ಮಹಾದೇಶ್ ಎಂ.ಗೌಡ
ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಒಂಬತ್ತು ದಿನಗಳ ಅವಧಿಯಲ್ಲಿ ೩.೩೫ ಕೋಟಿ ರೂ. ಆದಾಯ ಬಂದಿದೆ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಪಾದಯಾತ್ರಿಕ ಭಕ್ತಾದಿಗಳು ಹಾಗೂ ಇತರೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದುಕೊಂಡು ತಮ್ಮ ಹರಕೆ ಸಮರ್ಪಿಸಿದ್ದರು.
ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಹುಲಿ ವಾಹನ, ರುದ್ರಾಕ್ಷಿ ವಾಹನ, ಬಸವ ಮಂಟಪ ಮುಂತಾದ ಸೇವೆಗಳನ್ನು ಸಲ್ಲಿಸಿದ್ದರು. ಅಲ್ಲದೆ, ಲಾಡು ಮಾರಾಟ, ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟದ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ ೩,೩೫,೪೩,೦೪೧ ರೂ. ಆದಾಯ ಬಂದಿದೆ.
ಐದು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸದ ವಾಹನ,ಹುಲಿ ವಾಹನ, ರುದ್ರಾಕ್ಷಿ ವಾಹನದ ಹರಕೆಗಳು ಸಲ್ಲಿಕೆಯಾಗಿದ್ದು, ೮೨,೮೦,೯೩೫ ರೂ. ಆದಾಯ ಬಂದಿದೆ. ಫೆಬ್ರವರಿ ೧೦ ರಿಂದ ೧೮ರವರೆಗೆ ನಡೆದ ವಿವಿಧ ಉತ್ಸವಗಳಿಂದ ೮೨,೮೦,೯೩೫ ರೂ., ಸೇವೆಗಳಿಂದ ೬,೧೩,೬೦೦ ರೂ., ಮಿಶ್ರ ಪ್ರಸಾದದಿಂದ ೧೦,೩೭,೫೦೦ ರೂ., ಮಾಹಿತಿ ಕೇಂದ್ರದಿಂದ ೬,೫೩,೩೦೦ ರೂ., ವಿಶೇಷ ಪ್ರವೇಶ ಶುಲ್ಕ ೫೬,೭೦,೫೦೦ ರೂ., ಲಾಡು ಮಾರಾಟದಿಂದ ೧,೪೬,೨೦,೭೦೦ ರೂ., ಕಲ್ಲು ಸಕ್ಕರೆ ಮಾರಾಟದಿಂದ ೧,೭೯,೬೦೦ ರೂ., ತೀರ್ಥ ಪ್ರಸಾದದಿಂದ ೩,೪೨,೦೯೦ ರೂ., ಬ್ಯಾಗ್ ಮಾರಾಟದಿಂದ ೨,೮೩,೫೩೦ ರೂ., ಪುದುವಟ್ಟುವಿನಿಂದ ೪,೨೫,೮೩೫ ರೂ., ಅಕ್ಕಿ ಸೇವೆಯಿಂದ ೬,೧೬,೫೧೩ ರೂ., ಇತರೆ ಸೇವೆಗಳಿಂದ ೮,೧೮,೯೩೮ ರೂ., ಒಟ್ಟಾರೆ ೯ ದಿನಗಳ ಅವಧಿಯಲ್ಲಿ ೩,೩೫,೪೩,೦೪೧ ರೂ. ಆದಾಯ ಬಂದಿದೆ.
” ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ೧೦ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ ಮೂರು ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ.”
ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…