Andolana originals

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ

ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ 

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಒಂಬತ್ತು ದಿನಗಳ ಅವಧಿಯಲ್ಲಿ ೩.೩೫ ಕೋಟಿ ರೂ. ಆದಾಯ ಬಂದಿದೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಪಾದಯಾತ್ರಿಕ ಭಕ್ತಾದಿಗಳು ಹಾಗೂ ಇತರೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದುಕೊಂಡು ತಮ್ಮ ಹರಕೆ ಸಮರ್ಪಿಸಿದ್ದರು.

ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಹುಲಿ ವಾಹನ, ರುದ್ರಾಕ್ಷಿ ವಾಹನ, ಬಸವ ಮಂಟಪ ಮುಂತಾದ ಸೇವೆಗಳನ್ನು ಸಲ್ಲಿಸಿದ್ದರು. ಅಲ್ಲದೆ, ಲಾಡು ಮಾರಾಟ, ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟದ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ ೩,೩೫,೪೩,೦೪೧ ರೂ. ಆದಾಯ ಬಂದಿದೆ.

ಐದು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸದ ವಾಹನ,ಹುಲಿ ವಾಹನ, ರುದ್ರಾಕ್ಷಿ ವಾಹನದ ಹರಕೆಗಳು ಸಲ್ಲಿಕೆಯಾಗಿದ್ದು, ೮೨,೮೦,೯೩೫ ರೂ. ಆದಾಯ ಬಂದಿದೆ. ಫೆಬ್ರವರಿ ೧೦ ರಿಂದ ೧೮ರವರೆಗೆ ನಡೆದ ವಿವಿಧ ಉತ್ಸವಗಳಿಂದ ೮೨,೮೦,೯೩೫ ರೂ., ಸೇವೆಗಳಿಂದ ೬,೧೩,೬೦೦ ರೂ., ಮಿಶ್ರ ಪ್ರಸಾದದಿಂದ ೧೦,೩೭,೫೦೦ ರೂ., ಮಾಹಿತಿ ಕೇಂದ್ರದಿಂದ ೬,೫೩,೩೦೦ ರೂ., ವಿಶೇಷ ಪ್ರವೇಶ ಶುಲ್ಕ ೫೬,೭೦,೫೦೦ ರೂ., ಲಾಡು ಮಾರಾಟದಿಂದ ೧,೪೬,೨೦,೭೦೦ ರೂ., ಕಲ್ಲು ಸಕ್ಕರೆ ಮಾರಾಟದಿಂದ ೧,೭೯,೬೦೦ ರೂ., ತೀರ್ಥ ಪ್ರಸಾದದಿಂದ ೩,೪೨,೦೯೦ ರೂ., ಬ್ಯಾಗ್ ಮಾರಾಟದಿಂದ ೨,೮೩,೫೩೦ ರೂ., ಪುದುವಟ್ಟುವಿನಿಂದ ೪,೨೫,೮೩೫ ರೂ., ಅಕ್ಕಿ ಸೇವೆಯಿಂದ ೬,೧೬,೫೧೩ ರೂ., ಇತರೆ ಸೇವೆಗಳಿಂದ ೮,೧೮,೯೩೮ ರೂ., ಒಟ್ಟಾರೆ ೯ ದಿನಗಳ ಅವಧಿಯಲ್ಲಿ ೩,೩೫,೪೩,೦೪೧ ರೂ. ಆದಾಯ ಬಂದಿದೆ.

” ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ೧೦ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ ಮೂರು ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ.”

ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ 

 

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago