ್ಥಿತಿಯಂತೂ ಹೇಳಲು ಅಸಾಧ್ಯವಾಗಿದೆ. ಅವರು ರಸ್ತೆಯಲ್ಲಿ ನಡೆದು ಬರುವಾಗ ಕೆಲವೆಡೆ ಮೊಳಕಾಲಿನವರೆಗೂ ಕೆಸರು ಮೆತ್ತಿಕೊಂಡು ಅವರ ಸಮವಸ್ತ್ರಗಳು ನಿತ್ಯ ಕೊಳಕಾಗುತ್ತಿವೆ. ಅದೇ ಬಟ್ಟೆಯಲ್ಲಿ ಶಾಲೆಗೆ ತೆರಳುವ ಬಗೆ ಹೇಗೆ ಎಂದು ಯೋಚಿಸುವಂತಾಗಿದೆ.

ಚರಂಡಿಗಳನ್ನು ಸ್ವಚ್ಛಗೊಳಿಸದೇ ಇರುವುದರಿಂದ ಕೊಳಚೆ ನೀರು ಮುಂದಕ್ಕೆ ಹರಿಯದೆ ಅಲ್ಲಿ ಮಡು ಗಟ್ಟಿ ನಿಂತಿದ್ದು, ರೋಗ ಹರಡುವ ಭೀತಿ ಎದುರಾಗಿದೆ.

ಕೆಲವೆಡೆ ರಸ್ತೆಗೆ ನುಗ್ಗಿದರೆ ಹಲವೆಡೆ ಮನೆಗಳಿಗೂ ನುಗ್ಗುತ್ತಿದ್ದು ನಿವಾಸಿಗಳು ಪರದಾಡುವಂತಾಗಿದೆ. ಚರಂಡಿ ಸ್ಚಚ್ಛಗೊಳಿಸುವುದಿರಲಿ ಚರಂಡಿಯಲ್ಲೇ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ನಿಂತಿರುವುದು ಗ್ರಾಪಂ ಕಾರ್ಯವೈಖರಿಗೆ ಸಾಕ್ಷಿಯಾಗಿದೆ. ಪಂಚಾಯಿತಿ ಅಧಿಕಾರಿಗಳು ಈಗಲಾದರೂ ಇತ್ತ ಗಮನ ಹರಿಸಿ ಈ ಬಡಾವಣೆಯಲ್ಲಿನಾಗರಿಕರು ಉಳಿದುಕೊಳ್ಳುವ ವಾತಾವರಣ ನಿರ್ಮಿಸಲಿ ಎಂಬುದೇ ಮಹದೇವ ನಗರದ ನಿವಾಸಿಗಳ ಬಯಕೆಯಾಗಿದೆ.

” ಮಾಜಿ ಸಚಿವ ಎಂ.ಮಹದೇವು ಅವರು ಬಡಾವಣೆ ನಿರ್ಮಿಸಿ ನಮಗೆ ಸೂರು ಕಲ್ಪಿಸಿದ ನಂತರ ಮತ ಕೇಳಲು ಮಾತ್ರ ಬರು ಮುಖಂಡರ‍್ಯಾರೂ ಗೆದ್ದ ನಂತರ ನಮ್ಮ ಬಡಾವಣೆಯತ್ತ ತಿರುಗಿಯೂ ನೋಡುತ್ತಿಲ್ಲ. ನಮ್ಮ ಜೀವನ ನರಕ ಯಾತನೆಯಾಗಿದೆ. ”

-ಗೌರಮ್ಮ, ನಿವಾಸಿ

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

34 mins ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

1 hour ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

1 hour ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

2 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

2 hours ago