Andolana originals

ದಶಮಂಟಪ ತೀರ್ಪುಗಾರಿಕೆಯಲ್ಲಿ ಹಲವು ಬದಲಾವಣೆ?

ನವೀನ್ ಡಿಸೋಜ

ಗೊಂದಲಗಳಾಗದಂತೆ ಎಚ್ಚರ ವಹಿಸಲು ಸಮಿತಿ ನಿರ್ಧಾರ

ಅನುಭವದ ಆಧಾರದ ಮೇಲೆ ತೀರ್ಪುಗಾರರ ಆಯ್ಕೆ ಸಾಧ್ಯತೆ 

ಮಡಿಕೇರಿ: ಈ ಬಾರಿಯ ಮಡಿಕೇರಿ ದಸರಾ ಜನೋತ್ಸವದ ದಶಮಂಟಪ ತೀರ್ಪುಗಾರಿಕೆಯಲ್ಲಿ ಹಲವು ಬದಲಾವಣೆಗಳನ್ನು ತರಲು ದಶಮಂಟಪ ಸಮಿತಿ ಮುಂದಾಗಿದ್ದು, ತೀರ್ಪಿನಲ್ಲಿ ಯಾವುದೇ ಗೊಂದಲಗಳಾಗದಂತೆ ಎಚ್ಚರ ವಹಿಸಲು ನಿರ್ಧರಿಸಲಾಗಿದೆ.

ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಶ ಮಂಟಪಗಳ ಶೋಭಾಯಾತ್ರೆಯ ತೀರ್ಪುಗಾರಿಕೆ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಕೆಲ ಮಂಟಪ ಸಮಿತಿಗಳಿಂದ ಅಪಸ್ವರ ಕೇಳಿಬರುತ್ತಿದೆ. ಹಲವು ಸಂದರ್ಭಗಳಲ್ಲಿ ತೀರ್ಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮಂಟಪ ಸಮಿತಿಗಳು ವೇದಿಕೆಯಲ್ಲಿಯೇ ಪ್ರತಿಭಟಿಸಿದ ಉದಾಹರಣೆಗಳಿವೆ.

ಇತ್ತೀಚಿನ ವರ್ಷಗಳಲ್ಲಿ ಪ್ರತಿ ವರ್ಷ ಒಂದಲ್ಲಾ ಒಂದು ಸಮಿತಿಗಳು ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಇವೆ. ಹೀಗಾಗಿ ಈ ಬಾರಿ ದಸರಾ ದಶಮಂಟಪ ತೀರ್ಪುಗಾರಿಕೆಯಲ್ಲಿ ಹಲವು ಬದಲಾವಣೆಗಳನ್ನು ತರಲು ಶ್ರೀ ಕೋಟೆ ಮಹಾಗಣಪತಿ ದಸರಾ ದಶಮಂಟಪ ಸಮಿತಿ ಮುಂದಾಗಿದೆ. ಈ ಬಾರಿ ಒಟ್ಟು ನಾಲ್ಕು ಮಂದಿ ತೀರ್ಪುಗಾರರು ಇರಲಿದ್ದು, ಎಲ್ಲರಿಗೂ ಮಂಟಪಗಳಲ್ಲಿನ ಅನುಭವದ ಆಧಾರದ ಮೇಲೆಯೇ ಜವಾಬ್ದಾರಿ ವಹಿಸಲು ತೀರ್ಮಾನಿಸಲಾಗಿದೆ.

ದಸರಾ ಮಂಟಪಗಳ ವಿಚಾರದಲ್ಲಿ ಅನುಭವ ಇಲ್ಲದವರನ್ನು ತೀರ್ಪುಗಾರರನ್ನಾಗಿ ಆಯ್ಕೆ ಮಾಡಲಾಗುತ್ತಿದೆ ಎಂಬ ಅಸಮಾಧಾನ ಈ ಹಿಂದೆ ಕೆಲ ಸಮಿತಿಗಳಿಂದ ವ್ಯಕ್ತವಾಗಿದೆ. ತೀರ್ಪುಗಾರರನ್ನು ನೇಮಕ ಮಾಡುವ ಸಂಪೂರ್ಣ ಜವಾಬ್ದಾರಿ ದಶ ಮಂಟಪ ಸಮಿತಿಯನ್ನು ಮುನ್ನಡೆಸುವವರದ್ದೇ ಆಗಿರುವುದರಿಂದ ಅವರಿಗೆ ಬೇಕಾದಂತೆ ತೀರ್ಪುಗಾರರನ್ನು ಆಯ್ಕೆ ಮಾಡಲಾಗುತ್ತಿದೆ ಎಂಬ ಅಪಸ್ವರ ಕೇಳಿಬರುತ್ತಲೇ ಇದೆ. ಹೀಗಾಗಿ ಈ ಬಾರಿ ಅಂತಹ ಕಳಂಕ ಬಾರದಂತೆ ಜವಾಬ್ದಾರಿ ಹೊತ್ತಿರುವ ಕೋಟೆ ಶ್ರೀ ಮಹಾಗಣಪತಿ ದಸರಾ ಸಮಿತಿ ನೇತೃತ್ವದ ದಶ ಮಂಟಪ ಸಮಿತಿ ಎಚ್ಚರ ವಹಿಸುತ್ತಿದೆ.

ನಾಲ್ಕು ಮಂದಿ ತೀರ್ಪುಗಾರರ ಪೈಕಿ ಇಬ್ಬರು ಮಡಿಕೇರಿ ದಸರಾ ಹಿನ್ನೆಲೆ ಇರುವವರು, ಸಂಪ್ರದಾಯ ತಿಳಿದಿರುವ ಹಿರಿಯರು, ಇಂದಿನ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯ ಅನುಭವ ಇರುವ ದಸರಾದಲ್ಲಿ ಕೆಲಸ ಮಾಡಿರುವ ಇಬ್ಬರು ಯುವ ತೀರ್ಪುಗಾರರನ್ನು ಆಯ್ಕೆ ಮಾಡಲಾಗುತ್ತಿದೆ. ಇದಕ್ಕಾಗಿ ಎಲ್ಲ ಸಮಿತಿಗಳಿಂದಲೂ ತೀರ್ಪುಗಾರರನ್ನು ಶೀಫಾರಸ್ಸು ಮಾಡಲು ದಶ ಮಂಟಪ ಸಮಿತಿ ಕೇಳಿಕೊಂಡಿದೆ. ಎಲ್ಲಾ ಸಮಿತಿಗಳಿಂದ ಬರುವ ಹೆಸರುಗಳ ಪೈಕಿ ನಾಲ್ವರ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ. ಅಲ್ಲದೇ ತೀರ್ಪುಗಾರರಾಗಿ ಆಯ್ಕೆಯಾಗುವ ನಾಲ್ವರ ಹಿನ್ನೆಲೆ, ಅನುಭವದ ವಿವರವನ್ನು ಉತ್ಸವಕ್ಕೂ ಮೊದಲೇ ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುತ್ತದೆ ಎಂದು ದಶ ಮಂಟಪ ಸಮಿತಿ ಮೂಲಗಳಿಂದ ತಿಳಿದುಬಂದಿದೆ.

ಆಯಾ ದೇವಾಲಯಗಳ ಮಂಟಪ ಸಮಿತಿಗಳು ತಮಗೆ ನೀಡಲಾದ ಸಮಯಕ್ಕೆ ಸರಿಯಾಗಿ ತೀರ್ಪುಗಾರಿಕೆ ಪ್ರದರ್ಶನ ನೀಡಬೇಕೆಂದು ಸೂಚಿಸಲಾಗುತ್ತಿದೆ. ತೀರ್ಪುಗಾರರಿಗೂ ಮೊದಲೇ ದಶ ಮಂಟಪ ಸಮಿತಿಯ ತಂಡವೊಂದು ಪ್ರತಿ ಮಂಟಪದ ಬಳಿ ತೆರಳಿ ಮಂಟಪ ತಯಾರಿಸಿರುವುದು ನಿಯಮ ಬದ್ಧವಾಗಿದೆಯೇ? ಟ್ರಾಕ್ಟರ್ ಚಾಲನಾ ಸ್ಥಿತಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿ ತೀರ್ಪುಗಾರರಿಗೆ ಮಾಹಿತಿ ನೀಡುತ್ತಾರೆ. ತೀರ್ಪುಗಾರರು ಬಂದು ನಿಂತ ಕೂಡಲೇ ಹಿಂದಿನಂತೆ ಟ್ರಾಕ್ಟರ್ ಚಾಲಿಸಿ ತೋರಿಸುವುದು ಮತ್ತಿತರ ಯಾವುದೇ ಕ್ರಮಗಳಿಲ್ಲದೇ ನೇರವಾಗಿ ಕಥಾ ಸಾರಾಂಶವನ್ನು ಪ್ರಸ್ತುತಪಡಿಸಬಹುದಾಗಿದೆ. ಇದರಿಂದ ಸಮಯದ ಉಳಿತಾಯವಾಗಲಿದೆ ಎನ್ನುವುದು ದಸರಾ ದಶಮಂಟಪ ಸಮಿತಿ ಲೆಕ್ಕಾಚಾರವಾಗಿದೆ. ಬೆಳಗಿನ ಜಾವ ೪.೩೦ರ ವೇಳೆಗೆ ಎಲ್ಲಾ ೧೦ ಮಂಟಪಗಳ ಜಡ್ಜ್‌ಮೆಂಟ್ ಶೋ ಮುಗಿಸಲು ಚಿಂತಿಸಲಾಗುತ್ತಿದೆ.

ಸುಗಮ ಪ್ರದರ್ಶನಕ್ಕೆ ಅವಕಾಶ ಕೊಡುವ ನಿಟ್ಟಿನಲ್ಲಿ ಹಲವು ಬದಲಾವಣೆಗಳನ್ನು ತರಲು ದಶಮಂಟಪ ಸಮಿತಿಯ ಸಭೆಯಲ್ಲಿ ಚರ್ಚಿಸಲಾಗಿದೆ. ಅದರಂತೆ ನಗರದ ಟೌನ್ ಹಾಲ್ ಮುಂಭಾಗದಲ್ಲಿ ಯಾವುದೇ ಮಂಟಪದ ಪ್ರದರ್ಶನ ಇರುವುದಿಲ್ಲ. ಕುಂದುರುಮೊಟ್ಟೆ ದೇವಾಲಯದ ಮಂಟಪಕ್ಕೆ ರಾಜ್ ದರ್ಶನ್ ಬಳಿ, ದೇಚೂರು ಮಂಟಪಕ್ಕೆ ಆಂಜನೇಯ ದೇವಾಲಯದ ಬಳಿ ಸ್ಥಳ ನೀಡುವ ಕುರಿತು ಚಿಂತನೆ ನಡೆದಿದೆ. ಇಂತಹ ಹಲವು ಬದಲಾವಣೆಗಳ ಮೂಲಕ ಜನದಟ್ಟಣೆ ನಿರ್ವಹಣೆಗೂ ಸಮಿತಿ ಸಿದ್ಧತೆ ನಡೆಸಿದೆ.

” ಈ ಬಾರಿ ದಸರಾ ದಶಮಂಟಪಗಳ ತೀರ್ಪುಗಾರಿಕೆಯಲ್ಲಿ ಹಲವು ಬದಲಾವಣೆಗಳನ್ನು ತರಲು ತೀರ್ಮಾನಿಸಲಾಗಿದ್ದು, ದಶ ಮಂಟಪ ಸಭೆಯಲ್ಲಿ ಈ ವಿಚಾರವಾಗಿ ಎಲ್ಲಾ ೧೦ ಮಂಟಪ ಸಮಿತಿಗಳೊಂದಿಗೆ ಚರ್ಚಿಸಲಾಗುವುದು. ಒಮ್ಮತದ ತೀರ್ಮಾನ ತೆಗೆದುಕೊಂಡು ಬಳಿಕ ಹೊಸ ನಿಯಮಗಳು ಮತ್ತು ಕ್ರಮಗಳನ್ನು ಪ್ರಕಟಿಸಲಾಗುವುದು.”

-ಬಿ.ಎಂ. ರಾಜೇಶ್, ಗೌರವಾಧ್ಯಕ್ಷ, ದಸರಾ ದಶಮಂಟಪ ಸಮಿತಿ

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago