ಗುಂಡ್ಲುಪೇಟೆ ಪಟ್ಟಣದ ಒಂದನೇ ವಾರ್ಡಿನ ಶಿವಮಲ್ಲಪ್ಪ ಬಡಾವಣೆಯ ರಸ್ತೆಯ ಮಧ್ಯಭಾಗದಲ್ಲಿ ಯುಜಿಡಿ ಮ್ಯಾನ್ಹೋಲ್ ತೆರೆದ ಸ್ಥಿತಿಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಒಂದು ವಾರದಿಂದ ರಕ್ಷಣೆ ಇಲ್ಲದ ಸ್ಥಿತಿಯಲ್ಲಿದ್ದು, ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರತಿದಿನ ನೂರಾರು ವಾಹನಗಳು ಮತ್ತು ಪಾದಚಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ವಿದ್ಯುತ್ ಇಲ್ಲದ ಸಮಯದಲ್ಲಿ ಪಾದಚಾರಿಗಳು ಬಿದ್ದು ಅಪಾಯವಾದರೆ ಯಾರು ಹೊಣೆ ಎನ್ನುವಂತಾಗಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಮ್ಯಾನ್ಹೋಲ್ ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಸುಹೃತ್ ಭಟ್, ಗುಂಡ್ಲುಪೇಟೆ





