Andolana originals

ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿನಿಯರ ಪರದಾಟ

ಸಾಲೋಮನ್

ಮಹಾರಾಣಿ ಕಾಲೇಜು ಕಾಯಕಲ್ಪ:3
ಮೈಸೂರು: ಮೈಸೂರು ಭಾಗದ ಹೆಣ್ಣು ಮಕ್ಕಳ ಅಸ್ಮಿತೆ ಎಂದೇ ಗುರುತಿಸಲ್ಪಡುವ ಮಹಾರಾಣಿ ವಿಜ್ಞಾನ, ಕಲಾ ಕಾಲೇಜು ಶತಮಾನೋತ್ಸವ ಆಚರಿಸಿ ಹಲವು ವರ್ಷಗಳನ್ನು ದಾಟಿ ಬಂದಿವೆ. ಮಹಾರಾಣಿ ಕಾಲೇಜಿನಲ್ಲಿ ಓದುವುದೇ ಒಂದು ಘನತೆ ಎಂಬುದಾಗಿ ಪರಿಗಣಿತವಾಗಿದೆ.

ಹೆಣ್ಣು ಮಕ್ಕಳಲ್ಲಿ ವಿದ್ಯಾಸಕ್ತಿ ಹೆಚ್ಚುತ್ತಾ ಬಂದಿದ್ದು, ಸದರಿ ಕಾಲೇಜುಗಳಲ್ಲಿ ಪ್ರವೇಶಾತಿ ಹೆಚ್ಚಳಗೊಂಡು ವರ್ಷಗಳು ಕಳೆದಂತೆ ಶೈಕ್ಷಣಿಕ ಸವಲತ್ತು ಹಾಗೂ ಮೂಲ ಸೌಕರ್ಯಗಳ ಕೊರತೆ ಕಂಡು ಬರುತ್ತಿತ್ತು. ಈ ಸಮಸ್ಯೆ ನಿವಾರಣೆಗಾಗಿ ಅನೇಕ ವರ್ಷಗಳಿಂದ ವಿದ್ಯಾರ್ಥಿನಿಯರು ಹೋರಾಟ ನಡೆಸುತ್ತಲೇ ಬರುತ್ತಿದ್ದಾರೆ. ಅದರ -ಲವಾಗಿ ನೂತನ ಕಾಲೇಜು ಹಾಗೂ ಹಾಸ್ಟೆಲ್ ಎರಡೂ ಕಟ್ಟಡಗಳ ನಿರ್ಮಾಣಕ್ಕೆ ಸಮಯ ಸನ್ನಿಹಿತವಾಗಿದೆ.

ವರ್ಷದಿಂದ ವರ್ಷಕ್ಕೆ ಮಹಿಳೆಯರಲ್ಲಿ ಓದುವ ಆಸಕ್ತಿ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಬೇಕೆನ್ನುವ ಅರಿವು ಪೋಷಕರಲ್ಲೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ಸುಶಿಕ್ಷಿತರಾಗಿ ಎಲ್ಲ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಪುರುಷರಷ್ಟೇ ಗಟ್ಟಿಯಾಗಿ ನೆಲೆಯಾಗಲು ಈ ಕಾಲೇಜು ಹೆಚ್ಚು ಪ್ರೋತ್ಸಾಹ ದಾಯಕವಾಗಿತ್ತು ಎಂಬುದು ಉತ್ಪ್ರೇಕ್ಷೆಯಲ್ಲ.

ಅವ್ಯವಸ್ಥೆ ತುಂಬಿ ತುಳುಕಿತ್ತು: ಮಹಾರಾಣಿ ವಿಜ್ಞಾನ ಹಾಗೂ ಕಲಾ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೊಠಡಿಗಳೂ ಸೇರಿದಂತೆ ಮೂಲ ಸೌಲಭ್ಯಗಳಲ್ಲಿ ಕೊರತೆ ಕಂಡು ಬಂದಿತ್ತು. ಅನೇಕ ವರ್ಷಗಳಿಂದ ವಿದ್ಯಾರ್ಥಿನಿಯರು ಈ ಸಮಸ್ಯೆಯಿಂದ ಪರಿತಪಿಸುತ್ತಿದ್ದರೂ ಯಾರೂ ಗಮನಹರಿಸಿರಲೇ ಇಲ್ಲ. ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿ ಕಾಲೇಜು ಕೊಠಡಿಗಳಲ್ಲಿ ಉಸಿರು ಗಟ್ಟಿಸುವ ವಾತಾವರಣ ಸೃಷ್ಟಿ ಆಗಿತ್ತು.

ಜೆಎಲ್‌ಬಿ ರಸ್ತೆಯಲ್ಲಿದ್ದ ಮಹಾರಾಣಿ ಮಹಿಳಾ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗವನ್ನು ಕೆಲ ವರ್ಷಗಳ ಹಿಂದೆ ಅಂದರೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪಡುವಾರಹಳ್ಳಿಯಲ್ಲಿ ನಿರ್ಮಿಸಲಾದ ನೂತನ ಕಾಲೇಜು ಕಟ್ಟಡಕ್ಕೆ ವರ್ಗಾಯಿಸಲಾಯಿತು. ಆದರೂ ಮೂಲ ಸೌಕರ್ಯಗಳು ದೊರೆಯಲೇ ಇಲ್ಲ. ಕುಡಿಯುವ ನೀರಿನ ಕೊರತೆ
ಇದ್ದೇ ಇತ್ತು. ಗ್ರಂಥಾಲಯದಲ್ಲೂ ಒತ್ತಡ ಇತ್ತು. ಇವೆಲ್ಲದರ ಜೊತೆಗೆ ಕಟ್ಟಡ ಶಿಥಿಲಗೊಂಡು ಅಲ್ಲಲ್ಲಿ ಬಿರುಕು ಬಿಟ್ಟಿತ್ತು. ಚಾವಣಿಯು ಸ್ವಲ್ಪ ಸ್ವಲ್ಪವಾಗಿ ಕುಸಿಯುತ್ತಿತ್ತು. ಅದೊಂದು ದಿನ ವಿeನ ಕಾಲೇಜು ಕಟ್ಟಡದ ಒಂದು ಭಾಗ ಕುಸಿದು ದೊಡ್ಡ ಶಾಕ್ ಕೊಟ್ಟಿತು. ಸಂಬಂಧಪಟ್ಟವರು ಎಚ್ಚೆತ್ತುಕೊಂಡು ನೂತನ ಕಟ್ಟಡ ನಿರ್ಮಿಸಲು ೩ ವರ್ಷಗಳು ಬೇಕಾದವು.

ವಿಜ್ಞಾನ ಕಾಲೇಜಿನಲ್ಲಿ ೩,೫೦೦ ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿಭಾಗದಲ್ಲಿ ೨೪ ಕೋರ್ಸ್‌ಗಳು ಇದ್ದು, ೨೫೦ರಿಂದ ೩೦೦ ಮಂದಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ತರಗತಿಗಳು ಹೊಸ ಕಟ್ಟಡಕ್ಕೆ
ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳು ಆರಂಭವಾಗಲಿವೆ. ಅವು ಮುಗಿಯುವಷ್ಟರಲ್ಲಿ ತರಗತಿಗಳನ್ನು ಪಕ್ಕದ ಇರುವ ನೂತನ ಕಟ್ಟಡಕ್ಕೆ ವರ್ಗಾಯಿಸಲಾಗುವುದು. ಇನ್ನೂ ೩ ಪ್ರಯೋಗಾಲಯಗಳು ಹಳೆಯ ಕಟ್ಟಡದ ಇವೆ. ಸದ್ಯದ ಇಡೀ ಕಾಲೇಜನ್ನು ಸ್ಥಳಾಂತರಿಸುತ್ತೇವೆ. –ಪ್ರೊ. ಅಬ್ದುಲ್ ರಹಿಮಾನ್, ಪ್ರಾಂಶುಪಾಲ, ಮಹಾರಾಣಿ ವಿಜ್ಞಾನ ಕಾಲೇಜು

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

7 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

10 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

11 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

11 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

11 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

11 hours ago