Andolana originals

ಒಂದು ಕಾಲದಲ್ಲಿ ದಾಂದಲೆಕೋರನಾಗಿದ್ದ ಮಹೇಂದ್ರ

 

ಮೈಸೂರು: ಒಂದು ಕಾಲದಲ್ಲಿ ಜಮೀನು, ತೋಟ, ಗದ್ದೆಗಳಿಗೆ ನುಗ್ಗಿ ದಾಂದಲೆ ನಡೆಸಿ ಪುಂಡಾಟಿಕೆ ಮೆರೆದಿದ್ದ ‘ಕರಿ’ಯ ಇದೀಗ ಫುಲ್ ಸೈಲೆಂಟ್ ಆಗಿದ್ದಾನೆ! ಸಿಕ್ಕಾಪಟ್ಟೆ ವೈಲೆಂಟ್ ಅಂತ ಕುಖ್ಯಾತಿ ಪಡೆದಿದ್ದ ಒಂಟಿ ಸಲಗ ಬಹಳ ಬೇಗ ಪಳಗಿ, ಶಾಂತ ಸ್ವಭಾವ ಮೈಗೂಡಿಸಿಕೊಂಡಿದೆ. ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗಿಯಾಗಲು ಇದೀಗ ಅರಮನೆ ನಗರಿಗೂ ಬಂದಿದ್ದಾನೆ!

ಇದು ದಸರಾ ಮಹೋತ್ಸವದಲ್ಲಿ ಭಾಗಿ ಯಾಗಲು ಕಾಡಿನಿಂದ ನಾಡಿಗೆ ಗಜಪಡೆಯ ಎರಡನೇ ತಂಡದಲ್ಲಿ ಬಂದಿರುವ ‘ಮಹೇಂದ್ರ’ ಆನೆ ಲೈಫ್ ಸ್ಟೋರಿ.

2016ರ ಸಂದರ್ಭ. ರಾಮನಗರ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದಾಂದಲೆ ನಡೆಸಿ ಸ್ಥಳೀ ಯರ ಆತಂಕಕ್ಕೆ ಕಾರಣವಾಗಿದ್ದ ಪುಂಡಾನೆಯನ್ನು ಸೆರೆ ಹಿಡಿಯಲು ಆ ಭಾಗದ ರೈತರು ಹಾಗೂ ಜನಪ್ರತಿನಿಧಿಗಳು ಆಗ್ರಹಿಸಿದ್ದರು.

ಕೊನೆಗೂ ತೋಟವೊಂದರಲ್ಲಿ ಯಾವುದೇ ಅಳುಕಿಲ್ಲದೇ ಬೀಡುಬಿಟ್ಟಿದ್ದ ಪುಂಡಾನೆಯನ್ನು ಸೆರೆ ಹಿಡಿಯಲಾಗಿತ್ತು.

ಬಳಿಕ ಅದನ್ನು ನಾಗರಹೊಳೆಯ ಬಳ್ಳೆ ಆನೆ ಶಿಬಿರಕ್ಕೆ ಕರೆತಂದು ಪಳಗಿಸಲಾಯಿತು. ಆರಂಭದ ದಿನಗಳಲ್ಲಿ ರೋಷಾವೇಶದಿಂದ ವರ್ತಿಸುತ್ತಿದ್ದ ಮಹೇಂದ್ರ ದಿನಕಳೆದಂತೆ ಶಿಬಿರದ ವಾತಾವರಣಕ್ಕೆ ಒಗ್ಗಿದ. ಬಹಳ ಬೇಗ ಪುಂಡಾಟಿಕೆಯನ್ನೆಲ್ಲ ಮರೆತು ಶಾಂತ ಸ್ವಭಾವ ಮೈಗೂಡಿಸಿಕೊಂಡ ಆನೆಗೆ ‘ಮಹೇಂದ’ ಎಂದು ಹೆಸರಿಡಲಾಯಿತು.

ಮೊದಲಿಗೆ ಮಾವುತ ವಿನೋದ್ ರಾಜ್ ಎಂಬಾತ ನೀಡಿದ ಅತ್ಯುತ್ತಮ ತರಬೇತಿ ಯಿಂದಾಗಿ ಆರೇಳು ತಿಂಗಳಲ್ಲೇ ಮಾವುತರ ಆಜ್ಞಾಧಾರಕ ಆನೆಯಾಗಿ ಪರಿವರ್ತನೆಗೊಂಡಿದ್ದು ಮಹೇಂದ್ರ ಆನೆಯ ವಿಶೇಷ. ಸದ್ಯ ಮಹೇಂದ್ರ, ಮಾವುತ ರಾಜಣ್ಣ ಅವರ ಉಸ್ತುವಾರಿಯಲ್ಲಿದ್ದಾನೆ. ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಗುರುವಾರ ಮೈಸೂರಿಗೆ ಆಗಮಿಸಿರುವ ಮಹೇಂದ್ರ, ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದಾನೆ.

ಮಾವುತನ ಮಾತು ತಪ್ಪದ ಮಹೇಂದ್ರ!
ಎಷ್ಟು ಸೌಮ್ಯ ಸ್ವಭಾವವೋ ಅಷ್ಟೇ ಧೈರ್ಯ ಮತ್ತು ದಿಟ್ಟ ಮನೋಭಾವ ಹೊಂದಿರುವ ಮಹೇಂದ್ರ, ಮಾವುತ ಹೇಳಿದ ಮಾತನ್ನು ಚಾಚೂ ತಪ್ಪದೆ ಪಾಲಿಸುತ್ತಾನೆ. ಜತೆಗೆ ಶಿಬಿರದಲ್ಲಿ ಹುಲಿ, ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಯೂ ಆಗಿದ್ದಾನೆ.

ಶ್ರೀರಂಗಪಟ್ಟಣ ದಸರಾದ ಅಂಬಾರಿ ಆನೆ
2022 ಮತ್ತು 2023ರ ಶ್ರೀರಂಗಪಟ್ಟಣ ದಸರಾದಲ್ಲಿ ಮಹೇಂದ್ರ ಸತತವಾಗಿ 2 ಬಾರಿ ಅಂಬಾರಿ ಹೊತ್ತು ಯಶಸ್ವಿಯಾಗಿದ್ದಾನೆ. ಆ ಮೂಲಕ ನಾನೂ ಮೈಸೂರಿನ ರಾಜ ಮಾರ್ಗದಲ್ಲಿ ಚಿನ್ನದ ಅಂಬಾರಿ ಹೊರಲು ಸಮರ್ಥನಿದ್ದೇನೆ ಎಂಬ ಸಂದೇಶ ನೀಡಿದ್ದಾನೆ.

ಈತ ಎಲ್ಲರ ಆಕರ್ಷಣೆ
ಮಹೇಂದ್ರ ಆನೆ ಸತತ 3 ವರ್ಷಗಳಿಂದ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದೆ. ನಾಗರಹೊಳೆಯ ಮತ್ತಿಗೋಡು ಕ್ಯಾಂಪಿನಿಂದ ಮೂರನೇ ಬಾರಿಗೆ ಮೈಸೂರಿಗೆ ಬಂದಿದ್ದು, ಎಲ್ಲರ ಆಕರ್ಷಣೆಯಾಗಿದ್ದಾನೆ. 41 ವರ್ಷದ ಮಹೇಂದ್ರ 4,910 ಕೆಜಿ ತೂಗುತ್ತಾನೆ. 2.75 ಮೀ. ಎತ್ತರ ಹಾಗೂ 3.25 ಮೀ. ಉದ್ದ ಇದ್ದಾನೆ.

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

4 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

24 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

28 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 hours ago