Andolana originals

ಮಹದೇಶ್ವರ ಬೆಟ್ಟ: 1.23 ಕೋಟಿ ರೂ. ಆದಾಯ ಸಂಗ್ರಹ

ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದಿದ್ದ ಲಕ್ಷಾಂತರ ಜನರು

ಮಹಾದೇಶ್ ಎಂ.ಗೌಡ

ಹನೂರು: ಶ್ರೀ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆದ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮೂರು ದಿನಗಳ ಅವಧಿಯಲ್ಲಿ ಸುಮಾರು 1.23 ಕೋಟಿ ರೂ. ಆದಾಯ ಬಂದಿದೆ.

ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವದ ದಿನಗಳಲ್ಲಿ ಹೆಚ್ಚಿನ ಜನರು ಆಗಮಿಸಿ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹುಲಿ ವಾಹನ, ರುದ್ರಾಕ್ಷಿ ವಾಹನ, ಬಸವ ಮಂಟಪ, ಲಾಡು ಮಾರಾಟ, ವಿವಿಧ ಸೇವೆಗಳು, ಅಕ್ಕಿ ಸೇವೆ, ಮಿಶ್ರಪ್ರಸಾದ, ಪುದುವಟ್ಟು, ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟ ಭವನಗಳಿಂದ, ಪಾರ್ಕಿಂಗ್ ಶುಲ್ಕ, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ ಸುಮಾರು 1,23,91,458 ರೂ. ಆದಾಯ ಸಂಗ್ರಹವಾಗಿದೆ.

ಮೂರು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ 468 ಚಿನ್ನದ ರಥೋತ್ಸವ, 34 ಬೆಳ್ಳಿ ರಥೋತ್ಸವ, 574 ಬಸವ ವಾಹನೋತ್ಸವ, 7,112 ಹುಲಿ ವಾಹನ, 288 ರುದ್ರಾಕ್ಷಿ ವಾಹನದ ಹರಕೆ ಸಲ್ಲಿಕೆಯ ಮೂಲಕ 38,48,251 ರೂ. ಆದಾಯ ಸಂಗ್ರಹವಾಗಿದೆ.

ಅ.3ರಿಂದ ನವರಾತ್ರಿ ಪ್ರಾರಂಭವಾಗಿದ್ದು, ದೀಪಾವಳಿ, ಕಾರ್ತಿಕ ಮಾಸದ ಪ್ರಯುಕ್ತ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಇನ್ನೂ ಹೆಚ್ಚಿನ ಆದಾಯ ಸಂಗ್ರಹವಾಗುವ ನಿರೀಕ್ಷೆ ಇದೆ.

ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಸಂಬಂಧ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆಯಿದ್ದ ಹಿನ್ನೆಲೆಯಲ್ಲಿ ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘುರವರು ಸ್ಥಳದಲ್ಲಿಯೇ ಇದ್ದು, ಸಾರ್ವಜನಿಕರಿಗೆ ಬೇಕಾದ ಕುಡಿಯುವ ನೀರು, ವಿಶೇಷ ದಾಸೋಹ, ನೆರಳಿನ ವ್ಯವಸ್ಥೆ ಹಾಗೂ ಎಲ್ಲ ರೀತಿಯ ಮೂಲ ಸೌಲಭ್ಯಗಳನ್ನು ಒದಗಿಸಿದ್ದಾರೆ.

ಮುಂದಿನ ದಿನಗಳಲ್ಲಿ ವಿಜಯದಶಮಿ ಹಾಗೂ ದೀಪಾವಳಿ ಜಾತ್ರಾ ಮಹೋತ್ಸವ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
• ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ.

 

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

12 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

12 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

13 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

13 hours ago