Andolana originals

ಮ.ಬೆಟ್ಟ: ೩ ದಿನಗಳಲ್ಲಿ ೧.೫೨ ಕೋಟಿ ರೂ. ಆದಾಯ

ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರೆ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಜನರು

ಮಹಾದೇಶ್ ಎಂ.ಗೌಡ

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ೩ ದಿನಗಳ ಅವಧಿಯಲ್ಲಿ ೧.೫೨ ಕೋಟಿ ರೂ. ಆದಾಯ ಬಂದಿದೆ.

ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ೧,೧೯೨ ಚಿನ್ನದ ರಥೋತ್ಸವ, ೭೦ ಬೆಳ್ಳಿ ರಥೋತ್ಸವ, ೨,೭೬೭ ಹುಲಿ ವಾಹನ, ೨೪೧ ರುದ್ರಾಕ್ಷಿ ಮಂಟಪ, ೭೭೬ ಬಸವ ವಾಹನ ಉತ್ಸವಗಳನ್ನು ನೆರವೇರಿಸಿದ್ದಾರೆ.

ಉತ್ಸವಗಳಿಂದ ೪೮,೫೮,೭೧೨ ರೂ., ವಿವಿಧ ಸೇವೆಗಳಿಂದ ೫,೩೮,೦೦೦ ರೂ., ಮಿಶ್ರ ಪ್ರಸಾದದಿಂದ ೧೧,೩೧,೨೫೦ ರೂ., ಮಾಹಿತಿ ಕೇಂದ್ರದಿಂದ ೫,೩೭,೩೦೦ ರೂ., ಲಾಡು ಮಾರಾಟದಿಂದ ೩೭,೫೧,೦೫೦ ರೂ., ಕಲ್ಲು ಸಕ್ಕರೆ ಮಾರಾಟದಿಂದ ೨೮,೪೪೦ ರೂ., ತೀರ್ಥ ಪ್ರಸಾದದಿಂದ ೧,೧೩,೮೪೦ ರೂ., ಬ್ಯಾಗ್‌ಗಳ ಮಾರಾಟದಿಂದ ೧೧,೩೧,೨೫೦ ರೂ., ಪುದುವಟ್ಟುವಿನಿಂದ ೯೪,೬೪೫ ರೂ., ಅಕ್ಕಿ ಸೇವೆಯಿಂದ ೧,೪೩,೦೦೦ ರೂ., ಜನವನ ವಾಹನದಿಂದ ೧,೨೫೦ ರೂ., ಇ-ಹುಂಡಿಯಿಂದ ೫೩,೫೩೭ ರೂ. ಸೇರಿ ಒಟ್ಟು ೧,೫೨,೭೫,೩೪೪ ರೂ. ಆದಾಯ ಬಂದಿದೆ.

ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಪ್ರಯುಕ್ತ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಆವರಣ, ಮುಖ್ಯದ್ವಾರ ಜಡೇಕಲ್ಲು ಮಂಟಪ, ಇನ್ನಿತರ ಕಡೆಗಳಲ್ಲಿ ವಿನೂತನ ಮಾದರಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಅಮಾವಾಸ್ಯೆ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇದನ್ನು ಕೂಡ ಮುಂದುವರಿಸಲಾಗಿತ್ತು.

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಇರುವುದರಿಂದ ಪೋಷಕರು ಹಾಗೂ ಮಕ್ಕಳು ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಮ.ಬೆಟ್ಟಕ್ಕೆ ಲಕ್ಷಾಂತರ ಜನರು ಭೇಟಿ ನೀಡಿದ್ದರು. ಮಹಾಶಿವರಾತ್ರಿ ಜಾತ್ರೆಗೆ ಬರುತ್ತಿದ್ದ ಭಕ್ತರಂತೆ ಈ ಅಮಾವಾಸ್ಯೆಗೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

7 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

8 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

8 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 hours ago