Andolana originals

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್

ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ 

ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ ಮಾರಮ್ಮ ಹಾಗೂ ಪಟ್ಟಲದಮ್ಮ ಶಕ್ತಿ ದೇವತೆಗಳ ಸಿಡಿ ಹಬ್ಬ ಜಾತ್ರಾ ಮಹೋತ್ಸವಕ್ಕೆ ಪಟ್ಟಣ ಮಧುವಣಿಗಿತ್ತಿಯಂತೆ ಸಿಂಗಾರಗೊಂಡಿದೆ.

ಸ್ವಚ್ಛತೆ, ವಿಶೇಷ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ, ಹಬ್ಬಕ್ಕೆ ಶುಭ ಕೋರುವ ಭರಪೂರ ನಾಮಪಲಕಗಳು ರಾರಾಜಿಸುತ್ತಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು,ಪಟ್ಟಣದಲ್ಲಿ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ.

ಜಾತ್ರಾ ಮಹೋತ್ಸವ ಆರಂಭ: ಶುಕ್ರವಾರ ಬೆಳಿಗ್ಗೆ ಶಕ್ತಿ ದೇವತೆಗಳಿಗೆ ಸಂಪ್ರದಾಯಬದ್ಧವಾಗಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಸಂಜೆ ನಡೆಯುವ ಸಿಡಿ ಉತ್ಸವಕ್ಕೆ ಕೋಟೆ ಬೀದಿಯಲ್ಲಿ ಸಿಡಿರಣ್ಣದ ಭರ್ಜರಿ ಸಿದ್ಧತೆ ನಡೆದಿದೆ. ಕಣ್ಮನ ಸೆಳೆವ ವಿದ್ಯುತ್ ದೀಪಾಲಂಕಾರ: ಸಿಡಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಟ್ಟಲದಮ್ಮ ಹಾಗೂ ದಂಡಿನ ಮಾರಮ್ಮ ದೇವಸ್ಥಾನಗಳು, ಪಟ್ಟಣದ ಪ್ರಮುಖ ರಸ್ತೆಗಳು, ಪ್ರಮುಖ ವೃತ್ತಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ರಾತ್ರಿ ವೇಳೆ ಇಡೀ ಪಟ್ಟಣ ಜಗ ಜಗಿಸುತ್ತಿದೆ.

ಕೊಂಡೋತ್ಸವಕ್ಕೆ ಸಿದ್ಧತೆ: ಪಟ್ಟಣದ ಪಟ್ಟಲದಮ್ಮ ದೇವಸ್ಥಾನದ ಮುಂಭಾಗ ಶನಿವಾರನಡೆಯಲಿರುವ ಕೊಂಡೋತ್ಸವಕ್ಕೆ ಸಮಿತಿಯ ಯಜಮಾನರುಗಳ ನೇತೃತ್ವದಲ್ಲಿ ಭರದ ಸಿದ್ಧತೆಗಳು ಸಾಗಿವೆ.

ಫ್ಲೆಕ್ಸ್‌ಗಳ ಭರಾಟೆ: ಪಟ್ಟಣದಲ್ಲಿ ಸಿಡಿಹಬ್ಬಕ್ಕೆ ಸ್ವಾಗತ ಕೋರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಮಾನಿಗಳ ಫ್ಲೆಕ್ಸ್, ಬ್ಯಾನರ್, ನಾಮ ಫಲಕ ಗಳು ರಾರಾಜಿಸುತ್ತಿವೆ. ಎತ್ತರದ ಕಟೌಟ್ ನಿಲ್ಲಿಸಿ ಹಬ್ಬಕ್ಕೆ ಶುಭಕೋರುವ ನಾಮಪಲಕಗಳನ್ನು ಅನಂತರಾಂ ವೃತ್ತದಲ್ಲಿ ಹಾಕಲಾಗಿದೆ. ಡಾ.ಬಿ. ಅರ್.ಅಂಬೇಡ್ಕರ್ ಅವರ ಬೃಹತ್ ಕಟೌಟ್‌ನ್ನು ಅನಂತರಾಂ ವೃತ್ತದಲ್ಲಿ ನಿಲ್ಲಿಸಲಾಗಿದೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳು ಶುಭಕೋರುವ ಕಟೌಟ್‌ಗಳೂ ಜನರನ್ನು ಸ್ವಾಗತಿಸುತ್ತಿವೆ.

ಅಂಗಡಿ ಮುಂಗಟ್ಟುಗಳ ಜೋಡಣೆ: ಜಾತ್ರೆ ಪ್ರಯುಕ್ತ ಅಂಗಡಿ ಮುಂಗಟ್ಟುಗಳ ಜೋಡಣೆ ಬಲು ಜೋರಾಗಿ ನಡೆದಿದೆ. ಮಕ್ಕಳು ಆಟಿಕೆ ವಸ್ತುಗಳು, ಹೊನಲು ಬೆಳಕಿನ ಪಂದ್ಯಾವಳಿಗಳು, ಕುಸ್ತಿ, ನಾಟಕ ಪ್ರದರ್ಶನಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.

ವಾಹನ ಸಂಚಾರ ನಿಯಂತ್ರಣಕ್ಕೆ ಕ್ರಮ: 

ಲಕ್ಷಾಂತರ ಜನರು ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಯಶವಂತ್‌ಕುಮಾರ್ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಜನ ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ನಾಮಫಲಕ ಅಳವಡಿಕೆ, ವಾಹನ ದಟ್ಟಣೆ ತಡೆಯಲು ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿದ್ದು,ಪ್ರತ್ಯೇಕ ವಾಹನ ಪಾರ್ಕಿಂಗ್ ವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ.

೭೦೦ಕ್ಕೂ ಹೆಚು ಪೊಲೀಸರ ನಿಯೋಜನೆ: 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ೬೦೦ ಪೊಲೀಸರು, ೫ ಜನ ಡಿವೈಎಸ್ಪಿಗಳು, ೧೯ ಮಂದಿ ವೃತ್ತ ನಿರೀಕ್ಷಕರು, ೩೬ ಸಬ್ ಇನ್ಸ್‌ಪೆಕ್ಟರ್ ಗಳು, ೭೭ ಮಂದಿ ಸಹಾಯಕ ಸಬ್‌ಇನ್ಸ್ ಪೆಕ್ಟರ್‌ಗಳು ಸೇರಿದಂತೆ ಡಿಅರ್ ಮತ್ತು ಕೆಎಸ್‌ಆರ್‌ಪಿ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜನೆ ಮಾಡಲಾಗಿದೆ ಎಂದು ಡಿವೈಎಸ್‌ಪಿ ಯಶವಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

3 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

54 mins ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

3 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

3 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

4 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago