Andolana originals

ಕ್ರೀಡಾಂಗಣ ಸೌಲಭ್ಯಕ್ಕಾಗಿ ಆಗ್ರಹಿಸಿ ಫೆ.೧೬ಕ್ಕೆ ಮ್ಯಾರಥಾನ್

ಎಂ.ನಾರಾಯಣ

ಸಾಧಕ ಕ್ರೀಡಾಪಟುಗಳನ್ನು ನೀಡಿದ ತಿ.ನರಸೀಪುರದಲ್ಲಿ ಸುಸಜ್ಜಿತ ಕ್ರೀಡಾಂಗಣವಿಲ್ಲ 

ತಿ.ನರಸೀಪುರ: ಖೋಖೋ ವಿಶ್ವಕಪ್ ನಲ್ಲಿ ಆಡುವಂತಹ ಕ್ರೀಡಾಪಟುಗಳನ್ನು ನೀಡಿದ ತಾಲ್ಲೂಕು ಕೇಂದ್ರದಲ್ಲಿ ಕ್ರೀಡಾಂಗಣ ಸೌಲಭ್ಯ ಬೇಕು ಎಂಬ ಕೂಗು ಈಗ ಹೋರಾಟದ ರೂಪ ಪಡೆದಿದ್ದು, ಅದಕ್ಕಾಗಿ ಫೆಬ್ರವರಿ ೧೬ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ  ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಿಂದ ತಾಲ್ಲೂಕು ಆಡಳಿತದ ಭವನದವರೆಗೆ ಮ್ಯಾರಥಾನ್ ನಡೆಯಲಿದೆ.

ತಾಲ್ಲೂಕಿನಲ್ಲಿ ಹಲವಾರು ದಶಕಗಳಿಂದ ಅಥ್ಲೀಟ್, ಜಾವೆಲಿನ್ ಥ್ರೋ, ವಾಲಿವಾಲ್, ನೆಟ್‌ಬಾಲ್ ಹಾಗೂ ಖೋಖೋ ಆಟಗಳಲ್ಲಿ ಪ್ರತಿಭಾವಂತ ಆಟಗಾರರು ಹೊರಹೊಮ್ಮಿದ್ದಾರೆ.  ಆದರೆ ಕ್ರೀಡಾಪಟುಗಳ ಅಭ್ಯಾಸಕ್ಕೆ   ತಾಲ್ಲೂಕು ಕೇಂದ್ರದಲ್ಲಿ ಕ್ರೀಡಾಂಗಣ ಇಲ್ಲದಿರುವುದು ಮಾತ್ರ ವಿಷಾದನೀಯ.

ಪ್ರಸ್ತುತ ಖಾಸಗಿ ವಿದ್ಯೋದಯ ಶಿಕ್ಷಣ ಸಂಸ್ಥೆಯಲ್ಲಿನ ಕ್ರೀಡಾಂಗಣವನ್ನು ಅವಲಂಬಿಸಲಾಗಿದೆ. ೨೦ ವರ್ಷಗಳಿಂದಲೂ ಕ್ರೀಡಾಂಗಣದ ಬೇಡಿಕೆ ಇದೆ.

ಈ ಹಿನ್ನೆಲೆಯಲ್ಲಿ ಕೆಲ ವರ್ಷಗಳ ಹಿಂದೆ ತಾಲ್ಲೂಕು ಕ್ರೀಡಾಂಗಣ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದು ಹಲವಾರು ಹಿರಿಯ ಕ್ರೀಡಾಪಟುಗಳು ಸ್ಥಳೀಯ ಜನಪ್ರತಿನಿಧಿಗಳಿಗೆ, ಜಿಲ್ಲಾ,  ತಾಲ್ಲೂಕು ಮಟ್ಟದ ಅಽಕಾರಿಗಳಿಗೆ ಮನವಿ ಮಾಡುತ್ತಾ ಬರಲಾಗಿದ್ದರೂ ಪ್ರಯೋಜನವಾಗಿಲ್ಲ.

ನಿರಂತರ ಮನವಿಗಳ ಮೇರೆಗೆ  ಸರ್ಕಾರ ಪಟ್ಟಣದ ಹೃದಯ ಭಾಗದಲ್ಲಿ ಭೈರಾಪುರ ಸರ್ವೆ ನಂ. ೪೬/೨,  ೪೬/೧ಎ,೪೬/೧ಬಿಯಲ್ಲಿ ಸುಮಾರು ೬ ಎಕರೆ ಮತ್ತು ಸರ್ವೆ ನಂ.೫೨ರಲ್ಲಿ ೩.೨೦ ಎಕರೆ ಒಟ್ಟು ೯.೨೦ ಎಕರೆ ಕ್ರೀಡಾಂಗಣಕ್ಕೆ ಯೋಗ್ಯ ಮತ್ತು ಸೂಕ್ತವಾದ ವಿಶಾಲ ಪ್ರದೇಶವನ್ನು ಗುರುತಿಸಿದೆ ಎಂದು ತಿಳಿದು ಬಂದಿದೆಯಾದರೂ ೧ ವರ್ಷದಿಂದ  ಅದು ಕಾರ್ಯರೂಪಕ್ಕೆ ಬರುವಲ್ಲಿ ವಿಳಂಬವಾಗಿದೆ. ಇದರ ನಡುವೆ ತಾಲ್ಲೂಕನ್ನು ಪ್ರತಿನಿಽಸಿ ಸಿದ್ದರಾಮಯ್ಯ ಅವರು ಸಿಎಂ ಆಗಿ ಹಾಗೂ ಡಾ.ಹೆಚ್.ಸಿ.ಮಹದೇವಪ್ಪರವರು  ಜಿಲ್ಲಾ ಉಸ್ತುವಾರಿ ಸಚಿವರಾಗಿ ರುವುದು ಕ್ರೀಡಾಂಗಣ ನಿರ್ಮಾಣದ ಭರವಸೆಯನ್ನು  ಜೀವಂತವಾಗಿಸಿದೆ.

ಇತ್ತೀಚೆಗೆ ತಾಲ್ಲೂಕಿನ ಗ್ರಾಮೀಣ ಪ್ರತಿಭೆ ಕುರುಬೂರಿನ ಬಿ.ಚೈತ್ರಾ ಮೊದಲ ವಿಶ್ವಕಪ್ ಖೋಖೋ ಪಂದ್ಯಾವಳಿಯಲ್ಲಿ ಆಡಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಜತೆಗೆ ಭಾರತ ವಿಶ್ವಕಪ್ ಪಡೆಯಲು ಕೊಡುಗೆ ನೀಡಿದ್ದರಿಂದ ಕ್ರೀಡಾಂಗಣ ನಿರ್ಮಾಣ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ.

ಸುಸಜ್ಜಿತ ಕ್ರೀಡಾಂಗಣವಿಲ್ಲದಿದ್ದರೂ,  ಕ್ರೀಡಾಪಟುಗಳ ಕಣಜವಾದ ತಾಲ್ಲೂಕಿನ ನೂರಾರು ಕ್ರೀಡಾಪಟುಗಳು ಈಗಾಗಲೇ ವಿಶ್ವವಿದ್ಯಾನಿಲಯ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಾಲ್ಲೂಕಿನ ಕೀರ್ತಿ ಪತಾಕೆ ಹಿಡಿದಿದ್ದಾರೆ. ಕ್ರೀಡಾಪಟು ಗಳು ಹೆಚ್ಚಿನ ಅಭ್ಯಾಸಕ್ಕೆ ಮೈಸೂರಿಗೆ ತೆರಳಬೇಕಿದೆ.

” ಆಟೋಟಗಳಿಗೆ ಹಾಗೂ ಬಿಡುವಿನ ವೇಳೆ ಗ್ರಾಮೀಣ ಕ್ರೀಡಾಪಟುಗಳ ಉತ್ತಮ ಅಭ್ಯಾಸಕ್ಕೆ ತಾಲ್ಲೂಕು ಕೇಂದ್ರದಲ್ಲಿ ಸುಸಜ್ಜಿತ ಕ್ರೀಡಾಂಗಣ ಬೇಕಿದೆ. ಹೀಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ.  ಇದಕ್ಕೆ ಜನತೆ ಸಂಪೂರ್ಣವಾಗಿ ಸಹಕರಿಸಬೇಕು.”

-ಮಣಿಕಂಠರಾಜ್ ಗೌಡ,  ಸೇವಾಶ್ರಯ ಫೌಂಡೇಶನ್ ಅಧ್ಯಕ್ಷ

” ಪಟ್ಟಣದಲ್ಲಿ ವಾಯುವಿಹಾರಕ್ಕೆ ಮುಖ್ಯ ರಸ್ತೆಗಳಲ್ಲಿಯೇ ಸಂಚರಿಸಬೇಕಿದೆ. ಉದ್ಯಾನವನವೂ ಇಲ್ಲ.  ಈ ಕಾರಣದಿಂದ ಪಟ್ಟಣದಲ್ಲಿ ಕ್ರೀಡಾಂಗಣಕ್ಕೆ ಒತ್ತಾಯಿಸಿ   ಫೆ.೧೬ರ ಭಾನುವಾರ ಬೆಳಿಗ್ಗೆ ಕ್ರೀಡಾಂಗಣ ಹೋರಾಟ ಸಮಿತಿಯಿಂದ ವಿದ್ಯೋದಯ ಕಾಲೇಜು ವೃತ್ತದಿಂದ –  ಕಾಲೇಜು ರಸ್ತೆ, ಲಿಂಕ್ ರಸ್ತೆ, ಕೆನರಾ ಬ್ಯಾಂಕ್ ರಸ್ತೆ ಮೂಲಕ   ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ಮನವಿ ಸಲ್ಲಿಸುವ ಮ್ಯಾರಥಾನ್ ನಡಿಗೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಾಲ್ಲೂಕಿನ ಎಲ್ಲಾ ಕ್ರೀಡಾಪಟುಗಳು ಸೇರಿದಂತೆ  ಸಾರ್ವಜನಿಕರು ಭಾಗವಹಿಸಬೇಕು.”

 -ಆಲಗೂಡು ಶಿವಕುಮಾರ್, ದಸಂಸ ಜಿಲ್ಲಾ ಸಂಚಾಲಕ

” ೬ ವರ್ಷಗಳ ಹಿಂದೆ ಕ್ರೀಡಾಂಗಣ ಹೋರಾಟ ಸಮಿತಿ ಮೂಲಕ ಹಿಂದಿನ ವರುಣ ಶಾಸಕ ಡಾ.ಯತೀಂದ್ರರವರಿಗೆ ಮನವಿ ಮಾಡಿ ಅವರನ್ನು  ಹಾಗೂ ಈಗಿನ ಸಂಸದ ಸುನಿಲ್ ಬೋಸ್ ಅವರನ್ನು ಬೆನ್ನತ್ತಿದ ಹಿನ್ನೆಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಕೆಲ ಸ್ಥಳಗಳನ್ನು ಗುರುತಿಸಲಾಗಿದೆ. ೫ ಕೋಟಿ ರೂ. ಅನುದಾನವೂ ಇದೆ. ಅದರಲ್ಲಿ ಕ್ರೀಡಾಂಗಣ ನಿರ್ಮಿಸಲು ಒತ್ತಾಯಿಸಿ ಮ್ಯಾರಥಾನ್ ನಡೆಯಲಿದೆ.”

 -ಎಂ.ರಮೇಶ್, ಹೋರಾಟ  ಸಮಿತಿ ಅಧ್ಯಕ್ಷ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

9 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

10 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

11 hours ago