Andolana originals

ಮಂಗಳಮುಖಿ ವೇಷ; ಲೈಂಗಿಕ ಪಾಶ

೫ ತಿಂಗಳ ಹಿಂದೆ ಯುವಕನನ್ನು ಮೈಸೂರಿನಿಂದ ಅಪಹರಿಸಿ ಕರೆದೊಯ್ದಿದ್ದ ತಂಡ

ಮಂಗಳೂರಿನಿಂದ ತಪ್ಪಿಸಿಕೊಂಡು ಬಂದು ಲಷ್ಕರ್‌ ಠಾಣೆಗೆ ದೂರು 

ಮೈಸೂರು: ಹಾಡಹಗಲೇ ನಂಜನಗೂಡು ಯುವಕನೊಬ್ಬನನ್ನು ಮೈಸೂರಿನಿಂದ ಅಪಹರಿಸಿದ ಮಂಗಳಮುಖಿ ಹಾಗೂ ಆಕೆಯ ಕಡೆಯವರು, ಯುವಕನಿಗೂ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಲಕ್ಷಾಂತರ ರೂ. ಹಣ ಗಳಿಸಿರುವ ಬಗ್ಗೆ ದೂರು ದಾಖಲಾಗಿದೆ.

ನಂಜನಗೂಡಿನ ತ್ಯಾಗರಾಜ ಕಾಲೋನಿಯ ಯುವಕ ಅನಿಲ್‌ಕುಮಾರ್ ನೊಂದ ಯುವಕ. ಮಂಗಳೂರು ಮೂಲದ ಅನಿತಾ ಆರೋಪ ಹೊತ್ತ ಮಂಗಳಮುಖಿ. ೫ ತಿಂಗಳ ಹಿಂದೆ ಈ ಅಪಹರಣ ನಡೆದಿದೆ. ಅಪಹರಣಕ್ಕೊಳಗಾದ ಯುವಕ ರಾತ್ರಿ ವೇಳೆ ಮಂಗಳೂರಿನಿಂದ ತಪ್ಪಿಸಿಕೊಂಡು ಬಂದು ಲಷ್ಕರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಡೆದದ್ದಾದರೂ ಏನು?: ೫ ತಿಂಗಳ ಹಿಂದೆ ಕೆಲಸ ಹುಡುಕಿಕೊಂಡು ಬಂದಿದ್ದ ಅನಿಲ್‌ಕುಮಾರ್ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ನಂಜನಗೂಡು ಬಸ್‌ಗಾಗಿ ಕಾಯುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ಮಂಗಳಮುಖಿ ಅನಿತಾ ಮತ್ತು ತಂಡದವರು ಅನಿಲ್‌ಕುಮಾರ್‌ಗೆ ಮುಸುಕು ಹಾಕಿ ಮತ್ತು ಬರುವಂತೆ ಮಾಡಿ ಬಲವಂತವಾಗಿ ಕಾರಿನಲ್ಲಿ ಅಪಹರಿಸಿ ಮಂಗಳೂರಿಗೆ ಕರೆದೊಯ್ದಿದ್ದಾರೆ.

ನಂತರ ಆತನಿಗೆ ಸೀರೆ ತೊಡಿಸಿ, ಕಿವಿಗೆ ಓಲೆ, ಮೂಗುಬಟ್ಟು ಹಾಕಿಸಿ ಮಂಗಳಮುಖಿ ವೇಷ ಹಾಕಿ ಬಲವಂತವಾಗಿ ಬೀದಿಗಳಲ್ಲಿ ಅಂಗಡಿಗಳ ಮುಂದೆ ಭಿಕ್ಷೆ ಬೇಡಿಸಿದ್ದಾರೆ. ಆತನನ್ನು ಬಳಸಿ ಪ್ರತಿ ದಿನ ೨ ರಿಂದ ೩ ಸಾವಿರ ರೂ. ಸಂಪಾದಿಸಿದ್ದಾರೆ. ಇದರ ಜೊತೆಗೆ ರೀಲ್ಸ್ ತಯಾರಿಸಿ ಸಾಮಾಜಿಕ ಜಾಲತಾಣದಲ್ಲೂ ಅಪ್‌ಲೋಡ್ ಮಾಡಿದ್ದಾರೆ.

ಅಲ್ಲದೆ, ಮಂಗಳೂರು, ಕೇರಳ ಭಾಗಗಳಿಗೆ ಆತನನ್ನು ಕಳಿಸಿ ಲೈಂಗಿಕ ಕ್ರಿಯೆಗೂ ಬಳಸಿದ್ದಾರೆ. ಇದರಲ್ಲೂ ಅನಿಲ್‌ಕುಮಾರ್‌ನಿಂದ ಸಾವಿರಾರು ರೂ. ವಸೂಲಿ ಮಾಡಿದ್ದಾರೆ. ನಂತರ ಆಧಾರ್ ಕಾರ್ಡ್‌ನಲ್ಲಿ ಟ್ರಾನ್ಸ್‌ಜೆಂಡರ್ ಎಂದು ನಮೂದಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಸಹ ಅಧಿಕೃತ ಪ್ರಮಾಣಪತ್ರ ಕೊಡಿಸಿದ್ದಾರೆ. ಮುಂದಿನ ತಿಂಗಳು ಮುಂಬೈಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತವಾಗಿ ಮಂಗಳಮುಖಿಯಾಗಿ ಬದಲಾಯಿಸಲು ತೀರ್ಮಾನಿಸಿದ್ದರಂತೆ.

ಇದರ ಮಾಹಿತಿ ಅರಿತ ಅನಿಲ್ ಕುಮಾರ್ ಕರಾಳ ದಂಧೆಯ  ಕಪಿಮುಷ್ಠಿಯಿಂದ ಹೊರಬರಲು ನಿರ್ಧರಿಸಿ ತನ್ನ ಸಂಪಾದನೆ ೩ ಲಕ್ಷ ರೂ. ಕೊಡುವಂತೆ ಕೇಳಿದಾಗ ಅನಿತಾ ಉಲ್ಟಾ ಹೊಡೆದಿದ್ದಾರೆ. ತನ್ನ ಮನೆಯಿಂದ ೫ ಲಕ್ಷ ನಗದು ಚಿನ್ನಾಭರಣ ಕಳ್ಳತನ ಮಾಡಿರುವುದಾಗಿ ಸುಳ್ಳು ಕಂಪ್ಲೇಂಟ್ ದಾಖಲಿಸಿ ಜೈಲಿಗೆ ಹಾಕಿಸುತ್ತೇನೆಂದು ಅನಿತಾ ಬೆದರಿಸಿದ್ದಾರೆ. ಮನನೊಂದ ಅನಿಲ್‌ಕುಮಾರ್ ರಾತ್ರಿ ವೇಳೆ ಅಲ್ಲಿಂದ ತಪ್ಪಿಸಿಕೊಂಡು ನಂಜನಗೂಡು ಸೇರಿಕೊಂಡಿದ್ದಾನೆ. ಮತ್ತೆ ದಂಧೆ ಮಾಡಿಸಲು ಹವಣಿಸಿದ ಅನಿತಾ ಮಂಗಳಮುಖಿಯರನ್ನು ಅನಿಲ್‌ಕುಮಾರ್ ಮನೆಗೆ ಕಳಿಸಿ ಗಲಾಟೆ ಮಾಡಿಸಿದ್ದಾರೆ.

ಕಣ್ಣು ದೃಷ್ಟಿ ಕಡಿಮೆ ಇರುವ ಅನಿಲ್‌ಕುಮಾರ್‌ನಲ್ಲಿ ಯಾವುದೇ ಲೈಂಗಿಕ ದೌರ್ಬಲ್ಯ ಇಲ್ಲ. ಅನಿಲ್ ಕುಮಾರ್ ಮಂಗಳಮುಖಿಯಾಗಲು ಅನರ್ಹನಾಗಿದ್ದರೂ ಸಮಾಜ ಕಲ್ಯಾಣ ಇಲಾಖೆ ಟ್ರಾನ್ಸ್‌ಜಂಡರ್ ಪ್ರಮಾಣಪತ್ರ ಕೊಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ

ತನಿಖೆ ನಡೆಸುತ್ತಿದ್ದೇವೆ…: 

ಅನಿಲ್‌ಕುಮಾರ್ ಹೇಳುತ್ತಿರುವುದು ಸುಳ್ಳೋ ಅಥವಾ ಸತ್ಯವೋ ಎಂಬ ಗೊಂದಲವಿದೆ. ಈ ಸಂಬಂಧ ಮತ್ತಷ್ಟು ತನಿಖೆ ಅಗತ್ಯವಿದೆ. ಅಲ್ಲಿನ ಮಂಗಳಮುಖಿಯರು ಮಂಗಳೂರಿನ ಕಂಕನವಾಡಿ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈತ ಮಂಗಳಮುಖಿ ಎಂದು ಹೇಳಿಕೊಂಡು ನಮ್ಮ ಬಳಿ ಬಂದು ತೃತೀಯ ಲಿಂಗಿ ಪ್ರಮಾಣಪತ್ರ ಮಾಡಿಸಿಕೊಳ್ಳಲು ನಮ್ಮ ಸಹಾಯ ಪಡೆದಿದ್ದಾನೆ. ಮಂಗಳಮುಖಿ ಅಲ್ಲದಿದ್ದರೂ, ಸೌಲಭ್ಯ ಪಡೆಯಲು ಮುಂದಾಗಿದ್ದಾನೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಹೀಗಾಗಿ ಎರಡೂ ಕಡೆಯವರಿಂದ ಹೇಳಿಕೆ ಪಡೆದು ತನಿಖೆ ನಡೆಸಲಾಗುತ್ತದೆ. ಆತ ಹೇಳುತ್ತಿರುವುದು ಸತ್ಯವೇ ಆಗಿದ್ದಲ್ಲಿ ಖಂಡಿತ ಕ್ರಮ ತೆಗೆದುಕೊಳ್ಳುತ್ತೇವೆ.

-ಪೊಲೀಸ್ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

1 hour ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago