Andolana originals

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್

ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ 

ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ ಮಾರಮ್ಮ ಹಾಗೂ ಪಟ್ಟಲದಮ್ಮ ಶಕ್ತಿ ದೇವತೆಗಳ ಸಿಡಿ ಹಬ್ಬ ಜಾತ್ರಾ ಮಹೋತ್ಸವಕ್ಕೆ ಪಟ್ಟಣ ಮಧುವಣಿಗಿತ್ತಿಯಂತೆ ಸಿಂಗಾರಗೊಂಡಿದೆ.

ಸ್ವಚ್ಛತೆ, ವಿಶೇಷ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ, ಹಬ್ಬಕ್ಕೆ ಶುಭ ಕೋರುವ ಭರಪೂರ ನಾಮಪಲಕಗಳು ರಾರಾಜಿಸುತ್ತಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು,ಪಟ್ಟಣದಲ್ಲಿ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ.

ಜಾತ್ರಾ ಮಹೋತ್ಸವ ಆರಂಭ: ಶುಕ್ರವಾರ ಬೆಳಿಗ್ಗೆ ಶಕ್ತಿ ದೇವತೆಗಳಿಗೆ ಸಂಪ್ರದಾಯಬದ್ಧವಾಗಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಸಂಜೆ ನಡೆಯುವ ಸಿಡಿ ಉತ್ಸವಕ್ಕೆ ಕೋಟೆ ಬೀದಿಯಲ್ಲಿ ಸಿಡಿರಣ್ಣದ ಭರ್ಜರಿ ಸಿದ್ಧತೆ ನಡೆದಿದೆ. ಕಣ್ಮನ ಸೆಳೆವ ವಿದ್ಯುತ್ ದೀಪಾಲಂಕಾರ: ಸಿಡಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಟ್ಟಲದಮ್ಮ ಹಾಗೂ ದಂಡಿನ ಮಾರಮ್ಮ ದೇವಸ್ಥಾನಗಳು, ಪಟ್ಟಣದ ಪ್ರಮುಖ ರಸ್ತೆಗಳು, ಪ್ರಮುಖ ವೃತ್ತಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ರಾತ್ರಿ ವೇಳೆ ಇಡೀ ಪಟ್ಟಣ ಜಗ ಜಗಿಸುತ್ತಿದೆ.

ಕೊಂಡೋತ್ಸವಕ್ಕೆ ಸಿದ್ಧತೆ: ಪಟ್ಟಣದ ಪಟ್ಟಲದಮ್ಮ ದೇವಸ್ಥಾನದ ಮುಂಭಾಗ ಶನಿವಾರನಡೆಯಲಿರುವ ಕೊಂಡೋತ್ಸವಕ್ಕೆ ಸಮಿತಿಯ ಯಜಮಾನರುಗಳ ನೇತೃತ್ವದಲ್ಲಿ ಭರದ ಸಿದ್ಧತೆಗಳು ಸಾಗಿವೆ.

ಫ್ಲೆಕ್ಸ್‌ಗಳ ಭರಾಟೆ: ಪಟ್ಟಣದಲ್ಲಿ ಸಿಡಿಹಬ್ಬಕ್ಕೆ ಸ್ವಾಗತ ಕೋರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಮಾನಿಗಳ ಫ್ಲೆಕ್ಸ್, ಬ್ಯಾನರ್, ನಾಮ ಫಲಕ ಗಳು ರಾರಾಜಿಸುತ್ತಿವೆ. ಎತ್ತರದ ಕಟೌಟ್ ನಿಲ್ಲಿಸಿ ಹಬ್ಬಕ್ಕೆ ಶುಭಕೋರುವ ನಾಮಪಲಕಗಳನ್ನು ಅನಂತರಾಂ ವೃತ್ತದಲ್ಲಿ ಹಾಕಲಾಗಿದೆ. ಡಾ.ಬಿ. ಅರ್.ಅಂಬೇಡ್ಕರ್ ಅವರ ಬೃಹತ್ ಕಟೌಟ್‌ನ್ನು ಅನಂತರಾಂ ವೃತ್ತದಲ್ಲಿ ನಿಲ್ಲಿಸಲಾಗಿದೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳು ಶುಭಕೋರುವ ಕಟೌಟ್‌ಗಳೂ ಜನರನ್ನು ಸ್ವಾಗತಿಸುತ್ತಿವೆ.

ಅಂಗಡಿ ಮುಂಗಟ್ಟುಗಳ ಜೋಡಣೆ: ಜಾತ್ರೆ ಪ್ರಯುಕ್ತ ಅಂಗಡಿ ಮುಂಗಟ್ಟುಗಳ ಜೋಡಣೆ ಬಲು ಜೋರಾಗಿ ನಡೆದಿದೆ. ಮಕ್ಕಳು ಆಟಿಕೆ ವಸ್ತುಗಳು, ಹೊನಲು ಬೆಳಕಿನ ಪಂದ್ಯಾವಳಿಗಳು, ಕುಸ್ತಿ, ನಾಟಕ ಪ್ರದರ್ಶನಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.

ವಾಹನ ಸಂಚಾರ ನಿಯಂತ್ರಣಕ್ಕೆ ಕ್ರಮ: 

ಲಕ್ಷಾಂತರ ಜನರು ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಯಶವಂತ್‌ಕುಮಾರ್ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಜನ ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ನಾಮಫಲಕ ಅಳವಡಿಕೆ, ವಾಹನ ದಟ್ಟಣೆ ತಡೆಯಲು ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿದ್ದು,ಪ್ರತ್ಯೇಕ ವಾಹನ ಪಾರ್ಕಿಂಗ್ ವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ.

೭೦೦ಕ್ಕೂ ಹೆಚು ಪೊಲೀಸರ ನಿಯೋಜನೆ: 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ೬೦೦ ಪೊಲೀಸರು, ೫ ಜನ ಡಿವೈಎಸ್ಪಿಗಳು, ೧೯ ಮಂದಿ ವೃತ್ತ ನಿರೀಕ್ಷಕರು, ೩೬ ಸಬ್ ಇನ್ಸ್‌ಪೆಕ್ಟರ್ ಗಳು, ೭೭ ಮಂದಿ ಸಹಾಯಕ ಸಬ್‌ಇನ್ಸ್ ಪೆಕ್ಟರ್‌ಗಳು ಸೇರಿದಂತೆ ಡಿಅರ್ ಮತ್ತು ಕೆಎಸ್‌ಆರ್‌ಪಿ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜನೆ ಮಾಡಲಾಗಿದೆ ಎಂದು ಡಿವೈಎಸ್‌ಪಿ ಯಶವಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

15 mins ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

17 mins ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

20 mins ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

22 mins ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

29 mins ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

34 mins ago