ಮೈಸೂರು ಜಿಲ್ಲೆಯಲ್ಲಿ ಒಟ್ಟು 4,270 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆದಿರುವ ರೈತರು
ದೂರ ನಂಜುಂಡಸ್ವಾಮಿ
ದೂರ: ಹಣ್ಣುಗಳ ರಾಜ ಮಾವಿನ ಹಣ್ಣು ಎಂದರೆ ಜನರ ಬಾಯಲ್ಲಿ ನೀರೂರುತ್ತದೆ. ರೈತರಿಗೆ ಉತ್ತಮವಾದ ಆದಾಯವನ್ನು ತಂದುಕೊಡುವ ಮಾವು ಪ್ರತಿ ಬಾರಿಗಿಂತ ಈ ಬಾರಿ ಹೆಚ್ಚಿನ ಲಾಭ ತರುವ ನಿರೀಕ್ಷೆಯನ್ನು ರೈತರಲ್ಲಿ ಮೂಡಿಸಿದೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು ೪,೨೭೦ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಮೈಸೂರು ತಾಲ್ಲೂಕಿನಲ್ಲಿ ೧,೬೪೦ ಹೆಕ್ಟೇರ್, ಎಚ್. ಡಿ. ಕೋಟೆಯಲ್ಲಿ ೬೨೭, ಹುಣಸೂರಿನಲ್ಲಿ ೧,೨೬೪, ಕೆ. ಆರ್. ನಗರದಲ್ಲಿ ೮೮, ನಂಜನಗೂಡಿ ನಲ್ಲಿ ೩೬೨, ಪಿ. ಪಟ್ಟಣದಲ್ಲಿ ೫೩, ತಿ. ನರಸೀಪುರ ದಲ್ಲಿ ೨೧೭, ಸರಗೂರಿನಲ್ಲಿ ೨೧ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ.
ಮೈಸೂರು ತಾಲ್ಲೂಕಿನ ಜಯಪುರ ಹಾಗೂ ಇಲವಾಲ ಹೋಬಳಿಯಲ್ಲಿ ಅತಿ ಹೆಚ್ಚು ಹಾಗೂ ಕಸಬಾ ಮತ್ತು ವರುಣ ಹೋಬಳಿಯಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮಾವು ಬೆಳೆಯನ್ನು ಬೆಳೆಯಲಾಗಿದೆ.
ಈ ಬಾರಿ ಹೂ ಬಿಡುವುದು ತಡವಾದರೂ ಕೂಡ ಐದಾರು ವರ್ಷಗಳಿಗೆ ಹೋಲಿಸಿದರೆ ಅತಿ ಹೆಚ್ಚು ಹೂ ಬಿಟ್ಟಿರುವುದರಿಂದ ಮಾವು ತಜ್ಞರ ಪ್ರಕಾರ ಶೇ. ೭೫-೮೦ರಷ್ಟು ಇಳುವರಿ ನಿರೀಕ್ಷೆಯಲ್ಲಿ ರೈತರು ಇದ್ದಾರೆ.
ಹತ್ತಾರು ವರ್ಷಗಳ ಹಿಂದೆ ಮಾವು ಒಂದೇ ಬಾರಿ ಹೂ ಬಿಟ್ಟು ಕಾಯಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಹವಾಮಾನದ ಕೊರತೆಯಿಂದ ಡಿಸೆಂಬರ್ನಿಂದ ಫೆಬ್ರವರಿತನಕವೂ ಹೂ ಬಿಡುತ್ತಿದೆ. ಅಲ್ಲದೆ
ಹಿಂದೆ ರೋಗವನ್ನು ತಡೆಗಟ್ಟಲು ಒಂದರಿಂದ ಎರಡು ಬಾರಿ ಮಾತ್ರ ರಾಸಾಯನಿಕ ಸಿಂಪಡಣೆ ಮಾಡುತ್ತಿದ್ದರು. ಆದರೆ ಈ ಬಾರಿ ಬೂದಿರೋಗ, ಜೋನು ಅಲ್ಲಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರು ವುದರಿಂದ ಈಗಾಗಲೇ ರೈತರು ಹಾಗೂ ಮಾವು ಬೆಳೆ ಪಡೆದ ಗುತ್ತಿಗೆದಾರರು ನಾಲ್ಕರಿಂದ ಐದು ಬಾರಿ ರಾಸಾಯನಿಕ ಸಿಂಪಡಣೆ ಮಾಡಿ ಮಾವು ಬೆಳೆಯನ್ನು ರಕ್ಷಿಸಿಕೊಳ್ಳುತ್ತಿದ್ದಾರೆ.
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಲ್ಲಾ ಕಡೆಗಳಲ್ಲಿ ಅತಿ ಹೆಚ್ಚು ಹೂ ಬಿಟ್ಟಿರುವುದರಿಂದ ಉತ್ತಮ ಇಳುವರಿ ನಿರೀಕ್ಷೆಯಲ್ಲಿ ರೈತರು ಹಾಗೂ ಗುತ್ತಿಗೆದಾರರು ಇದ್ದಾರೆ. ಈ ಬಾರಿ ಉತ್ತಮವಾಗಿ ಮಳೆಯಾದರೂ ಕೂಡ ಇತರೆ ಬೆಳೆಗಳು ಸರಿಯಾದ ಪ್ರಮಾಣದಲ್ಲಿ ಲಾಭದಾಯಕ ವಾಗಲಿಲ್ಲ. ಆದರೆ ತೋಟಗಾರಿಕೆ ಬೆಳೆಯಾದ ಮಾವು ಉತ್ತಮ ಆದಾಯ ತರಬಹುದೆಂಬ ನಿರೀಕ್ಷೆಯಲ್ಲಿ ರೈತರು ಇದ್ದಾರೆ.
ಕಳೆದ ವರ್ಷ ಹೆಚ್ಚು ಬೆಲೆ ಇದ್ದರೂ ಉತ್ತಮ ಇಳುವರಿ ಇಲ್ಲದೆ ರೈತರು ಹಾಗೂ ಗುತ್ತಿಗೆದಾರರು ನಷ್ಟ ಅನುಭವಿಸಿದ್ದರು. ಈ ಬಾರಿ ಉತ್ತಮ ಇಳುವರಿ ನಿರೀಕ್ಷೆ ಇದೆ. ಆದರೆ ಬಿಟ್ಟ ಹೂವು ಕಾಯಾಗುವವರೆಗೂ ರೋಗಗಳಿಂದ ಕಾಪಾಡುವುದು ನಮಗೆ ಸವಾಲಾಗಿದೆ. ಇದರಿಂದ ಕಳೆದ ಬಾರಿಗಿಂತ ಈ ಬಾರಿ ಅತಿ ಹೆಚ್ಚು ಔಷಧಿ ಸಿಂಪಡಣೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. -ಯೋಗೀಶ್, ಮಾವು ಗುತ್ತಿಗೆದಾರರು, ಹುಲ್ಲಹಳ್ಳಿ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…