Andolana originals

ನಿವಾಸಿಗಳ ನೆಮ್ಮದಿ ಕೆಡಿಸಿದ ಮ್ಯಾನ್‌ಹೋಲ್‌ಗಳು

ಪ್ರಶಾಂತ್ ಎಸ್.

ಉಕ್ಕಿ ಹರಿಯುತ್ತಿರುವ ಒಳಚರಂಡಿಯಿಂದ ಸಮಸ್ಯೆ; ಅಗ್ರಹಾರದ ರಾಮಾನುಜ ರಸ್ತೆಯ ೧೫ನೇ ಕ್ರಾಸ್ ಜನರ ಪರದಾಟ

ಫೋನ್ ಮಾಡಿದರೂ ಸ್ಪಂದಿಸದ ನಗರಪಾಲಿಕೆ ಅಧಿಕಾರಿಗಳು

ಮ್ಯಾನ್‌ಹೋಲ್ ನೀರಿನಿಂದ ಕೆರೆಯಂತಾದ ಮನೆ ಆವರಣಗಳು

ಚರಂಡಿಗಳಲ್ಲಿ ಮಡುಗಟ್ಟಿ ನಿಂತ ನೀರಿನಲ್ಲಿ ಸೊಳ್ಳೆ ಸಂತಾನ

ಮೈಸೂರು: ‘ಸ್ವಚ್ಛ ನಗರಿ’ ಪಟ್ಟ ಅಲಂಕರಿಸಲು ಹೆಣಗಾಡುತ್ತಿರುವ ಮೈಸೂರು ನಗರಪಾಲಿಕೆಯ ಆಡಳಿತ ವರ್ಗ, ಪಾಲಿಕೆಯ ಕಣ್ಣಳತೆ ದೂರದಲ್ಲಿರುವ ರಾಮಾನುಜ ರಸ್ತೆಯ ೧೫ನೇ ಕ್ರಾಸ್‌ನಲ್ಲಿ ಉಕ್ಕಿ ಹರಿಯುತ್ತಿರುವ ಮ್ಯಾನ್‌ಹೋಲ್ ದುರಸ್ತಿಪಡಿಸಲು ಮುಂದಾಗದಿರುವುದರಿಂದ ಮ್ಯಾನ್‌ಹೋಲ್‌ಗಳು ನಿವಾಸಿಗಳ ನೆಮ್ಮದಿ ಕೆಡಿಸಿದೆ.

ಅವೈಜ್ಞಾನಿಕ ಚರಂಡಿಗಳಿಂದ ಮೊದಲೇ ಇಲ್ಲಿ ತ್ಯಾಜ್ಯ ನೀರು ಸರಾಗವಾಗಿ ಹರಿಯುವುದಿಲ್ಲ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಯುಜಿಡಿ ಮಾರ್ಗದಲ್ಲಿ ಹರಿಯುವ ಮಲಮೂತ್ರ ಮಿಶ್ರಿತ ಕೊಳಚೆ ನೀರು ಉಕ್ಕಿ ಹರಿಯುತ್ತಿರುವುದರಿಂದ ಇಡೀ ಬೀದಿ ದುರ್ವಾಸನೆ ಬೀರುತ್ತಿದೆ. ಇದರಿಂದ ಸ್ಥಳೀಯರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಮೃತ್ಯುಕೂಪಗಳಾದ ಒಳಚರಂಡಿಗಳು: ಕೆಲವು ಮ್ಯಾನ್‌ಹೋಲ್‌ಗಳು ರಸ್ತೆಗಿಂತ ನಾಲ್ಕೈದು ಇಂಚು ಕೆಳಗಿದ್ದರೆ ಕೆಲವು ಕಡೆಗಳಲ್ಲಿ ರಸ್ತೆಗಿಂತ ಒಂದು ಅಡಿಯಷ್ಟು ಮೇಲೆ ನಿರ್ಮಿಸಲಾಗಿದೆ. ಇದರಿಂದಾಗಿ ಪಾದಚಾರಿಗಳು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ರಾತ್ರಿ ವೇಳೆ ಪಾದಚಾರಿಗಳು ಹಾಗೂ ವಾಹನ ಸವಾರರು ಬಿದ್ದು ಕೈ-ಕಾಲು ಮುರಿದುಕೊಳ್ಳುವಂತಾಗಿದೆ.

ಅಧಿಕಾರಿಗಳ ವಿರುದ್ಧ ಅಸಮಾಧಾನ: ನಗರದ ಮೂರು ಕಡೆಗಳಲ್ಲಿ ಯುಜಿಡಿ ನೀರು ಸಂಸ್ಕರಿಸುವ ಘಟಕ ನಿರ್ಮಾಣವಾಗಿದೆ. ಈ ಘಟಕಗಳು ಎಷ್ಟರಮಟ್ಟಿಗೆ ಕಾರ್ಯನಿರ್ವಹಿಸುತ್ತಿವೆ? ಈ ಘಟಕಗಳಲ್ಲಿ ಸಂಸ್ಕರಣೆಗೊಂಡ ನೀರನ್ನು ಎಲ್ಲಿಗೆ ಹರಿಸಲಾಗುತ್ತಿದೆ ಎಂಬುದರ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ಇದರ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್ ಮೂಲಕ, ಖುದ್ದು ಕಚೇರಿಗೆ ತೆರಳಿ ವಿಚಾರಿಸಿದರೂ ಅಽಕಾರಿಗಳು ಮಾಹಿತಿ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

” ಮಳೆ ಸಮಯದಲ್ಲಿ ರಸ್ತೆ ಮೇಲೆ ಬಿದ್ದ ಮಳೆ ನೀರು ಹರಿದು ಹೋಗಲು ಒಳಚರಂಡಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಇದರಿಂದ ಸಹಜವಾಗಿ ನೀರು ಮ್ಯಾನ್‌ಹೋಲ್‌ಗಳಲ್ಲಿನ ಕೊಳಚೆ ನೀರಿನೊಂದಿಗೆ ಮಿಶ್ರಣಗೊಂಡು ರಸ್ತೆ ಮೇಲೆ ಹರಿಯುತ್ತದೆ. ಒಳಚರಂಡಿ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುತ್ತೇವೆ. ನಗರಪಾಲಿಕೆ ಇಂಜಿನಿಯರ್‌ಗಳು ಅದರ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಲಾಗುವುದು.”

ಶೇಖ್ ತನ್ವೀರ್ ಆಸೀಫ್, ನಗರಪಾಲಿಕೆ ಆಯುಕ್ತ

” ಯುಜಿಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿದು ಯುಜಿಡಿ ನೀರು ಸಂಸ್ಕರಣಾ ಘಟಕಗಳನ್ನು ಹೆಚ್ಚಿಸಿ, ಈ ನೀರನ್ನು ಮರುಬಳಕೆ ಮಾಡಿಕೊಳ್ಳಬೇಕು. ಯುಜಿಡಿ ಸಮಸ್ಯೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು.”

ಸಿದ್ದರಾಜು, ರಾಮಾನುಜ ರಸ್ತೆ ನಿವಾಸಿ

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

34 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago