ಕೆ.ಆರ್.ನಗರ: ಕರ್ನಾಟಕದಲ್ಲಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆಯ ವ್ಯವಸ್ಥೆ ಏರ್ಪಡಿಸಲಾಗಿದೆ.
ಎಲ್ಲೆಡೆ ಮನೋ ಚೈತನ್ಯ ಕ್ಲಿನಿಕ್ ತೆರೆಯಲಾಗಿದೆ. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ಪ್ರತಿ ಮೂರನೇ ಮಂಗಳವಾರ ಮಾನಸಿಕ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾಗೆಯೇ ಚಿಕಿತ್ಸಾ ವ್ಯವಸ್ಥೆಯನ್ನೂ ಮಾಡಲಾಗಿದೆ.
2021ರ ಬಳಿಕ ವರ್ಷದಲ್ಲಿ ಮನೋ ಚೈತನ್ಯ ಕಾರ್ಯಕ್ರಮದ ಅಡಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಎಷ್ಟು ಮಂದಿ ಖಿನ್ನತೆ ಒಳಗಾಗಿದ್ದಾರೆಯೋ ಅವರಿಗೆಲ್ಲ ಮನೋ ಚೈತನ್ಯ ಕ್ಲಿನಿಕ್ ಮೂಲಕ ಚಿಕಿತ್ಸೆಯ ನೆರವು ನೀಡಲು ತಾಲ್ಲೂಕು ಆರೋಗ್ಯ ಇಲಾಖೆ ಸಜ್ಜಾಗಿದೆ. ಇದರ ನೇತೃತ್ವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ತಜ್ಞ ಡಾ.ಕಿಶೋರ್ ವಹಿಸಿ ಈಗಾಗಲೇ ಚಿಕಿತ್ಸೆ ನೀಡುತ್ತಿದ್ದಾರೆ. ಮೇ 21ರ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 450 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಪಕ್ಕದ ತಾಲ್ಲೂಕುಗಳಾದ ಕೆ.ಆರ್. ಪೇಟೆ, ಹುಣಸೂರು, ಪಿರಿಯಾಪಟ್ಟಣ, ಹೊಳೆನರಸೀಪುರ ತಾಲ್ಲೂಕುಗಳಲ್ಲಿ ಮಾನಸಿಕ ತಜ್ಞ ವೈದ್ಯರು ಇಲ್ಲದೇ ಇರುವುದರಿಂದ ಈ ತಾಲ್ಲೂಕುಗಳಿಂದಲೂ ಮಾನಸಿಕ ಖಿನ್ನತೆಗೆ ಒಳಗಾದ ಸಾಕಷ್ಟು ಮಂದಿ ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ.
ಯಾವುದೇ ನಿರ್ಭಯವಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದವರು ಗುಪ್ತವಾಗಿ, ಸಂಕೋಚವಿಲ್ಲದೆ ಟೆಲಿ ಮಾನಸ ಸಹಾಯ ವಾಣಿಗೆ ಕರೆ ಮಾಡಬಹುದು. ಗರ್ಭಿಣಿಯರು ತಮ್ಮ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಮನೋ ಚೈತನ್ಯ ಕ್ಲಿನಿಕ್ ಮೂಲಕ ಹಂಚಿಕೊಂಡರೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಪ್ರತಿ ಮೂರನೇ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮನೋ ಚಿಕಿತ್ಸಾ ವೈದ್ಯರ ತಂಡ ಆಗಮಿಸಿ ಚಿಕಿತ್ಸೆ ನೀಡುತ್ತಾರೆ. ಇದರ ಸದುಪಯೋಗ ಪಡೆದುಕೊಳ್ಳಬೇಕು.
-ಡಾ.ಡಿ.ನಟರಾಜು, ಟಿಎಚ್ಒ, ಕೆ.ಆರ್.ನಗರ
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…