ಲಕ್ಷ್ಮೀಕಾಂತ್ ಕೊಮಾರಪ್ಪ
ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು
ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ ಮಲ್ಲಳ್ಳಿ ಜಲಪಾತ ನೋಡುಗರಿಗೆ ಸ್ವರ್ಗ. ಸೋಮವಾರಪೇಟೆ ನಗರದಿಂದ ೨೫ ಕಿ.ಮೀ. ದೂರದಲ್ಲಿರುವ ಈ ಜಲಪಾತಕ್ಕೆ ವರ್ಷವಿಡೀ ಪ್ರವಾಸಿಗರು ಆಗಮಿಸುತ್ತಾರೆ. ಇದರಿಂದ ಸ್ಥಳೀಯ ಪಂಚಾಯಿತಿಗೂ ಆದಾಯ ಬರುತ್ತಿದೆ. ಆದರೆ ಜಲಪಾತಕ್ಕೆ ಹೆಸರು ಬರುವಂತಾದ ಮಲ್ಲಳ್ಳಿ ಗ್ರಾಮವು ಇಂದಿಗೂ ಮೂಲಸೌಕರ್ಯಗಳಿಂದ ದೂರ ಉಳಿದಿದೆ.
ಮಲ್ಲಳ್ಳಿ ಜಲಪಾತದವರೆಗೆ ರಸ್ತೆಯನ್ನು ಅಭಿವದ್ಧಿಪಡಿಸಲಾಗಿದೆ, ಆದರೆ ಗ್ರಾಮಕ್ಕೆ ಕನಿಷ್ಠ ಕಚ್ಚಾ ರಸ್ತೆಯೂ ಇಲ್ಲ. ಮಳೆಗಾಲದಲ್ಲಿ ಈ ಗ್ರಾಮಕ್ಕೆ ವಾಹನಗಳ ಸಂಚಾರವಿಲ್ಲದೆ ದಿನಸಿ ವಸ್ತುಗಳನ್ನು ತಲೆ ಮೇಲೆ ಹೊತ್ತು ಒಂದೂವರೆ ಕಿ.ಮೀ. ದೂರ ನಡೆದು ಮನೆ ಸೇರಬೇಕಾದ ಪರಿಸ್ಥಿತಿ ಇದೆ.
ಮೂಲಸೌಕರ್ಯಗಳಿಲ್ಲದ ಕಾರಣ ಬಹುತೇಕ ಕುಟುಂಬಗಳು ಪಟ್ಟಣಕ್ಕೆ ವಲಸೆ ಹೋಗುತ್ತಿವೆ. ಅದರಲ್ಲೂ ಯುವಕ- ಯುವತಿಯರು ಉದ್ಯೋಗ ಅರಸಿ ನಗರ ಪ್ರದೇಶಕ್ಕೆ ವಲಸೆ ಹೋಗಿದ್ದಾರೆ. ಇನ್ನೊಂದೆಡೆ ಅಭಿವೃದ್ಧಿ ಕಾಣದ ಹಿನ್ನೆಲೆಯಲ್ಲಿ ಈ ಗ್ರಾಮಕ್ಕೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಎಷ್ಟೋ ಯುವಕರು ಮದುವೆಯಾಗದೆಯೇ ಉಳಿದಿದ್ದಾರೆ.
ರಾಜ್ಯ ಸರ್ಕಾರದಿಂದ ೩.೫೦ ಕೋಟಿ ರೂ. ಅನುದಾನದಲ್ಲಿ ಮಲ್ಲಳ್ಳಿ ಜಲಪಾತವನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ ಮಲ್ಲಳ್ಳಿ ಗ್ರಾಮಕ್ಕೆ ತೆರಳುವ ಒಂದೂವರೆ ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇದುವರೆಗೂ ನಯಾಪೈಸೆಯನ್ನೂ ನೀಡಿಲ್ಲ. ಇದ್ದ ೨೦ ಕುಟುಂಬಗಳಲ್ಲಿ ಈಗಾಗಲೇ ೧೨ ಕುಟುಂಬಗಳು ಗ್ರಾಮ ತೊರೆದು ಪಟ್ಟಣದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿವೆ.
ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಇಚ್ಛಾಶಕ್ತಿಯ ಕೊರತೆಯಿಂದ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಮಲ್ಲಳ್ಳಿ ಜಲಪಾತಕ್ಕೆ ಮಂತ್ರಿಗಳು, ಹಿರಿಯ ಅಧಿಕಾರಿಗಳು ಹಲವಾರು ಬಾರಿ ಭೇಟಿ ನೀಡಿದ್ದಾರೆ. ಇತ್ತೀಚೆಗೆ ಸರಿಯಾದ ರಸ್ತೆಯಿಲ್ಲ ಎಂಬ ಕಾರಣಕ್ಕೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
” ಮಳೆಗಾಲದಲ್ಲಿ ಸರಿಯಾಗಿ ವಿದ್ಯುತ್ ಇರುವುದಿಲ್ಲ. ನಮ್ಮವರ ನೋವನ್ನು ಯಾರೂ ಕೇಳುತ್ತಿಲ್ಲ. ಬೈಕ್, ಕಾರುಗಳು ನಮ್ಮ ಗ್ರಾಮಕ್ಕೆ ಬರುವುದಿಲ್ಲ. ಮಳೆಗಾಲದಲ್ಲಿ ವಾಹನಗಳ ಸಂಚಾರವಿಲ್ಲ. ಇದರಿಂದ ದಿನಸಿ ವಸ್ತುಗಳನ್ನು ತಲೆ ಮೇಲೆ ಹೊತ್ತು ಒಂದೂವರೆ ಕಿ.ಮೀ. ಗ್ರಾಮದ ರಸ್ತೆಯಲ್ಲಿ ನಡೆದು ಮನೆ ಸೇರಬೇಕು.”
-ರಮೇಶ್, ಕೃಷಿಕರು, ಮಲ್ಲಳ್ಳಿ ಗ್ರಾಮ
” ಆಸ್ತಿ ಹಕ್ಕುಪತ್ರಗಳಿಲ್ಲದೆ ಕಾಫಿ ಮಂಡಳಿ, ತೋಟಗಾರಿಕೆ, ಕೃಷಿ ಇಲಾಖೆಗಳಿಂದ ಸೌಲಭ್ಯಗಳು ಸಿಗುತ್ತಿಲ್ಲ. ಎಲ್ಲಾ ಇಲಾಖೆಗಳು ಇತ್ತ ಗಮನಹರಿಸಬೇಕು. ಈಗ ಪರಿಸರ ಸೂಕ್ಷ್ಮವಲಯ ಸಿ ಮತ್ತು ಡಿ ಭೂಮಿ ನೆಪದಲ್ಲಿ ಕೃಷಿಕರಿಗೆ ಅನ್ಯಾಯ ಮಾಡಬಾರದು. ಆಸ್ತಿಯ ಹಕ್ಕು ಪತ್ರ ನೀಡದಿದ್ದರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೇವೆ. ಕಂದಾಯ ಇಲಾಖೆಯ ನಿಯಮಗಳನ್ನು ಸರಳೀಕರಣಗೊಳಿಸಿ ಆಸ್ತಿಪತ್ರಗಳನ್ನು ನೀಡಬೇಕು.”
-ಗಣೇಶ್, ಮಲ್ಲಳ್ಳಿ ಗ್ರಾಮ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…
ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…