Andolana originals

ಒಂದು ಕಾಲದಲ್ಲಿ ದಾಂದಲೆಕೋರನಾಗಿದ್ದ ಮಹೇಂದ್ರ

 

ಮೈಸೂರು: ಒಂದು ಕಾಲದಲ್ಲಿ ಜಮೀನು, ತೋಟ, ಗದ್ದೆಗಳಿಗೆ ನುಗ್ಗಿ ದಾಂದಲೆ ನಡೆಸಿ ಪುಂಡಾಟಿಕೆ ಮೆರೆದಿದ್ದ ‘ಕರಿ’ಯ ಇದೀಗ ಫುಲ್ ಸೈಲೆಂಟ್ ಆಗಿದ್ದಾನೆ! ಸಿಕ್ಕಾಪಟ್ಟೆ ವೈಲೆಂಟ್ ಅಂತ ಕುಖ್ಯಾತಿ ಪಡೆದಿದ್ದ ಒಂಟಿ ಸಲಗ ಬಹಳ ಬೇಗ ಪಳಗಿ, ಶಾಂತ ಸ್ವಭಾವ ಮೈಗೂಡಿಸಿಕೊಂಡಿದೆ. ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗಿಯಾಗಲು ಇದೀಗ ಅರಮನೆ ನಗರಿಗೂ ಬಂದಿದ್ದಾನೆ!

ಇದು ದಸರಾ ಮಹೋತ್ಸವದಲ್ಲಿ ಭಾಗಿ ಯಾಗಲು ಕಾಡಿನಿಂದ ನಾಡಿಗೆ ಗಜಪಡೆಯ ಎರಡನೇ ತಂಡದಲ್ಲಿ ಬಂದಿರುವ ‘ಮಹೇಂದ್ರ’ ಆನೆ ಲೈಫ್ ಸ್ಟೋರಿ.

2016ರ ಸಂದರ್ಭ. ರಾಮನಗರ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದಾಂದಲೆ ನಡೆಸಿ ಸ್ಥಳೀ ಯರ ಆತಂಕಕ್ಕೆ ಕಾರಣವಾಗಿದ್ದ ಪುಂಡಾನೆಯನ್ನು ಸೆರೆ ಹಿಡಿಯಲು ಆ ಭಾಗದ ರೈತರು ಹಾಗೂ ಜನಪ್ರತಿನಿಧಿಗಳು ಆಗ್ರಹಿಸಿದ್ದರು.

ಕೊನೆಗೂ ತೋಟವೊಂದರಲ್ಲಿ ಯಾವುದೇ ಅಳುಕಿಲ್ಲದೇ ಬೀಡುಬಿಟ್ಟಿದ್ದ ಪುಂಡಾನೆಯನ್ನು ಸೆರೆ ಹಿಡಿಯಲಾಗಿತ್ತು.

ಬಳಿಕ ಅದನ್ನು ನಾಗರಹೊಳೆಯ ಬಳ್ಳೆ ಆನೆ ಶಿಬಿರಕ್ಕೆ ಕರೆತಂದು ಪಳಗಿಸಲಾಯಿತು. ಆರಂಭದ ದಿನಗಳಲ್ಲಿ ರೋಷಾವೇಶದಿಂದ ವರ್ತಿಸುತ್ತಿದ್ದ ಮಹೇಂದ್ರ ದಿನಕಳೆದಂತೆ ಶಿಬಿರದ ವಾತಾವರಣಕ್ಕೆ ಒಗ್ಗಿದ. ಬಹಳ ಬೇಗ ಪುಂಡಾಟಿಕೆಯನ್ನೆಲ್ಲ ಮರೆತು ಶಾಂತ ಸ್ವಭಾವ ಮೈಗೂಡಿಸಿಕೊಂಡ ಆನೆಗೆ ‘ಮಹೇಂದ’ ಎಂದು ಹೆಸರಿಡಲಾಯಿತು.

ಮೊದಲಿಗೆ ಮಾವುತ ವಿನೋದ್ ರಾಜ್ ಎಂಬಾತ ನೀಡಿದ ಅತ್ಯುತ್ತಮ ತರಬೇತಿ ಯಿಂದಾಗಿ ಆರೇಳು ತಿಂಗಳಲ್ಲೇ ಮಾವುತರ ಆಜ್ಞಾಧಾರಕ ಆನೆಯಾಗಿ ಪರಿವರ್ತನೆಗೊಂಡಿದ್ದು ಮಹೇಂದ್ರ ಆನೆಯ ವಿಶೇಷ. ಸದ್ಯ ಮಹೇಂದ್ರ, ಮಾವುತ ರಾಜಣ್ಣ ಅವರ ಉಸ್ತುವಾರಿಯಲ್ಲಿದ್ದಾನೆ. ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಗುರುವಾರ ಮೈಸೂರಿಗೆ ಆಗಮಿಸಿರುವ ಮಹೇಂದ್ರ, ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದಾನೆ.

ಮಾವುತನ ಮಾತು ತಪ್ಪದ ಮಹೇಂದ್ರ!
ಎಷ್ಟು ಸೌಮ್ಯ ಸ್ವಭಾವವೋ ಅಷ್ಟೇ ಧೈರ್ಯ ಮತ್ತು ದಿಟ್ಟ ಮನೋಭಾವ ಹೊಂದಿರುವ ಮಹೇಂದ್ರ, ಮಾವುತ ಹೇಳಿದ ಮಾತನ್ನು ಚಾಚೂ ತಪ್ಪದೆ ಪಾಲಿಸುತ್ತಾನೆ. ಜತೆಗೆ ಶಿಬಿರದಲ್ಲಿ ಹುಲಿ, ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಯೂ ಆಗಿದ್ದಾನೆ.

ಶ್ರೀರಂಗಪಟ್ಟಣ ದಸರಾದ ಅಂಬಾರಿ ಆನೆ
2022 ಮತ್ತು 2023ರ ಶ್ರೀರಂಗಪಟ್ಟಣ ದಸರಾದಲ್ಲಿ ಮಹೇಂದ್ರ ಸತತವಾಗಿ 2 ಬಾರಿ ಅಂಬಾರಿ ಹೊತ್ತು ಯಶಸ್ವಿಯಾಗಿದ್ದಾನೆ. ಆ ಮೂಲಕ ನಾನೂ ಮೈಸೂರಿನ ರಾಜ ಮಾರ್ಗದಲ್ಲಿ ಚಿನ್ನದ ಅಂಬಾರಿ ಹೊರಲು ಸಮರ್ಥನಿದ್ದೇನೆ ಎಂಬ ಸಂದೇಶ ನೀಡಿದ್ದಾನೆ.

ಈತ ಎಲ್ಲರ ಆಕರ್ಷಣೆ
ಮಹೇಂದ್ರ ಆನೆ ಸತತ 3 ವರ್ಷಗಳಿಂದ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದೆ. ನಾಗರಹೊಳೆಯ ಮತ್ತಿಗೋಡು ಕ್ಯಾಂಪಿನಿಂದ ಮೂರನೇ ಬಾರಿಗೆ ಮೈಸೂರಿಗೆ ಬಂದಿದ್ದು, ಎಲ್ಲರ ಆಕರ್ಷಣೆಯಾಗಿದ್ದಾನೆ. 41 ವರ್ಷದ ಮಹೇಂದ್ರ 4,910 ಕೆಜಿ ತೂಗುತ್ತಾನೆ. 2.75 ಮೀ. ಎತ್ತರ ಹಾಗೂ 3.25 ಮೀ. ಉದ್ದ ಇದ್ದಾನೆ.

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago