Andolana originals

ಮಾನಸಿಕ ಸಮಸ್ಯೆಗಳಿಗಿದೆ ಮನೋ ಚೈತನ್ಯ ಕ್ಲಿನಿಕ್

ಕೆ.ಆರ್.ನಗರ: ಕರ್ನಾಟಕದಲ್ಲಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆಯ ವ್ಯವಸ್ಥೆ ಏರ್ಪಡಿಸಲಾಗಿದೆ.

ಎಲ್ಲೆಡೆ ಮನೋ ಚೈತನ್ಯ ಕ್ಲಿನಿಕ್ ತೆರೆಯಲಾಗಿದೆ. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ಪ್ರತಿ ಮೂರನೇ ಮಂಗಳವಾರ ಮಾನಸಿಕ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾಗೆಯೇ ಚಿಕಿತ್ಸಾ ವ್ಯವಸ್ಥೆಯನ್ನೂ ಮಾಡಲಾಗಿದೆ.

2021ರ ಬಳಿಕ ವರ್ಷದಲ್ಲಿ ಮನೋ ಚೈತನ್ಯ ಕಾರ್ಯಕ್ರಮದ ಅಡಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಎಷ್ಟು ಮಂದಿ ಖಿನ್ನತೆ ಒಳಗಾಗಿದ್ದಾರೆಯೋ ಅವರಿಗೆಲ್ಲ ಮನೋ ಚೈತನ್ಯ ಕ್ಲಿನಿಕ್ ಮೂಲಕ ಚಿಕಿತ್ಸೆಯ ನೆರವು ನೀಡಲು ತಾಲ್ಲೂಕು ಆರೋಗ್ಯ ಇಲಾಖೆ ಸಜ್ಜಾಗಿದೆ. ಇದರ ನೇತೃತ್ವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ತಜ್ಞ ಡಾ.ಕಿಶೋರ್ ವಹಿಸಿ ಈಗಾಗಲೇ ಚಿಕಿತ್ಸೆ ನೀಡುತ್ತಿದ್ದಾರೆ. ಮೇ 21ರ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 450 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಪಕ್ಕದ ತಾಲ್ಲೂಕುಗಳಾದ ಕೆ.ಆರ್. ಪೇಟೆ, ಹುಣಸೂರು, ಪಿರಿಯಾಪಟ್ಟಣ, ಹೊಳೆನರಸೀಪುರ ತಾಲ್ಲೂಕುಗಳಲ್ಲಿ ಮಾನಸಿಕ ತಜ್ಞ ವೈದ್ಯರು ಇಲ್ಲದೇ ಇರುವುದರಿಂದ ಈ ತಾಲ್ಲೂಕುಗಳಿಂದಲೂ ಮಾನಸಿಕ ಖಿನ್ನತೆಗೆ ಒಳಗಾದ ಸಾಕಷ್ಟು ಮಂದಿ ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ.

ಯಾವುದೇ ನಿರ್ಭಯವಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದವರು ಗುಪ್ತವಾಗಿ, ಸಂಕೋಚವಿಲ್ಲದೆ ಟೆಲಿ ಮಾನಸ ಸಹಾಯ ವಾಣಿಗೆ ಕರೆ ಮಾಡಬಹುದು. ಗರ್ಭಿಣಿಯರು ತಮ್ಮ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಮನೋ ಚೈತನ್ಯ ಕ್ಲಿನಿಕ್ ಮೂಲಕ ಹಂಚಿಕೊಂಡರೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಪ್ರತಿ ಮೂರನೇ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮನೋ ಚಿಕಿತ್ಸಾ ವೈದ್ಯರ ತಂಡ ಆಗಮಿಸಿ ಚಿಕಿತ್ಸೆ ನೀಡುತ್ತಾರೆ. ಇದರ ಸದುಪಯೋಗ ಪಡೆದುಕೊಳ್ಳಬೇಕು.
-ಡಾ.ಡಿ.ನಟರಾಜು, ಟಿಎಚ್‌ಒ, ಕೆ.ಆರ್.ನಗರ

ಭೇರ್ಯ ಮಹೇಶ್

ಮೂಲತಃ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಸಮೀಪದ ಬಟಿಗನಹಳ್ಳಿ ಗ್ರಾಮದವನಾದ ನಾನು ಭೇರ್ಯ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮುಗಿಸಿ ಹೊಸ ಅಗ್ರಹಾರದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದೇನೆ. 2002 ಹಾಗೂ 2004ರಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದೇನೆ. 1992ರಿಂದ ಆಂದೋಲನ ಮತ್ತು ಮೈಸೂರು ಮಿತ್ರ ಸೇರಿದಂತೆ ಪತ್ರಿಕಾ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದು, 2000ರಲ್ಲಿ ಪ್ರಜಾನುಡಿ ದಿನ ಪತ್ರಿಕೆಯ ಕೆ.ಆರ್.ನಗರ ತಾಲ್ಲೂಕು ಗ್ರಾಮಾಂತರ ವರದಿಗಾರನಾಗಿ ತದ ನಂತರ ಆಂದೋಲನ ಮತ್ತು ಕನ್ನಡ ಪ್ರಭ ಪತ್ರಿಕೆಯ ತಾಲ್ಲೂಕು ಗ್ರಾಮಾಂತರ ಮತ್ತು ಭೇರ್ಯ ಗ್ರಾಮದ ವರದಿಗಾರನಾಗಿ ಕಾರ್ಯನಿರ್ವಹಿಸಿ ಪ್ರಸ್ತುತ 2021ರಿಂದ ಕೆ.ಆರ್.ನಗರ ತಾಲ್ಲೂಕು ಆಂದೋಲನ ಪತ್ರಿಕೆಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

1 hour ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

3 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

3 hours ago