Andolana originals

ಸೆ. 29ಕ್ಕೆ ʼಮಹಿಷಾ ಧಮ್ಮೋತ್ಸವʼ ಆಚರಣೆ

ಮೈಸೂರು: ಸೆ.29ರಂದು ‘ಮಹಿಷ ಧಮ್ಮೋತ್ಸವ’ ಎಂಬ ಹೆಸರಿನಲ್ಲಿ ವಿಭಿನ್ನವಾಗಿ ಮಹಿಷ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಜಿ ಮಹಾಪೌರ ಹಾಗೂ ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದ ಆವರಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಎಂದೂ ಸಾಂಪ್ರದಾಯಿಕ ಮೈಸೂರು ದಸರಾ ಮಹೋತ್ಸವಕ್ಕೆ ಚ್ಯುತಿ ಬರುವಂತೆ ನಡೆದುಕೊಂಡಿಲ್ಲ. ಮಹಿಷನ ಇತಿಹಾಸವನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡುತ್ತೇವೆ. ಸಂವಿಧಾನದಲ್ಲಿ ನಮ್ಮ ಆಚರಣೆಗಳಿಗೆ ಅವಕಾಶವಿದೆ. ಇದು ನಮ್ಮ ಹಕ್ಕು. ಈ ಆಚರಣೆಯನ್ನು ತಡೆಯಲು ಯಾರಾದರೂ ಮುಂದಾದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಕಳೆದ ಹತ್ತು ವರ್ಷಗಳಿಂದಲೂ ಮಹಿಷ ದಸರಾ ಆಚರಣೆ ಮಾಡಿಕೊಂಡ ಬಂದಿದ್ದೇವೆ. ಚಾಮುಂಡಿ ಬೆಟ್ಟದ ಮೇಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಬರುತ್ತೇವೆ. ನಾವು ಎಲ್ಲೂ ಸಾಂಪ್ರದಾಯಿಕ ದಸರೆಗೆ ಅಡ್ಡಿಪಡಿಸಿಲ್ಲ. ಕಿಡಿಗೇಡಿಗಳು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಾರೆ. ಅದನ್ನೇ ನಂಬಿ ಪೊಲೀಸರು ನಮಗೆ ಆಚರಣೆ ಮಾಡಲು ಅನುಮತಿ ನೀಡಲು ಮೀನಮೇಷ ಎಣಿಸುತ್ತಾರೆ ಎಂದು ಕಿಡಿಕಾರಿದರು. ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಯಾರ ಆಚರಣೆಗೆ ಯಾರೂ ಅಡ್ಡಿಪಡಿಸಬಾರದು. ಮಹಿಷ ಈ ನಾಡಿದ ದೊರೆ ಎಂದು ಜನರಿಗೆ ತಿಳಿಸಲು ಮಹಿಷಾಸುರ ಪ್ರತಿಮೆಗೆ ಪುಷ್ಪರ್ಚನೆ ಮಾಡುತ್ತೇವೆ. ಯಾರ ಧಾರ್ಮಿಕ ಭಾವನೆಗೆ ಧಕ್ಕೆ ತರುವುದಿಕ್ಕೆ ಅಲ್ಲ. ಮಹಿಷ ಮಂಡಲ ಕೇವಲ ಮೈಸೂರಿಗೆ ಸೀಮಿತವಲ್ಲ. ಇಡೀ ದೇಶದ ವಿವಿಧ ಮೂಲೆಗಳಲ್ಲಿ ಮಹಿಷನ ಆರಾಧನೆ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ, ರಾಜಕೀಯ ಪ್ರೇರಿತವಾಗಿ ಮಾತನಾಡುವುದು ಮೂರ್ಖತನ ಎಂದರು.

 

andolana

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

56 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

60 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

1 hour ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

4 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

4 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

4 hours ago