Andolana originals

ಮಾರ್ಚ್.‌25ರಂದು ಶ್ರೀ ದೊಡ್ಡಮ್ಮತಾಯಿ, ಚಿಕ್ಕಮ್ಮತಾಯಿ ಹಬ್ಬ

ತಿ.ನರಸೀಪುರದ ಹಳೇ ಸಂತೇಮಾಳದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

 ಎಂ.ನಾರಾಯಣ್

ತಿ.ನರಸೀಪುರ: ಪಟ್ಟಣದ ಹಳೇ ಸಂತೇಮಾಳದಲ್ಲಿ ಮಾ.೨೫ರ ಮಂಗಳವಾರ ಶ್ರೀ ದೊಡ್ಡಮ್ಮತಾಯಿ, ಶ್ರೀ ಚಿಕ್ಕಮ್ಮತಾಯಿ ಅಮ್ಮನವರ ದೊಡ್ಡ ಹಬ್ಬ ವಿಶೇಷವಾಗಿ ನಡೆಯಲಿದ್ದು, ದೇವಾಲಯದ ಆಸುಪಾಸಿನ ಬಯಲು ಪ್ರದೇಶದಲ್ಲಿ ಹಬ್ಬ ಆಯೋಜನೆಗೊಳ್ಳುವ ಹಿನ್ನೆಲೆಯಲ್ಲಿ ಸಿದ್ಧತೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಶ್ರೀ ದೊಡ್ಡಮ್ಮತಾಯಿ, ಶ್ರೀ ಚಿಕ್ಕಮ್ಮತಾಯಿ ಅಮ್ಮನವರ ದೊಡ್ಡಹಬ್ಬ ವಿಶೇಷವಾಗಿ ನಡೆಯುತ್ತದೆ. ಗೋಪಾಲಪುರ ಹಾಗೂ ಹಳೇ ಪಟ್ಟಣದ ನಿವಾಸಿಗಳು ತಮ್ಮ ಊರನ್ನು ತೊರೆದು ಹಳೇ ಸಂತೇಮಾಳದ ಸುತ್ತಲಿನ ಬಯಲು ಪ್ರದೇಶದಲ್ಲಿ ಬಿಡಾರ ಹೂಡುತ್ತಾರೆ. ಅಲ್ಲಿಯೇ ಹಬ್ಬದ ಪ್ರಯುಕ್ತ ಅಡುಗೆಯನ್ನು ತಯಾರಿಸಿ, ದೇವಿಯರಿಗೆ ಎಡೆ ಇಡುತ್ತಾರೆ. ಬಂದ ನೆಂಟರಿಷ್ಟರನ್ನು ಆಹ್ವಾನಿಸಿ ಆತಿಥ್ಯವನ್ನು ನೀಡುತ್ತಾರೆ.

ನಂಬಿ ಆರಾಧಿಸುವ ಭಕ್ತರಿಗೆ ರೋಗರುಜಿನಗಳು ಬಾರದಂತೆ, ಪ್ರವಾಹವನ್ನು ತಡೆದು, ಕುಲಸ್ಥರ ನೆಲೆಯನ್ನು ರಕ್ಷಿಸಲು ಊರಿಗೆ ಕಾವಲಾಗಿ ನೆಲೆ ನಿಂತವರೇ ಶ್ರೀ ದೊಡ್ಡಮ್ಮತಾಯಿ, ಶ್ರೀ ಚಿಕ್ಕಮ್ಮತಾಯಿ ದೇವಿಯರು ಎಂಬ ನಂಬಿಕೆ ಇದೆ. ಕಾವೇರಿ ನದಿ ತೀರದಲ್ಲಿ ಪೂರ್ವಾಭಿಮುಖವಾಗಿ ಪ್ರತಿಷ್ಠಾಪನೆಗೊಂಡಿರುವ ದೇವಿಯರು ಸಾವಿರಾರು ಕುಲಸ್ಥರನ್ನು ಹೊಂದಿದ್ದು, ಈ ಭಾಗದ ನೆಚ್ಚಿನ ಆರಾಧ್ಯ ದೇವತೆಗಳಾಗಿದ್ದಾರೆ. ಪ್ರವಾಹ ಕಾಲದಲ್ಲಿ ವಾಸದ ನೆಲೆಗಳನ್ನು ರಕ್ಷಿಸಲು ಹಾಗೂ ವಾಂತಿ, ಭೇದಿ, ಕಾಲರಾದಂತಹ ಸಾಂಕ್ರಾಮಿಕ ರೋಗಗಳಿಂದ ಜನರನ್ನು ಕಾಪಾಡುತ್ತಾರೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ.

ದೇವಾಲಯಗಳ ನೆಲೆಬೀಡಾಗಿರುವ ಹಳೇ ಸಂತೇಮಾಳದಲ್ಲಿ ಮೂರ್ನಾಲ್ಕು ದಶಕಗಳಿಂದ ಪುಟ್ಟದೊಂದು ಗುಡಿಯಲ್ಲಿ ನೆಲೆಗೊಂಡಿರುವ ಶ್ರೀ ದೊಡ್ಡಮ್ಮತಾಯಿ, ಶ್ರೀ ಚಿಕ್ಕಮ್ಮತಾಯಿ ಅಮ್ಮನವರ ದೇವಾಲಯವನ್ನು ಭಕ್ತರು ಹಾಗೂ ಕುಲಸ್ಥರು ದೇಣಿಗೆ ಸಂಗ್ರಹಿಸಿ ನಿರ್ಮಾಣ ಮಾಡಿದ್ದಾರೆ. ಪ್ರತಿ ಮಂಗಳವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಪೂಜೆ ನಡೆಯುತ್ತದೆ. ಶುಕ್ರವಾರ ದೇವಿಯರಿಯರಿಗೆ ಎಣ್ಣೆ ದೀಪ ಹಚ್ಚಲಾಗುತ್ತದೆ. ಅಮಾವಾಸ್ಯೆ, ಹುಣ್ಣಿಮೆ ಹಾಗೂ ಹಬ್ಬದ ವಿಶೇಷ ದಿನಗಳಲ್ಲಿ ಪೂಜೆಗೆ ದೇವಾಲಯದ ಬಾಗಿಲು ತೆರೆದಿರುತ್ತದೆ. ಈ ದೇವಿಯರ ದರ್ಶನದಿಂದ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ಅಪಾರವಾದ ನಂಬಿಕೆ ಜನರಲ್ಲಿದೆ.

ದೇವಿಯರಿಗೆ ಸಿಹಿ, ಖಾರದ ಎಡೆ

ಹಬ್ಬದ ದಿನದಂದು ದೇವಾಲಯದಲ್ಲಿ ಇಡಲಾಗುವ ಸಿಹಿ ಮತ್ತು ಖಾರದ ಎಡೆಯನ್ನು ಊರಿನ ಆಚೆ ನಿಗದಿಪಡಿಸಿರುವ ಸ್ಥಳದಲ್ಲಿ ಅರ್ಚಕರು ಹಾಗೂ ಕುಲಸ್ಥರು ರಾತ್ರಿ ೧೦ ಗಂಟೆಗೆ ಇಟ್ಟು ತಿರುಗಿ ನೋಡದೆ ಬರುತ್ತಾರೆ. ಬೆಳಿಗ್ಗೆಯಾಗುವುದರೂಳಗೆ ಆ ಎಡೆ ಅಲ್ಲಿ ಇರುವುದಿಲ್ಲ. ಇದು ಹಬ್ಬದಲ್ಲಿ ಒಂದು ವಿಶೇಷ ಕೂಡ. ಮಾರಿಕಾಂಬೆ ದೇವಿಯರಿಗೆ ಮೇಕೆಯನ್ನು ಬಲಿಕೊಟ್ಟು, ಗೋಪಾಲಪುರ ಹಾಗೂ ಹಳೇ ಟೌನಿನಲ್ಲಿ ಪೀಡೆ ಮರಿ ಎಳೆಯುವುದು ವಾಡಿಕೆಯಾಗಿದೆ ಎಂದು ಯಜಮಾನರುಗಳಾದ ಶಾಂತರಾಜು, ಸತೀಶ್, ಪುರುಷಕಾರಿ ಮಹದೇವ, ಮಹದೇವಪ್ಪ, ಗೋಪಾಲಪುರ ರಾಜಣ್ಣ, ತಬಲ ಮೂರ್ತಿ, ಅರ್ಚಕ ದೇವರಾಜು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

24 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago