ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಮರಿಯಾಲದಹುಂಡಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಬಡಾವಣೆಯಲ್ಲಿನ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.
ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರನ್ನು ಈ ನೀರಿನ ಟ್ಯಾಂಕ್ ಪೂರೈಸುವ ಸಲುವಾಗಿ (ತೊಂಬೆ) ನಿರ್ಮಿಸಿ, ಬದನಗುಪ್ಪೆ ಗ್ರಾಮ ಪಂಚಾಯಿತಿಯವರಿಗೆ ನಿರ್ವಹಣೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯವರ ನಿರ್ಲಕ್ಷದಿಂದಾಗಿ ಈ ನೀರಿನ ಟ್ಯಾಂಕ್ ಸುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಬಡಾವಣೆಯ ಅನೇಕ ಕುಟುಂಬಗಳಿಗೆ ಈ ಟ್ಯಾಂಕ್ ನೀರಿನ ಮೂಲವಾಗಿದ್ದು, ಇಲ್ಲಿನ ಅನೈರ್ಮಲ್ಯದ ವಾತಾವರಣದಿಂದಾಗಿ ಸಾರ್ವಜನಿಕರು ಇದರ ನೀರನ್ನು ಬಳಸಲು ಹಿಂದೇಟು ಹಾಕುವಂತಾಗಿದೆ. ಅಲ್ಲದೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಟ್ಯಾಂಕ್ ಸುತ್ತ ಸ್ವಚ್ಛತೆ ಕಾಪಾಡುವ ಜತೆಗೆ ಬಡಾವಣೆಯ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…