Andolana originals

ಸೆ. 29ಕ್ಕೆ ʼಮಹಿಷಾ ಧಮ್ಮೋತ್ಸವʼ ಆಚರಣೆ

ಮೈಸೂರು: ಸೆ.29ರಂದು ‘ಮಹಿಷ ಧಮ್ಮೋತ್ಸವ’ ಎಂಬ ಹೆಸರಿನಲ್ಲಿ ವಿಭಿನ್ನವಾಗಿ ಮಹಿಷ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಜಿ ಮಹಾಪೌರ ಹಾಗೂ ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದ ಆವರಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಎಂದೂ ಸಾಂಪ್ರದಾಯಿಕ ಮೈಸೂರು ದಸರಾ ಮಹೋತ್ಸವಕ್ಕೆ ಚ್ಯುತಿ ಬರುವಂತೆ ನಡೆದುಕೊಂಡಿಲ್ಲ. ಮಹಿಷನ ಇತಿಹಾಸವನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡುತ್ತೇವೆ. ಸಂವಿಧಾನದಲ್ಲಿ ನಮ್ಮ ಆಚರಣೆಗಳಿಗೆ ಅವಕಾಶವಿದೆ. ಇದು ನಮ್ಮ ಹಕ್ಕು. ಈ ಆಚರಣೆಯನ್ನು ತಡೆಯಲು ಯಾರಾದರೂ ಮುಂದಾದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಕಳೆದ ಹತ್ತು ವರ್ಷಗಳಿಂದಲೂ ಮಹಿಷ ದಸರಾ ಆಚರಣೆ ಮಾಡಿಕೊಂಡ ಬಂದಿದ್ದೇವೆ. ಚಾಮುಂಡಿ ಬೆಟ್ಟದ ಮೇಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಬರುತ್ತೇವೆ. ನಾವು ಎಲ್ಲೂ ಸಾಂಪ್ರದಾಯಿಕ ದಸರೆಗೆ ಅಡ್ಡಿಪಡಿಸಿಲ್ಲ. ಕಿಡಿಗೇಡಿಗಳು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಾರೆ. ಅದನ್ನೇ ನಂಬಿ ಪೊಲೀಸರು ನಮಗೆ ಆಚರಣೆ ಮಾಡಲು ಅನುಮತಿ ನೀಡಲು ಮೀನಮೇಷ ಎಣಿಸುತ್ತಾರೆ ಎಂದು ಕಿಡಿಕಾರಿದರು. ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಯಾರ ಆಚರಣೆಗೆ ಯಾರೂ ಅಡ್ಡಿಪಡಿಸಬಾರದು. ಮಹಿಷ ಈ ನಾಡಿದ ದೊರೆ ಎಂದು ಜನರಿಗೆ ತಿಳಿಸಲು ಮಹಿಷಾಸುರ ಪ್ರತಿಮೆಗೆ ಪುಷ್ಪರ್ಚನೆ ಮಾಡುತ್ತೇವೆ. ಯಾರ ಧಾರ್ಮಿಕ ಭಾವನೆಗೆ ಧಕ್ಕೆ ತರುವುದಿಕ್ಕೆ ಅಲ್ಲ. ಮಹಿಷ ಮಂಡಲ ಕೇವಲ ಮೈಸೂರಿಗೆ ಸೀಮಿತವಲ್ಲ. ಇಡೀ ದೇಶದ ವಿವಿಧ ಮೂಲೆಗಳಲ್ಲಿ ಮಹಿಷನ ಆರಾಧನೆ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ, ರಾಜಕೀಯ ಪ್ರೇರಿತವಾಗಿ ಮಾತನಾಡುವುದು ಮೂರ್ಖತನ ಎಂದರು.

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

6 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

6 hours ago