Andolana originals

ಮತ್ತಿಗೋಡಿನಲ್ಲಿ ದಸರಾ ಆನೆಗಳ ನಿತ್ಯ ದರ್ಶನ; 1 ಕೋಟಿ ರೂ. ವೆಚ್ಚದಲ್ಲಿ ಆನೆ ಶಿಬಿರ ಅಭಿವೃದ್ಧಿ

ಮೈಸೂರು: ಇನ್ನು ಅಭಿಮನ್ಯು ಸೇರಿದಂತೆ ದಸರಾ ಆನೆಗಳ ವೀಕ್ಷಣೆಗೆ ಮತ್ತೊಂದು ದಸರಾ ಬರುವ ತನಕ ಕಾಯಬೇಕಿಲ್ಲ. ದಸರಾ ಆನೆಗಳ ನೆಚ್ಚಿನ ತಾಣ ಮುತ್ತಿಗೋಡು ಆನೆ ಶಿಬಿರ ಸದ್ಯದಲ್ಲೇ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮತ್ತಿಗೋಡು ಆನೆ ಶಿಬಿರವನ್ನು ಪ್ರವಾಸಿಗರ ಆಕರ್ಷಣೆಗಾಗಿ 1 ಕೋಟಿ ರೂ. ವೆಚ್ಚದಲ್ಲಿ ಅತ್ಯಂತ ಸುಸಜ್ಜಿತವಾಗಿ ಅಭಿವೃದ್ಧಿಪಡಿಸಲಾಗಿದೆ.

ಇತ್ತೀಚೆಗೆ ಮೃತಪಟ್ಟ ಮೈಸೂರು ದಸರಾ ಆನೆ ಅರ್ಜುನ ಮತ್ತು ಮತ್ತೊಂದು ಆನೆ ಅಭಿಮನ್ಯುವನ್ನು ಆನೆಚೌಕೂರು ವಲಯ ವ್ಯಾಪ್ತಿಗೆ ಸೇರುವ ಮತ್ತಿಗೋಡಿನ ಶಿಬಿರದಲ್ಲೇ ಪಳಗಿಸಿದ್ದು ಹಲವು ಆನೆಗಳಿಗೆ ಆಶ್ರಯವಾಗಿರುವ ಮತ್ತಿಗೋಡು ಆನೆ ಶಿಬಿರ ಸಾರ್ವಜನಿಕ ಪ್ರವೇಶಕ್ಕೆ ಈವರೆಗೂ ಮುಕ್ತವಾಗಿರಲಿಲ್ಲ. ಆದರೂ ತಿತಿಮತಿ-ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರವಾಸಿಗರು ಮಾರ್ಗ ಮಧ್ಯೆ ಆನೆಗಳು ಕಾಣಿಸಿಕೊಂಡರೆ ದೂರದಲ್ಲೇ ನಿಂತು ನೋಡಿ, ಮುಂದೆ ಸಾಗುತ್ತಿದ್ದರು. ಇದೀಗ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸೂಕ್ತ ಮೂಲ ಸೌಕರ್ಯ, ತಂಗಲು ಅಗತ್ಯ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ.

ಆನೆ ಶಿಬಿರದ ಸುತ್ತಮುತ್ತಲಿನ ಸುಂದರ ವಾತಾವರಣವನ್ನು ಆಸ್ವಾದಿಸಲು ಅನು ಕೂಲವಾಗುವಂತೆ ವಾಕಿಂಗ್ ಪಾತ್, ಅಲ್ಲಲ್ಲಿ ಮುಕ್ತವಾದ ಕುಟೀರಗಳ ನ ನಿರ್ಮಿಸಲಾಗಿದೆ. ಇನ್ನು ಆನೆ ಶಿಬಿರದ ಪ್ರವೇಶ ದ್ವಾರದಲ್ಲಿ ನಿರ್ಮಿಸಿರುವ ಕಮಾನು ಕೂಡ ಆಕರ್ಷಕವಾಗಿದೆ. ಶಿಬಿರದ ಒಳಗೆ ಕಾಲಿಡುತ್ತಿದ್ದಂತೆ ಪರಿಸರದ ಮೇಲೆ ಆಗುತ್ತಿರುವ ಅತಿಕ್ರಮಣ ಕುರಿತು ಹಲವು ಭಿತ್ತಿಚಿತ್ರಗಳು ಗಮನ ಸೆಳೆಯುತ್ತವೆ.

1 ಕೋಟಿ ರೂ.ವೆಚ್ಚದಲ್ಲಿ ಶಿಬಿರ ಅಭಿವೃದ್ಧಿ: ರಾಜ್ಯ ಸರ್ಕಾರದ ಸುಮಾರು ಒಂದು ಕೋಟಿ ರೂ.ವೆಚ್ಚದಲ್ಲಿ ಮತ್ತಿಗೋಡು ಆನೆ ಶಿಬಿರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಶಿಬಿರದಲ್ಲಿ ಆನೆಗಳಿಗೆ ಆಶ್ರಯ ಮತ್ತು ಆಹಾರ ತಾಣಗಳು, ಶಿಬಿರಕ್ಕೆ ಸಮೀಪಿಸುವ ರಸ್ತೆ, ವಾಹನಗಳ ಪಾರ್ಕಿಂಗ್ ಸೌಲಭ್ಯ ಮತ್ತು ಮಾಹಿತಿ ಕೇಂದ್ರವನ್ನು ಸ್ಥಾಪಿಸಲಾಗಿದೆ, ಇದು ಈಗ ಪ್ರವಾಸಿಗರಿಗೆ ಮುಕ್ತವಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ಖಚಿತಪಡಿಸಿದ್ದಾರೆ.

ಆಧುನಿಕ ತಂತ್ರಜ್ಞಾನ ಬಳಕೆ: ಹಿಂದಿನಿಂದ ಇಂದಿನವರೆಗೂ ಮಾನವ ಹಾಗೂ ವನ್ಯಜೀವಿ ಸಂಘರ್ಷ ನಡೆಯುತ್ತಲೇ ಇದೆ. ಆದರೆ ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಕಾಡಾನೆಗಳಿಂದ ಸಾಕಷ್ಟು ಸಮಸ್ಯೆಗಳಾಗಿವೆ. ಈಗಾಗಲೇ ವಿಶೇಷವಾಗಿ ಅರಣ್ಯ ಇಲಾಖೆ ಪ್ರಾಣಿಗಳ ಸಂಘರ್ಷ ಕುರಿತು ಆಗಾಗ್ಗೆ ಅರಿವು ಮೂಡಿಸುವ ಸಭೆಯನ್ನು ಮಾಡುತ್ತಿದ್ದಾರೆ. ಅಲ್ಲದೇ ವಿಶೇಷವಾಗಿ ಮತ್ತಿಗೋಡು ಆನೆ ಕ್ಯಾಂಪ್‌ನ್ನು ಕೂಡ ಜಾಗೃತಿ ಮೂಡಿಸುವ ಕೇಂದ್ರವನ್ನಾಗಿ ರೂಪಿಸಲಾಗುತ್ತಿದೆ. ಕ್ಯಾಮೆರಾಗಳು ಮತ್ತು ಡ್ರೋನ್‌ಗಳು ಸೇರಿದಂತೆ ಶಿಬಿರವು ಸರ್ವ ಸಜ್ಜಿತ ಸಲಕರಣೆಗಳೊಂದಿಗೆ ಸಿದ್ಧಗೊಂಡಿದೆ. ಒಂದು ವರ್ಷದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದ್ದು, ಶಿಬಿರವು ಪ್ರಮುಖ ಸ್ಥಳದಲ್ಲಿ ಇರುವುದರಿಂದ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುವ ಸಾಧ್ಯತೆಯಿದೆ.

2 -3 ಗಂಟೆ ಕಾಲ ಕಳೆಯಬಹುದು: ಆನೆಗಳ ಶಿಬಿರವಾಗಿರುವುದರಿಂದ ಇಲ್ಲಿ ಪ್ರವಾಸಿಗರು ಆನೆಗಳ ಆರೈಕೆ ಬಗೆಯನ್ನು ವೀಕ್ಷಿಸಬಹುದು. ಮುಂಜಾನೆಯೇ ಶಿಬಿರಕ್ಕೆ ತೆರಳಿದರೆ ಆನೆಗಳ ಮಜ್ಜನ ವೀಕ್ಷಿಸಬಹುದು. ವಿಶೇಷವಾಗಿ ಶಿಬಿರವು
2-3 ಗಂಟೆಗಳ ಕಾಲ ಉಳಿದುಕೊಂಡು ಗಜರಾಜರ ಬಗ್ಗೆ ತಿಳಿದುಕೊಳ್ಳಲು ಇರುವ ಉತ್ತಮ ಮಾರ್ಗವಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಪ್ರವಾಸಿಗರಿಗೆ ಇರುವ ವಿಶೇಷ ವೀಕ್ಷಣೆ: ದಸರಾ ಆನೆಗಳು ಸೇರಿದಂತೆ ಇತರೆ ಆನೆಗಳ ಕುರಿತು ಸಮಗ್ರ ಮಾಹಿತಿ, ವನ್ಯಜೀವಿಗಳಿಗೆ ಬಳಸುವ ಕೋವಿ, ಕಾರ್ಯಾಚರಣೆಗೆ ಬಳಸುವ ಸಲಕರಣೆಗಳು, ಕ್ಯಾಮೆರಾ ಟ್ಯಾಪ್, ಡ್ರೋನ್‌ಗಳು, ವೈರ್‌ಲೆಸ್ ಉಪಕರಣಗಳು, ಆನೆಗಳ ದೈನಂದಿನ ಚಟುವಟಿಕೆಗಳು, ಆನೆಗಳ ಆರೈಕೆ, ಅಹಾರ ಪದ್ಧತಿ ಬಗ್ಗೆಯೂ ಇಲ್ಲಿ ಮಾಹಿತಿ ದೊರೆಯುತ್ತದೆ.

ಕುಡಿಯುವ ನೀರು, ಸುಸಜ್ಜಿತ ಶೌಚಾಲಯ: ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸುಸಜ್ಜಿತ ಶೌಚಾಲಯ ಇದೆ. ಆನೆ ಕ್ಯಾಂಪಿನ ಉದ್ಯಾನವನದ ಸಸಿಗಳಿಗೆ ನೀರುಣಿಸಲಾಗುತ್ತಿದೆ. ಬರಡಾಗಿದ್ದ ಸ್ಥಳವನ್ನು ಗಮನಸೆಳೆಯುವಂತೆ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಕೆರೆಗೆ ಪಕ್ಕದಲ್ಲಿರುವ ಹೊಳೆಯಿಂದ ನೀರಿನ ಸಂಪರ್ಕ ಕಲ್ಪಿಸಿ ಈ ಪ್ರದೇಶವನ್ನು ಇನ್ನಷ್ಟು ಆಕರ್ಷಣೀಯವನ್ನಾಗಿ ಮಾಡಿದ್ದಾರೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

6 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

6 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

7 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

7 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

7 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

8 hours ago