Andolana originals

ಮಾನಸಿಕ ಸಮಸ್ಯೆಗಳಿಗಿದೆ ಮನೋ ಚೈತನ್ಯ ಕ್ಲಿನಿಕ್

ಕೆ.ಆರ್.ನಗರ: ಕರ್ನಾಟಕದಲ್ಲಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆಯ ವ್ಯವಸ್ಥೆ ಏರ್ಪಡಿಸಲಾಗಿದೆ.

ಎಲ್ಲೆಡೆ ಮನೋ ಚೈತನ್ಯ ಕ್ಲಿನಿಕ್ ತೆರೆಯಲಾಗಿದೆ. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ಪ್ರತಿ ಮೂರನೇ ಮಂಗಳವಾರ ಮಾನಸಿಕ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾಗೆಯೇ ಚಿಕಿತ್ಸಾ ವ್ಯವಸ್ಥೆಯನ್ನೂ ಮಾಡಲಾಗಿದೆ.

2021ರ ಬಳಿಕ ವರ್ಷದಲ್ಲಿ ಮನೋ ಚೈತನ್ಯ ಕಾರ್ಯಕ್ರಮದ ಅಡಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಎಷ್ಟು ಮಂದಿ ಖಿನ್ನತೆ ಒಳಗಾಗಿದ್ದಾರೆಯೋ ಅವರಿಗೆಲ್ಲ ಮನೋ ಚೈತನ್ಯ ಕ್ಲಿನಿಕ್ ಮೂಲಕ ಚಿಕಿತ್ಸೆಯ ನೆರವು ನೀಡಲು ತಾಲ್ಲೂಕು ಆರೋಗ್ಯ ಇಲಾಖೆ ಸಜ್ಜಾಗಿದೆ. ಇದರ ನೇತೃತ್ವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ತಜ್ಞ ಡಾ.ಕಿಶೋರ್ ವಹಿಸಿ ಈಗಾಗಲೇ ಚಿಕಿತ್ಸೆ ನೀಡುತ್ತಿದ್ದಾರೆ. ಮೇ 21ರ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 450 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಪಕ್ಕದ ತಾಲ್ಲೂಕುಗಳಾದ ಕೆ.ಆರ್. ಪೇಟೆ, ಹುಣಸೂರು, ಪಿರಿಯಾಪಟ್ಟಣ, ಹೊಳೆನರಸೀಪುರ ತಾಲ್ಲೂಕುಗಳಲ್ಲಿ ಮಾನಸಿಕ ತಜ್ಞ ವೈದ್ಯರು ಇಲ್ಲದೇ ಇರುವುದರಿಂದ ಈ ತಾಲ್ಲೂಕುಗಳಿಂದಲೂ ಮಾನಸಿಕ ಖಿನ್ನತೆಗೆ ಒಳಗಾದ ಸಾಕಷ್ಟು ಮಂದಿ ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ.

ಯಾವುದೇ ನಿರ್ಭಯವಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದವರು ಗುಪ್ತವಾಗಿ, ಸಂಕೋಚವಿಲ್ಲದೆ ಟೆಲಿ ಮಾನಸ ಸಹಾಯ ವಾಣಿಗೆ ಕರೆ ಮಾಡಬಹುದು. ಗರ್ಭಿಣಿಯರು ತಮ್ಮ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಮನೋ ಚೈತನ್ಯ ಕ್ಲಿನಿಕ್ ಮೂಲಕ ಹಂಚಿಕೊಂಡರೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಪ್ರತಿ ಮೂರನೇ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮನೋ ಚಿಕಿತ್ಸಾ ವೈದ್ಯರ ತಂಡ ಆಗಮಿಸಿ ಚಿಕಿತ್ಸೆ ನೀಡುತ್ತಾರೆ. ಇದರ ಸದುಪಯೋಗ ಪಡೆದುಕೊಳ್ಳಬೇಕು.
-ಡಾ.ಡಿ.ನಟರಾಜು, ಟಿಎಚ್‌ಒ, ಕೆ.ಆರ್.ನಗರ

ಭೇರ್ಯ ಮಹೇಶ್

ಮೂಲತಃ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಸಮೀಪದ ಬಟಿಗನಹಳ್ಳಿ ಗ್ರಾಮದವನಾದ ನಾನು ಭೇರ್ಯ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮುಗಿಸಿ ಹೊಸ ಅಗ್ರಹಾರದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದೇನೆ. 2002 ಹಾಗೂ 2004ರಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದೇನೆ. 1992ರಿಂದ ಆಂದೋಲನ ಮತ್ತು ಮೈಸೂರು ಮಿತ್ರ ಸೇರಿದಂತೆ ಪತ್ರಿಕಾ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದು, 2000ರಲ್ಲಿ ಪ್ರಜಾನುಡಿ ದಿನ ಪತ್ರಿಕೆಯ ಕೆ.ಆರ್.ನಗರ ತಾಲ್ಲೂಕು ಗ್ರಾಮಾಂತರ ವರದಿಗಾರನಾಗಿ ತದ ನಂತರ ಆಂದೋಲನ ಮತ್ತು ಕನ್ನಡ ಪ್ರಭ ಪತ್ರಿಕೆಯ ತಾಲ್ಲೂಕು ಗ್ರಾಮಾಂತರ ಮತ್ತು ಭೇರ್ಯ ಗ್ರಾಮದ ವರದಿಗಾರನಾಗಿ ಕಾರ್ಯನಿರ್ವಹಿಸಿ ಪ್ರಸ್ತುತ 2021ರಿಂದ ಕೆ.ಆರ್.ನಗರ ತಾಲ್ಲೂಕು ಆಂದೋಲನ ಪತ್ರಿಕೆಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

6 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

12 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

1 hour ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

1 hour ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

1 hour ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

2 hours ago