Andolana originals

ಸಂಶೋಧನೆಗೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯವೇ ಸೂಕ್ತ

ಬಿ.ಟಿ. ಮೋಹನ್ ಕುಮಾರ್

ಗ್ರಾಮೀಣ, ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ, ಶೈಕ್ಷಣಿಕ ವೆಚ್ಚವೂ ಕಡಿಮೆ

ಕೃಷಿ ವಿಜ್ಞಾನಿಗಳು, ಸರ್ಕಾರ ಹಾಗೂ ಕೃಷಿ ಸಚಿವರ ಒಮ್ಮತದ ಅಭಿಪ್ರಾಯ

ಮಂಡ್ಯ: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕಿಂತ ಮಂಡ್ಯ ತಾಲ್ಲೂಕಿನ ವಿ.ಸಿ. ಫಾರಂನ ಕೃಷಿ ವಿವಿಯು ಸಂಶೋಧನೆಗೆ ಹೆಚ್ಚು ಸೂಕ್ತವಾದ ಸ್ಥಳವಾಗಿದೆ ಎನ್ನುವುದು ಕೃಷಿ ವಿಜ್ಞಾನಿಗಳು, ಸರ್ಕಾರ ಹಾಗೂ ಕೃಷಿ ಸಚಿವಎನ್. ಚಲುವರಾಯಸ್ವಾಮಿ ಅವರ ಒಮ್ಮತದ ಅಭಿಪ್ರಾಯವಾಗಿದೆ.

ಮಂಡ್ಯ ತಾಲ್ಲೂಕು ವಿ.ಸಿ.ಫಾರಂ ಆವರಣವು ಐತಿಹಾಸಿಕ ಹಿನ್ನೆಲೆಯುಳ್ಳ ಹಾಗೂ ೧೯೩ರಲ್ಲಿ ಪ್ರಥಮ ಕೃಷಿ (ಕಬ್ಬು/ಸಕ್ಕರೆ) ಸಂಶೋಧನಾ ಕೇಂದ್ರವಾಗಿ ಪ್ರಾರಂಭಗೊಂಡಿದ್ದು, ಪ್ರಸ್ತುತ ಅಖಿಲ ಭಾರತ ಸುಸಂಘಟಿತ ಸಂಶೋಧನೆ ಪ್ರಾಯೋಜನೆಯಡಿ ಭತ್ತ, ಕಬ್ಬು, ಮುಸುಕಿನ ಜೋಳ, ರಾಗಿ, ಮೇವಿನ ಬೆಳೆ ಹಾಗೂ ಕೃಷಿ ಯಂತ್ರೋಪಕರಣಗಳ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ. ಈ ಸಂಶೋಧನೆಗಳ ಫಲಿತಾಂಶದಿಂದ ರೈತರಿಗೆ ಸಹಾಯ ವಾಗುತ್ತಿದೆ.

ಬೆಂಗಳೂರು ಕೃಷಿ ವಿವಿ ವ್ಯಾಪ್ತಿಯ ಎಲ್ಲ ಕೇಂದ್ರಗಳಿಗಿಂತ ಉತ್ತಮವಾಗಿರುವುದರಿಂದ ಹಾಸನದ ಕೃಷಿ ಮಹಾ ವಿದ್ಯಾಲಯವನ್ನು ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸುವುದರಿಂದ ತುಂಬಾ ಅನುಕೂಲವಾಗುತ್ತದೆ. ಜೊತೆಗೆ ಉತ್ತಮ ಗುಣಮಟ್ಟದ ತೆಂಗಿನ ಸಸಿಗಳು, ವಿವಿಧ ಬೆಳೆಗಳ ಬೀಜೋತ್ಪಾದನೆ, ಸಿರಿಧಾನ್ಯಗಳ ತಾಂತ್ರಿಕ ಮಾಹಿತಿಯ ಲಭ್ಯತೆ ಮತ್ತು ಉತ್ಪಾದನೆಗೆ ಬೇಕಾಗುವ ವೈಜ್ಞಾನಿಕ ತರಬೇತಿಯನ್ನು ಹಾಸನ ಜಿಲ್ಲೆಯ ರೈತರಿಗೆ ತ್ವರಿತವಾಗಿ ನೀಡಲು ಸಾಧ್ಯವಾಗುತ್ತದೆ.

ಹಾಸನ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಮಹಾವಿದ್ಯಾಲಯಗಳು, ಕೃಷಿ ಸಂಬಂಽತ ಇತರೆ ಸಂಸ್ಥೆಗಳು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ವಿ.ಸಿ. ಫಾರಂ ಕೃಷಿ ವಿವಿಗೆ ಸೇರಿಸಿರುವುದರಿಂದ ಬೆಂಗಳೂರು ಕೃಷಿ ವಿವಿಗಿಂತ ಸಂಶೋಧನೆ, ವಿಸ್ತರಣೆ ಮತ್ತು ಆಡಳಿತಾತ್ಮಕ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಅನುಕೂಲಕರವಾಗಿದೆ. ಹಾಸನದ ಕೃಷಿ ಮಹಾವಿದ್ಯಾಲಯ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯಕ್ಕೆ ಕೇವಲ ೧೦೦ ಕಿ.ಮೀ. ಹತ್ತಿರವಿದ್ದು, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ೧೮೩ ಕಿ.ಮೀ. ದೂರದಲ್ಲಿದೆ. ಹೀಗಾಗಿ ಎಲ್ಲ ಕಾರ್ಯ ಚಟುವಟಿಕೆಗಳಿಗೆ ನೆರವಾಗಲಿದೆ.

ಹಾಸನ ಕೃಷಿ ಮಹಾವಿದ್ಯಾಲಯ ಮತ್ತು ಇತರೆ ಕೃಷಿ ಸಂಬಂಧಿತ ಸಂಸ್ಥೆಗಳು ಹಾಗೂ ಮಂಡ್ಯದ ವಿ.ಸಿ. ಫಾರಂ ಇವೆರಡೂ, ಮಣ್ಣು ಮತ್ತು ಮಳೆ ಆಧಾರದ ಮೇಲೆ ವಿಂಗಡಿಸಿರುವ ಕೃಷಿ ಹವಾಮಾನ ವಲಯದಡಿ ಬರುವ ‘ದಕ್ಷಿಣ ಒಣ ವಲಯ’ಕ್ಕೆ ಸೇರಿರುವುದರಿಂದ, ಮಂಡ್ಯದ ವಿ.ಸಿ. ಫಾರಂನಲ್ಲಿ ನಡೆಯುವ ಸಂಶೋಧನೆ ಹಾಗೂ ಫಲಿತಾಂಶಗಳು ಹಾಸನ ಜಿಲೆಯ ರೈತರಿಗೂ ಅನ್ವಯಿಸುತ್ತವೆ.

ಅಲ್ಲದೆ, ಪ್ರಸ್ತುತ ವಾತಾವರಣ-ವೈಪರೀತ್ಯವನ್ನು ಎದುರಿಸಲು ವಿ.ಸಿ. ಫಾರಂನಲ್ಲಿ ಸೂಕ್ತವಾದ ವಿವಿಧ ಬೆಳೆಗಳ ಪ್ರಯೋಗಗಳು ನಡೆಯುತ್ತಿದ್ದು, ಇದರಿಂದ ಹಾಸನ ಜಿಲ್ಲೆಯ ಬೆಳೆಗಳಿಗೆ ತಂತ್ರಜ್ಞಾನಗಳನ್ನು ಒದಗಿಸಲು ಮಂಡ್ಯ ಕೃಷಿ ವಿಜ್ಞಾನಗಳ ವಿವಿ ಹೆಚ್ಚು ಸಹಕಾರಿಯಾಗಿದೆ.

ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮೈಸೂರು ವಿಭಾಗದಡಿ ನೂತನವಾಗಿ ಮಂಡ್ಯ ವಿ.ಸಿ. ಫಾರಂನಲ್ಲಿ ಕೃಷಿ ವಿಜ್ಞಾನಗಳ ವಿವಿಯನ್ನು ಪ್ರಾರಂಭಿಸಲು ಬೇಕಾಗಿರುವ ಜಮೀನು (೬೪೦ ಎಕರೆ) ಮತ್ತು ನೀರಿನ ಲಭ್ಯತೆ, ಮೂಲಸೌಕರ್ಯಗಳ ಬಳಕೆಯಿಂದ ಹಾಸನ ಜಿಲ್ಲೆಯ ರೈತರಿಗೆ ಹೊಸ ಬೆಳೆಗಳತಾಂತ್ರಿಕತೆ, ವೈಜ್ಞಾನಿಕ ತರಬೇತಿ ಮತ್ತು ಮಾಹಿತಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನೀಡಬಹುದು. ಸಂಶೋಧನಾ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲ ಮಂಡ್ಯ ಕೃಷಿ ವಿಜ್ಞಾನಗಳ ವಿವಿ ವ್ಯಾಪ್ತಿಯ ಮಹಾವಿದ್ಯಾಲಯಗಳಲ್ಲಿ, ಅಭ್ಯಸಿಸುವ ಬಹುತೇಕ ವಿದ್ಯಾರ್ಥಿಗಳು ರೈತರ ಮಕ್ಕಳು ಹಾಗೂ ಗ್ರಾಮೀಣ ಪ್ರದೇಶದವರೂ ಆಗಿರುವುದರಿಂದ ಅವರ ವಿದ್ಯಾಭ್ಯಾಸಕ್ಕೆ ಮತ್ತು ವಸತಿ ನಿಲಯಕ್ಕೆ ಸಂಬಂಧಪಟ್ಟ ವೆಚ್ಚವನ್ನು ಕಡಿಮೆ ಖರ್ಚಿನಲ್ಲಿ ನಿಭಾಯಿಸಬಹುದಾಗಿದೆ. ಅಲ್ಲದೆ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳ ಸಂಶೋಧನೆಗೆ ಪೂರಕವಾದ ನೀರು ಮತ್ತು ಉತ್ತಮ ಗುಣಮಟ್ಟದ ಮಣ್ಣಿನ ಲಭ್ಯತೆ ಜೊತೆಗೆ ಇನ್ನಿತರೆ ಎಲ್ಲ ಸೌಕರ್ಯಗಳು ದೊರೆಯುವುದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಗೆ ಸಹಕಾರಿಯಾಗಿದೆ.ಈ ಎಲ್ಲ ಕಾರಣಗಳಿಂದ ಹಾಸನ ಜಿಲ್ಲೆ ವ್ಯಾಪ್ತಿಯ ಕೃಷಿ ಮಹಾವಿದ್ಯಾಲಯಗಳು ಮತ್ತು ಕೃಷಿ ಸಂಬಂಧಿತ ಇತರೆ ಸಂಸ್ಥೆಗಳನ್ನು ಮಂಡ್ಯ ಕೃಷಿ ವಿಜ್ಞಾನಗಳ ವಿವಿ ವ್ಯಾಪ್ತಿಗೆ ಸೇರಿಸಿರುವುದು ಸೂಕ್ತವಾಗಿದೆ ಎಂಬ ಚಿಂತನೆ ನಡೆದಿದೆ.

 ‘ಕೃಷಿ ಬಗ್ಗೆ ಹೆಚ್ಚು ಒಲವು ಬೆಳೆಸಲು ನೆರವು’” 

” ಮಂಡ್ಯ ಜಿಲ್ಲೆಯ ಜನತೆ ಹಾಗೂ ರಾಜ್ಯದ ಎಲ್ಲ ಕೃಷಿಕರ ಅಭ್ಯುದಯದ ಗುರಿಯೊಂದಿಗೆ ಈ ಕೃಷಿ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಲಿದ್ದು, ಕೃಷಿಯಲ್ಲಿ ನಾವೀನ್ಯತೆ ಕಂಡುಕೊಳ್ಳಲು, ವಿಜ್ಞಾನವನ್ನು ಅಳವಡಿಸಿಕೊಂಡು, ಮುಂದಿನ ಪೀಳಿಗೆಗೆ ಕೃಷಿ ಕ್ಷೇತ್ರದ ಬಗ್ಗೆ ಮತ್ತಷ್ಟು ಒಲವು ಬೆಳೆಸಲು ನೆರವಾಗಲಿದೆ. ಸಮಗ್ರ ಕೃಷಿ, ಸಾವಯವ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಕೃಷಿ ವಿವಿಗಳೊಂದಿಗೆ ರೈತರ ಸಂಪರ್ಕ ಕಲ್ಪಿಸುವ ಜೊತೆ ಸಂಶೋಧನೆಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ.”

ಎನ್.ಚಲುವರಾಯಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು

‘ರೇವಣ್ಣ ವಿರೋಧ ಸರಿಯಲ್ಲ’

” ವಿ.ಸಿ. ಫಾರಂನಲ್ಲಿ ಸ್ಥಾಪನೆಯಾಗುತ್ತಿರುವ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಹಾಸನ ಕೃಷಿ ಮಹಾವಿದ್ಯಾಲಯ ಮತ್ತು ಇತರೆ ಸಂಸ್ಥೆಗಳನ್ನು ಸೇರಿಸಲು ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಹಾಸನ ಜಿಲ್ಲೆಯ ಶಾಸಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಕೃಷಿಕಾಲೇಜು ಮಂಡ್ಯ ಕೃಷಿ ವಿ.ವಿ.ಗೆ ಒಳಪಡುವುದರಿಂದ ರೈತರ ಮಕ್ಕಳ ವಿದ್ಯಾಭ್ಯಾಸ ಮತ್ತು ವಸತಿ ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನೆಗೆ ಪೂರಕವಾಗಿದೆ. ಸಮಗ್ರ ಕೃಷಿ ವಿವಿಗೆ ರೈತರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಬಲ ನೀಡುವುದು ಸೂಕ್ತ.”

ಸುನಂದಾ ಜಯರಾಂ, ರೈತ ನಾಯಕಿ

ಆಂದೋಲನ ಡೆಸ್ಕ್

Recent Posts

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

3 mins ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

2 hours ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

3 hours ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

3 hours ago