Andolana originals

ರೈತರಲ್ಲಿ ಲಾಭದ ನಿರೀಕ್ಷೆ ಮೂಡಿಸಿದ ಮಾವು

ಮೈಸೂರು ಜಿಲ್ಲೆಯಲ್ಲಿ ಒಟ್ಟು 4,270 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆದಿರುವ ರೈತರು

ದೂರ ನಂಜುಂಡಸ್ವಾಮಿ

ದೂರ: ಹಣ್ಣುಗಳ ರಾಜ ಮಾವಿನ ಹಣ್ಣು ಎಂದರೆ ಜನರ ಬಾಯಲ್ಲಿ ನೀರೂರುತ್ತದೆ. ರೈತರಿಗೆ ಉತ್ತಮವಾದ ಆದಾಯವನ್ನು ತಂದುಕೊಡುವ ಮಾವು ಪ್ರತಿ ಬಾರಿಗಿಂತ ಈ ಬಾರಿ ಹೆಚ್ಚಿನ ಲಾಭ ತರುವ ನಿರೀಕ್ಷೆಯನ್ನು ರೈತರಲ್ಲಿ ಮೂಡಿಸಿದೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು ೪,೨೭೦ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಮೈಸೂರು ತಾಲ್ಲೂಕಿನಲ್ಲಿ ೧,೬೪೦ ಹೆಕ್ಟೇರ್, ಎಚ್. ಡಿ. ಕೋಟೆಯಲ್ಲಿ ೬೨೭, ಹುಣಸೂರಿನಲ್ಲಿ ೧,೨೬೪, ಕೆ. ಆರ್. ನಗರದಲ್ಲಿ ೮೮, ನಂಜನಗೂಡಿ ನಲ್ಲಿ ೩೬೨, ಪಿ. ಪಟ್ಟಣದಲ್ಲಿ ೫೩, ತಿ. ನರಸೀಪುರ ದಲ್ಲಿ ೨೧೭, ಸರಗೂರಿನಲ್ಲಿ ೨೧ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ.

ಮೈಸೂರು ತಾಲ್ಲೂಕಿನ ಜಯಪುರ ಹಾಗೂ ಇಲವಾಲ ಹೋಬಳಿಯಲ್ಲಿ ಅತಿ ಹೆಚ್ಚು ಹಾಗೂ ಕಸಬಾ ಮತ್ತು ವರುಣ ಹೋಬಳಿಯಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮಾವು ಬೆಳೆಯನ್ನು ಬೆಳೆಯಲಾಗಿದೆ.

ಈ ಬಾರಿ ಹೂ ಬಿಡುವುದು ತಡವಾದರೂ ಕೂಡ ಐದಾರು ವರ್ಷಗಳಿಗೆ ಹೋಲಿಸಿದರೆ ಅತಿ ಹೆಚ್ಚು ಹೂ ಬಿಟ್ಟಿರುವುದರಿಂದ ಮಾವು ತಜ್ಞರ ಪ್ರಕಾರ ಶೇ. ೭೫-೮೦ರಷ್ಟು ಇಳುವರಿ ನಿರೀಕ್ಷೆಯಲ್ಲಿ ರೈತರು ಇದ್ದಾರೆ.

ಹತ್ತಾರು ವರ್ಷಗಳ ಹಿಂದೆ ಮಾವು ಒಂದೇ ಬಾರಿ ಹೂ ಬಿಟ್ಟು ಕಾಯಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಹವಾಮಾನದ ಕೊರತೆಯಿಂದ ಡಿಸೆಂಬರ್‌ನಿಂದ ಫೆಬ್ರವರಿತನಕವೂ ಹೂ ಬಿಡುತ್ತಿದೆ. ಅಲ್ಲದೆ

ಹಿಂದೆ ರೋಗವನ್ನು ತಡೆಗಟ್ಟಲು ಒಂದರಿಂದ ಎರಡು ಬಾರಿ ಮಾತ್ರ ರಾಸಾಯನಿಕ ಸಿಂಪಡಣೆ ಮಾಡುತ್ತಿದ್ದರು. ಆದರೆ ಈ ಬಾರಿ ಬೂದಿರೋಗ, ಜೋನು ಅಲ್ಲಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರು ವುದರಿಂದ ಈಗಾಗಲೇ ರೈತರು ಹಾಗೂ ಮಾವು ಬೆಳೆ ಪಡೆದ ಗುತ್ತಿಗೆದಾರರು ನಾಲ್ಕರಿಂದ ಐದು ಬಾರಿ ರಾಸಾಯನಿಕ ಸಿಂಪಡಣೆ ಮಾಡಿ ಮಾವು ಬೆಳೆಯನ್ನು ರಕ್ಷಿಸಿಕೊಳ್ಳುತ್ತಿದ್ದಾರೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಲ್ಲಾ ಕಡೆಗಳಲ್ಲಿ ಅತಿ ಹೆಚ್ಚು ಹೂ ಬಿಟ್ಟಿರುವುದರಿಂದ ಉತ್ತಮ ಇಳುವರಿ ನಿರೀಕ್ಷೆಯಲ್ಲಿ ರೈತರು ಹಾಗೂ ಗುತ್ತಿಗೆದಾರರು ಇದ್ದಾರೆ. ಈ ಬಾರಿ ಉತ್ತಮವಾಗಿ ಮಳೆಯಾದರೂ ಕೂಡ ಇತರೆ ಬೆಳೆಗಳು ಸರಿಯಾದ ಪ್ರಮಾಣದಲ್ಲಿ ಲಾಭದಾಯಕ ವಾಗಲಿಲ್ಲ. ಆದರೆ ತೋಟಗಾರಿಕೆ ಬೆಳೆಯಾದ ಮಾವು ಉತ್ತಮ ಆದಾಯ ತರಬಹುದೆಂಬ ನಿರೀಕ್ಷೆಯಲ್ಲಿ ರೈತರು ಇದ್ದಾರೆ.

ಕಳೆದ ವರ್ಷ ಹೆಚ್ಚು ಬೆಲೆ ಇದ್ದರೂ ಉತ್ತಮ ಇಳುವರಿ ಇಲ್ಲದೆ ರೈತರು ಹಾಗೂ ಗುತ್ತಿಗೆದಾರರು ನಷ್ಟ ಅನುಭವಿಸಿದ್ದರು. ಈ ಬಾರಿ ಉತ್ತಮ ಇಳುವರಿ ನಿರೀಕ್ಷೆ ಇದೆ. ಆದರೆ ಬಿಟ್ಟ ಹೂವು ಕಾಯಾಗುವವರೆಗೂ ರೋಗಗಳಿಂದ ಕಾಪಾಡುವುದು ನಮಗೆ ಸವಾಲಾಗಿದೆ. ಇದರಿಂದ ಕಳೆದ ಬಾರಿಗಿಂತ ಈ ಬಾರಿ ಅತಿ ಹೆಚ್ಚು ಔಷಧಿ ಸಿಂಪಡಣೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. -ಯೋಗೀಶ್, ಮಾವು ಗುತ್ತಿಗೆದಾರರು, ಹುಲ್ಲಹಳ್ಳಿ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago