Andolana originals

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ

ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ 

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಒಂಬತ್ತು ದಿನಗಳ ಅವಧಿಯಲ್ಲಿ ೩.೩೫ ಕೋಟಿ ರೂ. ಆದಾಯ ಬಂದಿದೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಪಾದಯಾತ್ರಿಕ ಭಕ್ತಾದಿಗಳು ಹಾಗೂ ಇತರೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದುಕೊಂಡು ತಮ್ಮ ಹರಕೆ ಸಮರ್ಪಿಸಿದ್ದರು.

ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಹುಲಿ ವಾಹನ, ರುದ್ರಾಕ್ಷಿ ವಾಹನ, ಬಸವ ಮಂಟಪ ಮುಂತಾದ ಸೇವೆಗಳನ್ನು ಸಲ್ಲಿಸಿದ್ದರು. ಅಲ್ಲದೆ, ಲಾಡು ಮಾರಾಟ, ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟದ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ ೩,೩೫,೪೩,೦೪೧ ರೂ. ಆದಾಯ ಬಂದಿದೆ.

ಐದು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸದ ವಾಹನ,ಹುಲಿ ವಾಹನ, ರುದ್ರಾಕ್ಷಿ ವಾಹನದ ಹರಕೆಗಳು ಸಲ್ಲಿಕೆಯಾಗಿದ್ದು, ೮೨,೮೦,೯೩೫ ರೂ. ಆದಾಯ ಬಂದಿದೆ. ಫೆಬ್ರವರಿ ೧೦ ರಿಂದ ೧೮ರವರೆಗೆ ನಡೆದ ವಿವಿಧ ಉತ್ಸವಗಳಿಂದ ೮೨,೮೦,೯೩೫ ರೂ., ಸೇವೆಗಳಿಂದ ೬,೧೩,೬೦೦ ರೂ., ಮಿಶ್ರ ಪ್ರಸಾದದಿಂದ ೧೦,೩೭,೫೦೦ ರೂ., ಮಾಹಿತಿ ಕೇಂದ್ರದಿಂದ ೬,೫೩,೩೦೦ ರೂ., ವಿಶೇಷ ಪ್ರವೇಶ ಶುಲ್ಕ ೫೬,೭೦,೫೦೦ ರೂ., ಲಾಡು ಮಾರಾಟದಿಂದ ೧,೪೬,೨೦,೭೦೦ ರೂ., ಕಲ್ಲು ಸಕ್ಕರೆ ಮಾರಾಟದಿಂದ ೧,೭೯,೬೦೦ ರೂ., ತೀರ್ಥ ಪ್ರಸಾದದಿಂದ ೩,೪೨,೦೯೦ ರೂ., ಬ್ಯಾಗ್ ಮಾರಾಟದಿಂದ ೨,೮೩,೫೩೦ ರೂ., ಪುದುವಟ್ಟುವಿನಿಂದ ೪,೨೫,೮೩೫ ರೂ., ಅಕ್ಕಿ ಸೇವೆಯಿಂದ ೬,೧೬,೫೧೩ ರೂ., ಇತರೆ ಸೇವೆಗಳಿಂದ ೮,೧೮,೯೩೮ ರೂ., ಒಟ್ಟಾರೆ ೯ ದಿನಗಳ ಅವಧಿಯಲ್ಲಿ ೩,೩೫,೪೩,೦೪೧ ರೂ. ಆದಾಯ ಬಂದಿದೆ.

” ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ೧೦ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ ಮೂರು ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ.”

ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

39 mins ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

40 mins ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

41 mins ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

41 mins ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

43 mins ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

4 hours ago