Andolana originals

ಮಾನಸಿಕ ಸಮಸ್ಯೆಗಳಿಗಿದೆ ಮನೋ ಚೈತನ್ಯ ಕ್ಲಿನಿಕ್

ಕೆ.ಆರ್.ನಗರ: ಕರ್ನಾಟಕದಲ್ಲಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆಯ ವ್ಯವಸ್ಥೆ ಏರ್ಪಡಿಸಲಾಗಿದೆ.

ಎಲ್ಲೆಡೆ ಮನೋ ಚೈತನ್ಯ ಕ್ಲಿನಿಕ್ ತೆರೆಯಲಾಗಿದೆ. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ಪ್ರತಿ ಮೂರನೇ ಮಂಗಳವಾರ ಮಾನಸಿಕ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾಗೆಯೇ ಚಿಕಿತ್ಸಾ ವ್ಯವಸ್ಥೆಯನ್ನೂ ಮಾಡಲಾಗಿದೆ.

2021ರ ಬಳಿಕ ವರ್ಷದಲ್ಲಿ ಮನೋ ಚೈತನ್ಯ ಕಾರ್ಯಕ್ರಮದ ಅಡಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಎಷ್ಟು ಮಂದಿ ಖಿನ್ನತೆ ಒಳಗಾಗಿದ್ದಾರೆಯೋ ಅವರಿಗೆಲ್ಲ ಮನೋ ಚೈತನ್ಯ ಕ್ಲಿನಿಕ್ ಮೂಲಕ ಚಿಕಿತ್ಸೆಯ ನೆರವು ನೀಡಲು ತಾಲ್ಲೂಕು ಆರೋಗ್ಯ ಇಲಾಖೆ ಸಜ್ಜಾಗಿದೆ. ಇದರ ನೇತೃತ್ವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ತಜ್ಞ ಡಾ.ಕಿಶೋರ್ ವಹಿಸಿ ಈಗಾಗಲೇ ಚಿಕಿತ್ಸೆ ನೀಡುತ್ತಿದ್ದಾರೆ. ಮೇ 21ರ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 450 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಪಕ್ಕದ ತಾಲ್ಲೂಕುಗಳಾದ ಕೆ.ಆರ್. ಪೇಟೆ, ಹುಣಸೂರು, ಪಿರಿಯಾಪಟ್ಟಣ, ಹೊಳೆನರಸೀಪುರ ತಾಲ್ಲೂಕುಗಳಲ್ಲಿ ಮಾನಸಿಕ ತಜ್ಞ ವೈದ್ಯರು ಇಲ್ಲದೇ ಇರುವುದರಿಂದ ಈ ತಾಲ್ಲೂಕುಗಳಿಂದಲೂ ಮಾನಸಿಕ ಖಿನ್ನತೆಗೆ ಒಳಗಾದ ಸಾಕಷ್ಟು ಮಂದಿ ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ.

ಯಾವುದೇ ನಿರ್ಭಯವಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದವರು ಗುಪ್ತವಾಗಿ, ಸಂಕೋಚವಿಲ್ಲದೆ ಟೆಲಿ ಮಾನಸ ಸಹಾಯ ವಾಣಿಗೆ ಕರೆ ಮಾಡಬಹುದು. ಗರ್ಭಿಣಿಯರು ತಮ್ಮ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಮನೋ ಚೈತನ್ಯ ಕ್ಲಿನಿಕ್ ಮೂಲಕ ಹಂಚಿಕೊಂಡರೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಪ್ರತಿ ಮೂರನೇ ಮಂಗಳವಾರ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮನೋ ಚಿಕಿತ್ಸಾ ವೈದ್ಯರ ತಂಡ ಆಗಮಿಸಿ ಚಿಕಿತ್ಸೆ ನೀಡುತ್ತಾರೆ. ಇದರ ಸದುಪಯೋಗ ಪಡೆದುಕೊಳ್ಳಬೇಕು.
-ಡಾ.ಡಿ.ನಟರಾಜು, ಟಿಎಚ್‌ಒ, ಕೆ.ಆರ್.ನಗರ

ಭೇರ್ಯ ಮಹೇಶ್

ಮೂಲತಃ ಕೆ.ಆರ್.ನಗರ ತಾಲ್ಲೂಕಿನ ಭೇರ್ಯ ಸಮೀಪದ ಬಟಿಗನಹಳ್ಳಿ ಗ್ರಾಮದವನಾದ ನಾನು ಭೇರ್ಯ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮುಗಿಸಿ ಹೊಸ ಅಗ್ರಹಾರದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದೇನೆ. 2002 ಹಾಗೂ 2004ರಲ್ಲಿ ಪತ್ರಿಕೋದ್ಯಮ ತರಬೇತಿ ಪಡೆದಿದ್ದೇನೆ. 1992ರಿಂದ ಆಂದೋಲನ ಮತ್ತು ಮೈಸೂರು ಮಿತ್ರ ಸೇರಿದಂತೆ ಪತ್ರಿಕಾ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದು, 2000ರಲ್ಲಿ ಪ್ರಜಾನುಡಿ ದಿನ ಪತ್ರಿಕೆಯ ಕೆ.ಆರ್.ನಗರ ತಾಲ್ಲೂಕು ಗ್ರಾಮಾಂತರ ವರದಿಗಾರನಾಗಿ ತದ ನಂತರ ಆಂದೋಲನ ಮತ್ತು ಕನ್ನಡ ಪ್ರಭ ಪತ್ರಿಕೆಯ ತಾಲ್ಲೂಕು ಗ್ರಾಮಾಂತರ ಮತ್ತು ಭೇರ್ಯ ಗ್ರಾಮದ ವರದಿಗಾರನಾಗಿ ಕಾರ್ಯನಿರ್ವಹಿಸಿ ಪ್ರಸ್ತುತ 2021ರಿಂದ ಕೆ.ಆರ್.ನಗರ ತಾಲ್ಲೂಕು ಆಂದೋಲನ ಪತ್ರಿಕೆಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

13 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

13 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

13 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

13 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

13 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago