Andolana originals

ಹೂವನ್ನೇ ಉಸಿರಾಗಿಸಿಕೊಂಡಿರುವ ಹೂವಿನ ಮಲ್ಲಹಳ್ಳಿ

ಸೇವಂತಿಗೆಯಿಂದಲೇ ಬದುಕು ಕಟ್ಟುಕೊಂಡು ಬೆಳೆಗಾರರು, ಮಾರಾಟಗಾರರು, ಮಾಲೆ ಕಟ್ಟುವವರು

ಶ್ರೀಧರ ಆರ್. ಭಟ್ಟ
ನಂಜನಗೂಡು: ಮಳೆಯಾಶ್ರಿತ ಗ್ರಾಮವಾದ ಕವಲಂದೆ ಹೋಬಳಿಯ ಪುಟ್ಟ ಗ್ರಾಮ ಮಲ್ಲ ಹಳ್ಳಿಯ ಉಸಿರೇ ಹೂವಾಗಿದೆ ಎಂದರೆ ತಪ್ಪಾಗಲಾರದು.

ಈ ಗ್ರಾಮದಲ್ಲಿ ಹೂ ಬೆಳೆಯುವವರು, ಹೂ ಮಾರಾಟಗಾರರು ಹಾಗೂ ಹೂಗಳಿಂದ ಸಂಪಾದನೆಗೆ ದಾರಿ ಕಂಡುಕೊಂಡವರು ತುಂಬಿ ತುಳುಕುತ್ತಾರೆ. ಹೀಗಾಗಿ ಈ ಊರನ್ನು ಮಲ್ಲಹಳ್ಳಿ ಅಲಿಯಾಸ್ ಹೂವಿನ ಮಲ್ಲಹಳ್ಳಿ ಎಂದೇ ಕರೆಯುತ್ತಾರೆ.

ಹೂವಿನ ಕೃಷಿ ಕೆಲವರದ್ದಾದರೆ, ಆ ಹೂವನ್ನು ಗ್ರಾಮದಲ್ಲೇ ಖರೀದಿಸಿ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಿ ಹಣ ಸಂಪಾದನೆ ಮಾಡುವ ಕಾಯಕ ಕೆಲವರದ್ದು. ಆ ಹೂವನ್ನೂ ಮಾಲೆ ಮಾಡಿ ಸಂಪಾದನೆಗೆ ದಾರಿ ಮಾಡಿಕೊಂಡ ವರು ಅನೇಕರು. ಈ ಮೂರು ವರ್ಗದವರಿಂದಲೇ ನಂಜನಗೂಡು ತಾಲ್ಲೂಕಿನ ಮಲ್ಲಹಳ್ಳಿ ಗ್ರಾಮ ಹೂವಿನಂತೆ ನಳನಳಿಸುತ್ತಿದೆ.

ಸುಮಾರು ೪೦೦ ಮನೆಗಳಿರುವ ಈ ಗ್ರಾಮದಲ್ಲಿ ಎಲ್ಲಿ ನೋಡಿದರೂ ಹೂವಿನ ಕೃಷಿ, ಮಾರಾಟ ಹಾಗೂ ಮಾಲೆ ಕಟ್ಟುವ ಕೈಗಾರಿಕೆಗಳೇ ಆವರಿಸಿ ಕೊಂಡು ಒಟ್ಟಾರೆ ಗ್ರಾಮವೇ ಸೇವಂತಿಗೆಯ ಹೂವಿನ ಘಮಲಿನಿಂದ ಆವರಿಸಿಕೊಂಡಿದೆ.

ಮಲ್ಲಹಳ್ಳಿಯ ಸುತ್ತಲಿನ ಭೂಮಿಯಲ್ಲೆಲ್ಲಾ ಹೂವು ಅರಳುತ್ತಲೇ ತನ್ನ ಸುವಾಸನೆಯ ಕಂಪನ್ನು ಬೀರುತ್ತಿದೆ. ತಮ್ಮ ಭೂಮಿಯಲ್ಲಿ ಸೇವಂತಿಗೆ ಬೆಳೆಯನ್ನು ಬಿತ್ತಿ ಬೆಳೆಯವವರು ಹೂವಿನ ಕೃಷಿಕರಾದರೆ, ಅವರ ಮಕ್ಕಳು, ಮೊಮ್ಮಕ್ಕಳೇ ಇದರ ಮಾರಾಟಗಾರರು. ಈ ಹೂವನ್ನು ಮಾಲೆ ಮಾಡಿ ಮನೆಗೆಲಸದೊಂದಿಗೆ ಮಾಸಿಕ ಹತ್ತಾರು ಸಾವಿರ ರೂ. ಸಂಪಾದನೆಗೆ ದಾರಿ ಕಂಡುಕೊಂಡ ನೂರಾರು ಗೃಹಿಣಿಯರೂ ಈ ಊರಿನಲ್ಲಿದ್ದಾರೆ.

ಹೂವಿನ ಕೃಷಿ ಈ ಗ್ರಾಮಕ್ಕೆ ಹೊಸದಲ್ಲ, ಶತ ಶತಮಾನಗಳಿಂದಲೂ ಈ ಗ್ರಾಮ ಹೂವಿನ ಬೆಳೆಗೆ ಹೆಸರುವಾಸಿಯಾಗಿದ್ದರಿಂದಲೇ ಇದನ್ನು ಹೂವಿನ ಮಲ್ಲಹಳ್ಳಿ ಎಂದು ಕರೆಯುವ ಪರಿಪಾಠ ಬೆಳೆದು ಬಂದಿದೆ.

ಆ ಕಾಲದಲ್ಲಿ ತೆರೆದ ಬಾವಿಯಿಂದ ನೀರು ಎತ್ತಿ ಹೂ ಬೆಳೆಸುತ್ತಿದ್ದರೆ ಈಗ ತೆರೆದ ಬಾವಿಯ ಬದಲು ಕೊಳವೆ ಬಾವಿಗಳು ಪಂಪ್‌ಸೆಟ್, ಹನಿ ನೀರಾವರಿ ಮೂಲಕ ನೀರುಣಿಸಲಾಗುತ್ತದೆ.

ವಾರ್ಷಿಕ ಎರಡರಿಂದ ಮೂರು ಬೆಳೆ ಬೆಳದ ಹೂವನ್ನು ನಂಜನಗೂಡು, ಮೈಸೂರು, ಚಾಮರಾಜನಗರ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಾರೆ. ವಾರ್ಷಿಕ ಪ್ರತಿ ಎಕರೆಗೆ ೨ರಿಂದ ೩ ಲಕ್ಷ ರೂ. ಆದಾಯ ಕೃಷಿಕನಿಗಾದರೆ ಅದರ ಮಾರಾಟದಿಂದ ಲಕ್ಷಾಂತರ ರೂ. ಸಂಪಾದನೆ ಈ ಗ್ರಾಮದ ಯುವಕರದ್ದಾಗಿದೆ.

ಇನ್ನು ಗ್ರಾಮದ ಸಾಕಷ್ಟು ಮಹಿಳೆಯರಿಗೆ ಈ ಗ್ರಾಮದಲ್ಲಿ ಬೆಳೆದ ಹೂವನ್ನು ಮಾಲೆ ಕಟ್ಟುವುದರಿಂದ ಮಾಸಿಕ ಹತ್ತಾರು ಸಾವಿರ ರೂ. ಆದಾಯವಿದೆ. ಶೇ. ೯೦ರಷ್ಟು ಸೇವಂತಿಗೆ ಹೂ ಬೆಳೆಯುವ ಇಲ್ಲಿ ಸೇವಂತಿಗೆ ಹೂ ದರ ಕೆಜಿಗೆ ೧೦೦ ರೂ. ದಾಟಿದರೆ ನಮ್ಮ ಆದಾಯ ಇಮ್ಮಡಿ ಎನ್ನುತ್ತಾರೆ ಗ್ರಾಮದ ರಂಗಸ್ವಾಮಿ ನಾಯಕ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago