Andolana originals

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್

ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ 

ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ ಮಾರಮ್ಮ ಹಾಗೂ ಪಟ್ಟಲದಮ್ಮ ಶಕ್ತಿ ದೇವತೆಗಳ ಸಿಡಿ ಹಬ್ಬ ಜಾತ್ರಾ ಮಹೋತ್ಸವಕ್ಕೆ ಪಟ್ಟಣ ಮಧುವಣಿಗಿತ್ತಿಯಂತೆ ಸಿಂಗಾರಗೊಂಡಿದೆ.

ಸ್ವಚ್ಛತೆ, ವಿಶೇಷ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ, ಹಬ್ಬಕ್ಕೆ ಶುಭ ಕೋರುವ ಭರಪೂರ ನಾಮಪಲಕಗಳು ರಾರಾಜಿಸುತ್ತಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು,ಪಟ್ಟಣದಲ್ಲಿ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ.

ಜಾತ್ರಾ ಮಹೋತ್ಸವ ಆರಂಭ: ಶುಕ್ರವಾರ ಬೆಳಿಗ್ಗೆ ಶಕ್ತಿ ದೇವತೆಗಳಿಗೆ ಸಂಪ್ರದಾಯಬದ್ಧವಾಗಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಸಂಜೆ ನಡೆಯುವ ಸಿಡಿ ಉತ್ಸವಕ್ಕೆ ಕೋಟೆ ಬೀದಿಯಲ್ಲಿ ಸಿಡಿರಣ್ಣದ ಭರ್ಜರಿ ಸಿದ್ಧತೆ ನಡೆದಿದೆ. ಕಣ್ಮನ ಸೆಳೆವ ವಿದ್ಯುತ್ ದೀಪಾಲಂಕಾರ: ಸಿಡಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಟ್ಟಲದಮ್ಮ ಹಾಗೂ ದಂಡಿನ ಮಾರಮ್ಮ ದೇವಸ್ಥಾನಗಳು, ಪಟ್ಟಣದ ಪ್ರಮುಖ ರಸ್ತೆಗಳು, ಪ್ರಮುಖ ವೃತ್ತಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ರಾತ್ರಿ ವೇಳೆ ಇಡೀ ಪಟ್ಟಣ ಜಗ ಜಗಿಸುತ್ತಿದೆ.

ಕೊಂಡೋತ್ಸವಕ್ಕೆ ಸಿದ್ಧತೆ: ಪಟ್ಟಣದ ಪಟ್ಟಲದಮ್ಮ ದೇವಸ್ಥಾನದ ಮುಂಭಾಗ ಶನಿವಾರನಡೆಯಲಿರುವ ಕೊಂಡೋತ್ಸವಕ್ಕೆ ಸಮಿತಿಯ ಯಜಮಾನರುಗಳ ನೇತೃತ್ವದಲ್ಲಿ ಭರದ ಸಿದ್ಧತೆಗಳು ಸಾಗಿವೆ.

ಫ್ಲೆಕ್ಸ್‌ಗಳ ಭರಾಟೆ: ಪಟ್ಟಣದಲ್ಲಿ ಸಿಡಿಹಬ್ಬಕ್ಕೆ ಸ್ವಾಗತ ಕೋರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಮಾನಿಗಳ ಫ್ಲೆಕ್ಸ್, ಬ್ಯಾನರ್, ನಾಮ ಫಲಕ ಗಳು ರಾರಾಜಿಸುತ್ತಿವೆ. ಎತ್ತರದ ಕಟೌಟ್ ನಿಲ್ಲಿಸಿ ಹಬ್ಬಕ್ಕೆ ಶುಭಕೋರುವ ನಾಮಪಲಕಗಳನ್ನು ಅನಂತರಾಂ ವೃತ್ತದಲ್ಲಿ ಹಾಕಲಾಗಿದೆ. ಡಾ.ಬಿ. ಅರ್.ಅಂಬೇಡ್ಕರ್ ಅವರ ಬೃಹತ್ ಕಟೌಟ್‌ನ್ನು ಅನಂತರಾಂ ವೃತ್ತದಲ್ಲಿ ನಿಲ್ಲಿಸಲಾಗಿದೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳು ಶುಭಕೋರುವ ಕಟೌಟ್‌ಗಳೂ ಜನರನ್ನು ಸ್ವಾಗತಿಸುತ್ತಿವೆ.

ಅಂಗಡಿ ಮುಂಗಟ್ಟುಗಳ ಜೋಡಣೆ: ಜಾತ್ರೆ ಪ್ರಯುಕ್ತ ಅಂಗಡಿ ಮುಂಗಟ್ಟುಗಳ ಜೋಡಣೆ ಬಲು ಜೋರಾಗಿ ನಡೆದಿದೆ. ಮಕ್ಕಳು ಆಟಿಕೆ ವಸ್ತುಗಳು, ಹೊನಲು ಬೆಳಕಿನ ಪಂದ್ಯಾವಳಿಗಳು, ಕುಸ್ತಿ, ನಾಟಕ ಪ್ರದರ್ಶನಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.

ವಾಹನ ಸಂಚಾರ ನಿಯಂತ್ರಣಕ್ಕೆ ಕ್ರಮ: 

ಲಕ್ಷಾಂತರ ಜನರು ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಯಶವಂತ್‌ಕುಮಾರ್ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಜನ ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ನಾಮಫಲಕ ಅಳವಡಿಕೆ, ವಾಹನ ದಟ್ಟಣೆ ತಡೆಯಲು ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿದ್ದು,ಪ್ರತ್ಯೇಕ ವಾಹನ ಪಾರ್ಕಿಂಗ್ ವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ.

೭೦೦ಕ್ಕೂ ಹೆಚು ಪೊಲೀಸರ ನಿಯೋಜನೆ: 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ೬೦೦ ಪೊಲೀಸರು, ೫ ಜನ ಡಿವೈಎಸ್ಪಿಗಳು, ೧೯ ಮಂದಿ ವೃತ್ತ ನಿರೀಕ್ಷಕರು, ೩೬ ಸಬ್ ಇನ್ಸ್‌ಪೆಕ್ಟರ್ ಗಳು, ೭೭ ಮಂದಿ ಸಹಾಯಕ ಸಬ್‌ಇನ್ಸ್ ಪೆಕ್ಟರ್‌ಗಳು ಸೇರಿದಂತೆ ಡಿಅರ್ ಮತ್ತು ಕೆಎಸ್‌ಆರ್‌ಪಿ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜನೆ ಮಾಡಲಾಗಿದೆ ಎಂದು ಡಿವೈಎಸ್‌ಪಿ ಯಶವಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

54 seconds ago

ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ದುಪ್ಪಟ್ಟು ಹಣ ವಸೂಲಿ..!

ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…

11 mins ago

ವಿಶ್ವದರ್ಜೆ ಫುಟ್‌ಪಾತ್ ನಿರ್ಮಾಣಕ್ಕೆ ಪ್ಲಾನ್!

ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…

15 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

10 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

10 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

10 hours ago