Andolana originals

ಓದುಗರ ಪತ್ರ: ಕರುನಾಡಿನ ಸಾಧಕರಿಂದ ದಸರಾ ಉದ್ಘಾಟನೆಯಾಗಲಿ

ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.

ಕರುನಾಡಿನಲ್ಲಿಯೇ ರಾಜಕೀಯ, ಸಾಹಿತ್ಯ, ಕ್ರೀಡೆ, ಸಮಾಜಸೇವೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದವರಿದ್ದಾರೆ. ಈ ಬಾರಿ ಮಹಿಳೆಯರಿಂದಲೇ ದಸರಾ ಉದ್ಘಾಟಿಸಬೇಕು ಎಂಬ ಆಲೋಚನೆ ಇದ್ದರೆ ನಮ್ಮ ರಾಜ್ಯದಲ್ಲಿಯೇ ಇರುವ ಮಹಿಳಾ ಸಾಧಕಿಯರಲ್ಲಿ ಒಬ್ಬರನ್ನು ಆಹ್ವಾನಿಸಬಹುದು. ಹಾಗೆ ಮಾಡದೆ ಒಂದು ಪಕ್ಷದ ಸರ್ವೋಚ್ಚ ನಾಯಕಿಯಾಗಿರುವ ಸೋನಿಯಾ ಗಾಂಧಿ ಅವರನ್ನು ದಸರಾ ಉದ್ಘಾಟಕರಾಗಿ ಆಹ್ವಾನಿಸಲು ಮುಖ್ಯಮಂತ್ರಿಗಳು ಚಿಂತನೆ ನಡೆಸಿರುವುದು ಸರಿಯಲ್ಲ.

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟ ವಿಚಾರವಾದರೂ ನಾಡಹಬ್ಬವಾಗಿರುವ ದಸರಾ ಉದ್ಘಾಟನೆಗೆ ನಮ್ಮ ರಾಜ್ಯದ ಸಾಧಕರೇ ಸೂಕ್ತ ಅನಿಸುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ನಾಡಿನ ಸಾಧಕರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಆ ವಿಚಾರದಲ್ಲಿ ರಾಜಕಾರಣ ಸಲ್ಲದು.

– ಎಂ.ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago